ಕರುಣೆಯೇ ಇಲ್ಲ

ಕರುಣೆಯೇ ಇಲ್ಲವೆಂದುಕೊಂಡಿದ್ದೆ ಜಗದಲ್ಲಿ
ನೀನು ಸಾಂತ್ವನಗೊಳಿಸಿದ ಮೇಲೆ ಅದು ನಿಜವಲ್ಲ

ನಶ್ವರ, ಜೀವ ಸಾಕಿನ್ನು, ಬದುಕಬಾರದೆಂದಿದ್ದೆ
ಆ ಭಾವ ತಪ್ಪೆನಿಸಿ ನೀನು ನನ್ನ ಬದುಕಿಸಿದೆ

ಸಂಗಾತಕೆ ಜೀವವೇ ಇಲ್ಲವೆಂಬೆನ್ನ ಹಂಬಲ
ನೀನು ಜೊಗೆಯಾದ ಪರಿಯ ನಾನೇಗೆ ನಂಬಲ

ಜೀವನವ ಸಾವು ಗೆದ್ದಿತೆಂದು ಸದಾ ಚಿಂತಿಸಿದೆ
ಅಲ್ಲ ಅಲ್ಲ ಸಾಧ್ಯವಿಲ್ಲೆಂದು ನೀನದ ಹುಸಿ ಮಾಡಿದೆ

ಅಯ್ಯೋ, ಅನಾಥನೆಂದುಕೊಂಡೆ ಜೀವನದಲ್ಲಿ
ನೀ ನನ್ನ ಎದೆಗಪ್ಪಿದ ಮೇಲೆ ಅದೂ ನಿಜವಲ್ಲ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಹಾನಗರ ರಸ್ತೆ – ಮರುಚೇತನ
Next post ಶೂನ್ಯ

ಸಣ್ಣ ಕತೆ

  • ವಲಯ

    ಅವಳ ಕೈ ಬೆರಳುಗಳು ನನ್ನ ಮುಖದ ಮೇಲೆ ಲಯಬದ್ಧವಾಗಿ ಚಲಿಸುತ್ತಿವೆ. ಕಂಗಳ ಮೇಲೆ ಅದೊಂದು ತರಹ ಮಂಪರು ಮೆತ್ತ-ಮೆತ್ತಗೆ ಹಾರಾಡತೊಡಗುತ್ತಿದೆ! ನಾಳೆ ಹೋಗಬೇಕಾದ ‘ಪಾರ್ಟಿ’ ಗೆ ಈಗಾಗಲೇ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಶಾಕಿಂಗ್ ಪ್ರೇಮ ಪ್ರಕರಣ

    ಅವನು ಅವಳನ್ನು ದಿನವೂ ತಪ್ಪದೇ ನೋಡುತ್ತಿದ್ದ. ಅವಳು ಕಾಲೇಜಿಗೆ ಹೋಗುವ ಹೊತ್ತಿಗೆ ಅವಳನ್ನು ಹಿಂಬಾಲಿಸುತ್ತಿದ್ದ. ಕಾಲೇಜು ಬಿಡುವ ಹೊತ್ತಿಗೆ ಗೇಟಿನ ಎದುರು ಕಾದು ನಿಂತು ಮತ್ತೆ ಹಿಂಬಾಲಿಸುತ್ತಿದ್ದ.… Read more…

  • ವಾಮನ ಮಾಸ್ತರರ ಏಳು ಬೀಳು

    "ಏಳು!" ಅಂದರು ವಾಮನ ಮಾಸ್ತರರು. ರಾಜಪ್ಪ ಏಳಲಿಲ್ಲ. ಎಂದಿನಂತೆ ಕಿಟಿಕಿಯ ಹೊರಗೆ ಹೆದ್ದಾರಿಯಲ್ಲಿ ಹೋಗುತ್ತಿದ್ದ ವಾಹನಗಳನ್ನೂ ದಾರಿಹೋಕರನ್ನೂ ನೋಡುತ್ತ, ಡೆಸ್ಕಿನ ಮೇಲೆ ಬಲಗೈಯ ಸೊಂಟು ಊರಿ, ಕೈಯಮೇಲೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

cheap jordans|wholesale air max|wholesale jordans|wholesale jewelry|wholesale jerseys