ಕರುಣೆಯೇ ಇಲ್ಲ

ಕರುಣೆಯೇ ಇಲ್ಲವೆಂದುಕೊಂಡಿದ್ದೆ ಜಗದಲ್ಲಿ
ನೀನು ಸಾಂತ್ವನಗೊಳಿಸಿದ ಮೇಲೆ ಅದು ನಿಜವಲ್ಲ

ನಶ್ವರ, ಜೀವ ಸಾಕಿನ್ನು, ಬದುಕಬಾರದೆಂದಿದ್ದೆ
ಆ ಭಾವ ತಪ್ಪೆನಿಸಿ ನೀನು ನನ್ನ ಬದುಕಿಸಿದೆ

ಸಂಗಾತಕೆ ಜೀವವೇ ಇಲ್ಲವೆಂಬೆನ್ನ ಹಂಬಲ
ನೀನು ಜೊಗೆಯಾದ ಪರಿಯ ನಾನೇಗೆ ನಂಬಲ

ಜೀವನವ ಸಾವು ಗೆದ್ದಿತೆಂದು ಸದಾ ಚಿಂತಿಸಿದೆ
ಅಲ್ಲ ಅಲ್ಲ ಸಾಧ್ಯವಿಲ್ಲೆಂದು ನೀನದ ಹುಸಿ ಮಾಡಿದೆ

ಅಯ್ಯೋ, ಅನಾಥನೆಂದುಕೊಂಡೆ ಜೀವನದಲ್ಲಿ
ನೀ ನನ್ನ ಎದೆಗಪ್ಪಿದ ಮೇಲೆ ಅದೂ ನಿಜವಲ್ಲ

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಮಹಾನಗರ ರಸ್ತೆ – ಮರುಚೇತನ
Next post ಶೂನ್ಯ

ಸಣ್ಣ ಕತೆ

  • ಧರ್ಮಸಂಸ್ಥಾಪನಾರ್ಥಾಯ

    ಕಪಿಲಳ್ಳಿಯ ಏಕೈಕ ಸಂರಕ್ಷಕ ಕಪಿಲೇಶ್ವರನ ವಾರ್ಷಿಕ ರಥೋತ್ಸವದ ಮುನ್ನಾದಿನ ಧಾರ್ಮಿಕ ಪ್ರವಚನವೊಂದನ್ನು ಏರ್ಪಡಿಸಲೇಬೇಕೆಂದೂ, ಇಲ್ಲದಿದ್ದರೆ ಜಾತ್ರಾ ಮಹೋತ್ಸವಕ್ಕೆ ತನ್ನ ಸಪೋರ್ಟು ಮತ್ತು ಕೋ-ಆಪರೇಶನ್ನು ಬಿಲ್ಲು ಕುಲ್ಲು ಸಿಗಲಾರದೆಂದೂ,… Read more…

  • ಅವರು ನಮ್ಮವರಲ್ಲ

    ಪೇದೆ ಪ್ರಭಾಕರ ಫೈಲುಗಳನ್ನು ನನ್ನ ಟೇಬಲ್ ಮೇಲೆ ಇಟ್ಟು, ‘ಸರ್ ಸಾಹೇಬರು ನಿಮ್ಮನ್ನು ಕರೆಯುತ್ತಿದ್ದಾರೆ’ ಎಂದು ಹೇಳಿ ಮಾಮೂಲಿನಂತೆ ಹೊರಟು ಹೋದ. ಸಮಯ ನೋಡಿದೆ. ೧೦:೩೦ ಗಂಟೆ.… Read more…

  • ಏಡಿರಾಜ

    ಚಲೋ ವಂದು ಅರಸು ಮನಿ, ಗಂಡ-ಹೆಂಡ್ತಿ ದೊಡ್ಡ ಮನ್ತಾನದಲ್ ಆಳ್ಕತಿದ್ರು. ಆವಾಗೆ ಆ ಅರಸೂಗೆ ಗಂಡ್ ಹುಡ್ಗರಿಲ್ಲ. ಸಂತತ್ಯಲ್ಲ, ಇದ್ರದು ನಿಚ್ಚಾ ಕೆಲ್ಸಯೇನಪ್ಪ ಅರಸು ಹಿಂಡ್ತಿದು, ಮನಿ… Read more…

  • ಅಮ್ಮ

    ‘ಅಮ್ಮನ್ಗೆ ಯಿಡೀ ರಾತ್ರೆಲ್ಲ ವಾಂತಿ ಭೇದಿ ವುಬ್ಸ ಆಯಾಸ... ಕುತ್ರೂಸಾ... ಬಾಳಾ ಯೆಚ್ಕುಡ್ಮೆಯಾಗಿ ರಾಮ್ಪಾರ್ದ ಡಾಕಿಟ್ರಾತ್ರ ತೋರ್ಸಿದ್ರು ಗುಣಾಗಿಲ್ಲ! ನೀ ಆದಷ್ಟು ಗಡಾನೇ ವೂರ್ಗೆ ಬಾಣ್ಣ...’ ಸೇಕ್ರಿ,… Read more…

  • ದುರಾಶಾ ದುರ್ವಿಪಾಕ

    "ಒಳ್ಳೇದು, ಅವನನ್ನು ಒಳಗೆ ಬರಹೇಳು" ಎಂದು ಪ್ರೇಮಚಂದನು- ಘನವಾದ ವ್ಯಾಪಾರಸ್ಥನು- ಆಢ್ಯತೆಯಿಂದ, ತಾನು ಆಡುವ ಒಂದೊಂದು ಶಬ್ದವನ್ನು ತೂಕಮಾಡಿ ಚಲ್ಲುವಂತೆ ಸಾವಕಾಶವಾಗಿ ನುಡಿದನು. ಬಾಗಿಲಲ್ಲಿ ನಿಂತಿದ್ದ ವೃದ್ಧ… Read more…