Home / ಲೇಖನ / ಹಾಸ್ಯ / ಕಲಿಯುಗದ ಹರಿಶ್ಚಂದ್ರ ಅರ್ಥಾತ್ ಸಾಕ್ಷೀದಾರ

ಕಲಿಯುಗದ ಹರಿಶ್ಚಂದ್ರ ಅರ್ಥಾತ್ ಸಾಕ್ಷೀದಾರ

(ವಿಜಾಪುರ ಡೋಣಿಸಾಲಿನ ಭಾಷೆಯಲ್ಲಿದೆ)

ರಾಮಣ್ಣ- ನಟ್ಟ ಕಡದಾದ್ರೂ ಖರೇತನದಿಂದ ಹೊಟ್ಟೀ ತುಂಬಿಕೋ ಬೇಕಂತ ಶಾಸ್ತ್ರಾ ಹೇಳ್ಳಾಕ ಬಂದಾರು ಶಾಸ್ತ್ರಾನ ಏ. ಯಾರು ಕೇಳಿದ್ರ ನನ್ನ, ನಟ್ಟು ಕಡೂಮುಂದಽ. ಎಷ್ಟ ನಶಿಕ್ಲೆ ಹೋದ್ರೂ ತಡಾಯಾಕಂತ ಕೇಳವ್ರಽ ಮತ್ತ ನಟ್ಟ ಕಡದ ಮ್ಯಾಲ ಹೆಂಟಿ ಉಳಿದೂವು ಪಳಿ ಉಳಿದೂವು ಗುದ್ಲಿ ನೆಟ್ಗ ಇಳಿಸಿಲ್ಲಾಽ ಬಿಸಲ್ನೆತ್ತಿಮ್ಯಾಗ ಬಂದಿಲ್ಲಾಽ ಇನ್ನೂ ಆರತಾಸ ಆಗಿಲ್ಲಾ ಒಂದಽ ಎರಡಽ ನೂರನೆವಾ ಹೇಳಿ ಎರಡು ಸೇರ ಸರಗ ಜೋಳ ಕೂಲಿ ಅಳೀಬೇಕಾದ್ರ ಮೂರ್‍ಕೆರೀ ನೀರ್‍ಕುಸ್ಬಿಡತಿದ್ರಪಾ, ಗೋಳು. ನಟ್ಟಿನ ಹೊಲದಾಗ ಕಾಕುಳ್ಳ ಕೂಡಿಸಿ ಚಾ ಮಾಡಿ ಕುಡದ್ದ್ರ ತಮ್ಮಪ್ಪನ ಗಂಟಽ ಹೋದ್ಹಾಂಗ ಮಾಡತಿದ್ದ್ರು. ಎಕ್ಕೀ ಎಲೀ ಬತ್ತಿ ಕಟ್ಟಿ ತಂಬಾಕ ಸೇದಿದ್ರ ಕಂಣು ಕೆಂಪ ಮಾಡ್ತಿದ್ರಣ್ಣವರು. ಅವಽ.

ಈ ಗ್ಹಾಂಗಾಗೇತಿ? ಗಳಿಗ್ಗೊಮ್ಮೆ ರಾಮಣ್ಣಾ! ಚುಟ್ಟಾ ಬೇಕಽ ಬಿಳಿ ಬಿತ್ತಿಬೇಕಽ ಅಂತ ಕೇಳೇ ಕೇಳ್ಸೂದು. ಹರ್‍ಯಾಗ ಎಳಾಣ ಚಾದಂಗ್ಡಿ ತಿಂದಷ್ಟ ಕಾರಾ, ಕುಡದಟ್ಟಚಾ. ಎರಡೂ ಹೊತ್ತು ಕಾನಾವಳಿ ಊಟಾ ಕಟ್ಟೀ ತುದಿಗೆ ನಿಂದ್ರಗೊಡ್ತಿದ್ದಿಲ್ಲ ನಮ್ಮನ್ನ ವಕೀಲರಮನ್ಯಾಗ. ಅದಽ ಈಗ ವಕೀಲರ ಮನೀಗೆ ಹೋಗಾಣಾ. “ಮ್ಯಾಲೆ ಬಾ ರಾಮಣ್ಣಾ ಇಲ್ಲಿ ಕೂಡಬಾ ಅಲ್ಲಿ ಕೂಡ ಬಾ. ಅಂತ ವಕೀಲರು ಕಾರಕೂನರು ಎಲ್ಲಾರು ಕ್ಯೂವರಽ. ನನಗೂ ಇದೆಲ್ಲಾ ಗತ್ತು ಗೊತ್ತೈತಿ. ಹಗರ ಎದ್ದು ಈಗ ಒಂಜರಾ ಪ್ಯಾಟ್ಯ್ಯಾಗ ದಗದೈತಿ ಹೋಗಿ ಬರ್‍ತೀನಂತ ಎದ್ದ ಏಳತೀನು. ಏಳಾಣ ಹೀಂಗ ಮಜಾಆಗ್ತೈತಿ, ಎಲ್ಯಾರೆ ಸಾಕ್ಷೀ ಒಡದಗಿಡದೀತಂತ ಬೆನ್ನ ಹತ್ತತಾರ.

