ಜಗತ್ತು ಬದಲಾತು

ಜಗತ್ತು ಬದಲಾತು
ಬುದ್ದಿಯ ಕಲಿಬೇಕು ||

ಮಡಿ ಮೈಲಿಗೆಯ
ಕೈಬಿಡಬೇಕು
ದೆವ್ವ ಪಿಶಾಚಿಯ
ಭಯ ಬಿಡಬೇಕು ||

ಜಾತಿ ಭೇದ ಮರೆತು
ಸಹಮತ ತರಬೇಕು
ರಾಹು ಗುಳಿಕಾಲಗಳ
ಲೆಕ್ಕವ ಬಿಡಬೇಕು ||

ಹಲ್ಲಿಯ ಶಕುನ ನಂಬಬೇಡಿ
ತೀರ್ಥಧೂಪ ನಂಬಿಕೆ ಬಿಡಿ
ಆರೋಗ್ಯ ಕೆಟ್ಟರೆ ಆಸ್ಪತ್ರೆ
ಬುದ್ದಿ ಕೆಟ್ಟರೆ ಶವಯಾತ್ರೆ ||

ಮಕ್ಕಳ ಶಾಲೆಗೆ ಕಳಿಸಬೇಕು
ಪೌಷ್ಠಿಕ ಆಹಾರ ನೀಡಬೇಕು
ಶುದ್ಧ ಗಾಳಿ ಶುದ್ಧ ನೀರಿಗೆ
ಪರಿಸರವನ್ನು ಕಾಪಾಡಬೇಕು ||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಊರ್ಮಿಳೆ
Next post ಏಡಿ ಮತ್ತು ಧವಳಪ್ಪನ ಗುಡ್ಡ

ಸಣ್ಣ ಕತೆ

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಆನುಗೋಲು

    ರೈಲು ನಿಲ್ದಾಣದಲ್ಲಿ ನಿಂತಿತು! "ಪೇಪರ! ಡೇಲಿ ಪೇಪರ!........ಟಾಯಿಮ್ಸ, ಫ್ರೀ ಪ್ರೆಸ್, ಸಕಾಳ! ಪ್ಲಾಟ ಫಾರ್ಮ ಮೇಲಿನ ಜನರ ನೂರೆಂಟು ಗದ್ದಲದಲ್ಲಿ ಈ ಧ್ವನಿಯು ಎದ್ದು ಕೇಳಿಸುತ್ತಿತ್ತು. ಹೋಗುವವರ… Read more…

  • ಯಾರು ಹೊಣೆ?

    "ಧಡ್....... ಧಡಲ್........ ಧಡಕ್" ಗಾಡಿ ನಿಂತಿತು. ಹೊರಗೆ ಮೋರೆಹಾಕಿ ನೋಡಿದೆ. ಕತ್ತಲು ಕವಿದಿತ್ತು. ಚುಕ್ಕೆಗಳು ಪಕಪಕ ಕಣ್ಣು ಬಿಡುತ್ತಿದ್ದವು. ಮೂಡಲ ಗಾಳಿ "ಸಿಳ್" ಎಂದು ಬೀಸುತ್ತಿತ್ತು. ನಾನು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys