ಊರ್ಮಿಳೆ

ಕವಿಯ ಬರಹದಕ್ಷರದಲಿ
ನಿನ್ನ ಬಾಳಿನಕ್ಕರ ತೋರಲಾಗದು…
ಓ ಸೌಮಿತ್ರಾ ಪ್ರಿಯೆ ಊರ್ಮಿಳಾ…

ಎಲ್ಲೆ ಇರಲಿ, ಹೇಗೆ ಇರಲಿ
ಒಲಿದವಗೆ ಕೊರಳ ನೀಡಿದ ಚಿತ್ಕಳಾ
ಶಬ್ದಮೀರಿದ ನಿಃಶಬ್ಧದಲ್ಲಿ
ತವಸಿಯಾಗಿ ಸಾಗಿದೆ,
ಸಂಗ ತೊರೆದ ನಿಸ್ಸಂಗದಲ್ಲಿ
ಚೈತನ್ಯವಾಗಿ ಸೇರಿದೆ…,
ಇದ್ದು ಇರದಾ ನಂದನದಲಿ
ಸಿದ್ಧ ಸಾಧನೆ ಬಯಸಿದೆ….
ಕಣ್ಣರೆಪ್ಪೆಯಂಚಿನಲ್ಲಿ
ಇನಿಯನನಿಟ್ಟು ತೂಗಿದೆ,
ಮೇಘ ಸಾಲಿನ ಮಾಲೆಯಲ್ಲಿ
ಶ್ರೀ ಸಂದೇಶವ ಕೋರಿದೆ
ನೀನೇ ಧನ್ಯಳು, ನೀನೇ ಮಾನ್ಯಳು,
ನೀನೇ ಶೂನ್ಯದ ಬೆಳದಿಂಗಳು.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಹೋಗಿ ನೋಡುವ ಬಾರೆ
Next post ಜಗತ್ತು ಬದಲಾತು

ಸಣ್ಣ ಕತೆ

  • ಮಿಂಚು

    "ಸಾವಿತ್ರಿ, ಇದು ಏನು? ನನ್ನಾಣೆಯಾಗಿದೆ. ಹೀಗೆ ಮಾಡಬೇಡ! ಇದು ಒಳ್ಳೆಯದಲ್ಲ. ಬಿಡು, ಬಿಡು...! ನಾಲ್ಕು ಜನ ನೋಡಿದರೆ ಏನು ಅಂದಾರು?" ಅನ್ನಲಿ ಏನೇ ಅನ್ನಲಿ ನಾನು ಯಾವ… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಎರಡು…. ದೃಷ್ಟಿ!

    ದೀಪಾವಳಿಯು ಸಮೀಪಿಸಿದ್ದಿತು. ದೀಪಾವಳಿಯನ್ನು ನಾವು ಪಂಚಾಗ ನೋಡದೆ ತಿಳಿದುಕೊಳ್ಳಬಹುದು. ಅದು ಹೇಗೆ? ದೀಪಾವಳಿ ಪೂರ್ವರಂಗದ ಸುಳಿವು ನಮಗೇ ಗೊತ್ತೇ ಆಗುವದು. ಮನೆಯಲ್ಲಿ ಕರಚೀ ಕಾಯಿ, ಚಿರೋಟಿಗಳನ್ನು ಕರಿಯುವ… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…