ಪಂಪನ ಶಾಂತಿಯ ತೋಟ

ಪಂಪನ ಶಾಂತಿ ತೋಟದಲಿಂದು
ಬರೀ ಕೊಲೆ ಸುಲಿಗೆ
ಧರ್ಮ ಇಟ್ಟಿಗೆ ಗುಡಿಯೆಂದು
ಸಾಗಿದೆ ಹಿಂಸೆ ಎಲ್ಲಿಗೆ

ಛಲದಭಿಮಾನದಲಿ ಬಲೀ ಕುಲವು
ಭೂತ ಗಣದ ನರ್ತನ
ಕಮರಿ ತ್ಯಾಗ ವೈರಾಗ್ಯವೆಲ್ಲವು
ಸಗಿದೆ ಹಿಂಸಾ ಕೀರ್ತನ

ಕವಿಕಲಿ ಸವ್ಯಸಾಚಿಯಿಂದ
ನಾವು ಕಲಿತದ್ದೇನು
ಮನ ಮತಯುದ್ಧದಿಂದ
ನಾವು ಗಳಿಸಿದ್ದೇನು

ಯುದ್ಧ ಭೂಮಿಯ ಪಡೆ
ಕರ್ಣರ ನಿಂತು ಕೊಲಿಸಿ
ಗಡಿ ಗುಜರಾತುಗಳೆಲ್ಲೆಡೆ
ಮತಾಯುಧ ಪಡೆ ನಿಲ್ಲಿಸಿ

ಪಂಪನ ಶಾಂತಿ ತೋಟದಲ್ಲಿ
ಮತವೆಂದರೆ ಧರ್ಮ
ಗೋಳ ಮುಕ್ಕಾಲು ಅಶಾಂತಿಯಲ್ಲಿ
ತಿಳಿಯದು ಓಟಿನ ಮರ್ಮ

ಶಾಂತಿಯ ತೋಟ ತುಂಬೆಲ್ಲ
ಆಯುಧ ಫಲ ಪೈರು
ಚಿಗುರು ಬೆಳದಿಂಗಳೊಳಗೆ
ಖಡ್ಗ ಕಾರುಬಾರು

(ಒತ್ತಾಸೆ – ಅನ್ನಪೂರ್ಣ ವೆಂಕಟನಂಜಪ್ಪ, ತುಮಕೂರು)
*****

 

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ತುಂತುರು ಸೋನೆಯಲ್ಲೊಂದು ಪ್ರೇಮಕಥೆ..
Next post ಹೋಗಿ ನೋಡುವ ಬಾರೆ

ಸಣ್ಣ ಕತೆ

  • ಗೃಹವ್ಯವಸ್ಥೆ

    ಬೆಳಗು ಮುಂಜಾನೆ ಎಂಟು ಗಂಟೆಗೆ ಹೊಗೆಬಂಡಿಯು XX ಸ್ಟೇಶನಕ್ಕೆ ಬಂದು ನಿಂತಿತು. ಸಂತ್ರಾಧಾರವಾಗಿ ಮಳೆ ಹೊಡೆಯುತ್ತಿರುವದರಿಂದ ಪ್ರಯಾಣಸ್ಥರು ಬೇಸತ್ತು ಗಾಡಿಯಿಂದ ಯಾವಾಗ ಇಳಿಯುವೆವೋ ಎಂದೆನ್ನುತ್ತಿದ್ದರು. ನಿರ್ಮಲಾಬಾಯಿಯು ಅವಳ… Read more…

  • ರಾಧೆಯ ಸ್ವಗತ

    ಈಗ ಸೃಷ್ಟಿಕರ್ತನ್ನು ದೂಷಿಸುತ್ತಾ ಕಾಲ ಕಳೆಯುತ್ತಿದ್ದೇನೆ ಕೃಷ್ಣಾ. ಹೆಂಗಸರಿಗ್ಯಾಕೆ ಅವರ ಪ್ರಿಯಕರರಿಗಿಂತ ಹೆಚ್ಚು ಆಯುಸ್ಸನ್ನು ಅವನು ಕೊಡುತ್ತಾನೋ? ನೀನು ಹೇಳುತ್ತಿದ್ದುದು ಮತ್ತೆ ಮತ್ತೆ ನೆನಪಾಗುತ್ತಿದೆ: "ರಾಧೆ, ಈ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

cheap jordans|wholesale air max|wholesale jordans|wholesale jewelry|wholesale jerseys