ಎಲ್ಹೊಂಟಿ ರಾಮಣ್ಣಾ ಅಂತ ಕುಂಡ್ರ ಸತಾರ. ಇಲ್ಲಪಾ. ಹಿರ್‍ಯಾಳಿಗೊಂದು ಗಚ್ಚಿನ್ದಡೀ ಸೀರಿ ಬೇಕು. ಪ್ಯಾಟ್ಯಾಗ ಹೋಗ್ಬರ್‍ತೀನಂತ ಅಂತಿದೇನು. ನನ್ನ ಬೆನ್ಹತ್ತಿ ಬಂದು ಸೀರಿ ಕೊಡಸ್ತಾರು ಖಣಽ ಕೊಡಸ್ತಾರು. ಎಲ್ಲಾ ಕೊಡಿಸಿ ಮತ್ತ ತಿರಗಿ ವಕೀಲರ ಮನೀಗೆ ಕರಕೊಂಡು ಬರತಾರ. ಈಗತ್ತು, ಮಾಡದ ಹೊರ್‍ತ ಗತೀನ ಇಲ್ಲಾ. ಇಲ್ದಿದ್ರ ಮನೀಖರ್ಚ ನಡಿಯೂ ಬಗೀ ಹ್ಯಾಂಗ?

ಹೌದು ಹೌದು ನಾವು ರೊಕ್ಕಾತಗೊಂಡ ಸಾಕ್ಷೀಬರ್‍ತೀವಿ. ನಮ್ಮನೀ ಅನ್ನ ಉಂಡು, ನೋಡದ ಕೇಳದ ನೋಡಿದ್ಹಾಂಗ ಕೇಳಿದ್ಹಾಂಗ ಹೇಳ ಬೇಕಾದ್ರ ಪುಗಸಟ್ಟೆ ಐತೆ? ಅದರಾಗ ಅವರ ವಕೀಲ ಹಡ್ಡಿ ಹಡ್ಡಿ ಕೇಳಾಂವಾ. ಎಲ್ನಿಂತ್ತಿದ್ದಿ? ಎಲ್ಕುಂತಿದ್ದಿ? ಮಾರಿ ಯಾವ ದಿಕ್ಕಿಗಿತ್ತು? ಬೆನ್ನಯಾವ ದಿಕ್ಕಿಗಿತ್ತು? ಮಾಡಹಾಕಿತ್ತೋ? ಬಿಸಲ್ಬಿದ್ದಿತ್ತೋ? ಏಡಕ್ಯಾರಿದ್ರು? ಬಲಕ್ಯಾರಿದ್ರು? ಹಿಂದೇನಿತ್ತು? ಮುಂದೇನಿತ್ತು? ಅಂತ ಒಂದಽ ಎರಡಽ ಸಾವಿರ ಕೇಳಾಂವಾ. ಅದಕ್ಕೆಲ್ಲಾಕೂ ಜವಾಬ ಕೂಡಬೇಕಾದ್ರ ಮನಿಷ್ಯಾ ಹುಶ್ಯಾರ ಇರಬೇಕು.

ಇಲ್ಲಿದ್ರ ಅಂದಾಕರಾ ಬೆರಕಿ ಮಕ್ಕಳು ವಕೀಲರು. ಹಗರಕಽ ಒಯ್ದು ತೆಗ್ಗಿನ್ಯಾಗ ಹಾಕ್ತಾರು. ಸಾಕ್ಷಿದಾರನ ದಗದ ಬಲು ಬೆಂಡ್ಲ ದಗದ. ಸುಳ್ಳಿಂದು ಖರೇ ಹಾಂಗ ಹೇಳಬೇಕು. ಖರೇ ಇದ್ರೂ ಸುಳ್ಳು ಕಾಣ್ಣಾಂಗಿದ್ರ, ಅದನ್ನು ಹೇಳಬಾರದು. ಹಿಂಗ ಮಾಡಿದ್ರನ ರಾಮಣ್ಣಾ, ರಾಮಣ್ಣಾ ಅಂತ ಕರಕೊಂಡು ಹೋಗಿ ಗೋದಿರೊಟ್ಟಿ ಬಾಳೀಹಣ್ಣ ತಿನಸ್ತಾರ, ಇಲ್ದಿದ್ರ ಪುಂಡೀಪಲ್ಯಾ ತಂಗಳ ರೊಟ್ಟಿ ಸಿಗಬೇಕಾದ್ರ ಕಣ್ಣೀರ ಕಪಾಳಿಗೆ ಬರ್‍ತಾವ. ತಿಳಿತಽ, ನಟ್ಟ ಗಿಟ್ಟು ಎಲ್ಲಾಸುಳ್ಳು. ಸುಳ್ಳ ಸಾಕ್ಷೀ ನುಡೀಲಾಕ ಕಲೀಬೇಕು ಆಂದ್ರನಽ ನಾಕೊಪ್ಪತ್ತು ದೇವರು ಹೊಟ್ಟಿ ಸಾಗಸ್ತಾನ, ತೀಳೀತಽ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...