Home / ಲೇಖನ / ಹಾಸ್ಯ / ಆತಿಥ್ಯ

ಆತಿಥ್ಯ

(ಹಳ್ಳಿ ಯೂರ ಸಭ್ಯಗೃಹಸ್ಥರೊಬ್ಬರ ಮನೆ; ಅತಿಥಿಗಳೊಬ್ಬರು ಮನೆಗೆ ಬರುವರು ಮನೆಯ ಯಜಮಾನನು ಗಡಬಡಿಸಿ ಎದ್ದು ನುಡಿಯುವನು)

“ಆಲಲ ರಾಯರ ಬರೋಣಾಯ್ತೇನು?…. ಬರಬೇಕ…. ಬರಬೇಕು. ಇದೇನಿದು ಬಡವರ ಮನೀಗೆ ಭಾಗೀರಥಿ ಬಂದಹಾಂಗ?…. ಇಲ್ಲೆ ,ಇಲ್ಲೆ ಮ್ಯಾಲೆ ಕೂಡ್ರಿ ರಾಯರಽ! ಎಲೋ… ಯಾರಾವರು….? ದಿಂಬೆಲ್ಲಿ ಅದನೋ….? ತಾ; ತಾ, ಲಗೂನಽ ತಾ! ಏನಪಾ… ಈ ಹುಡಗೋರು….! ಇಟ್ಟದ್ದು ಇಟ್ಟಲ್ಲಿ ಇರಗೊಡೂಹಾಂಗಽ ಇಲ್ಲ! ಕೂಡ್ರಿ ರಾಯರಽ ಕೂಡ್ರಿ….! ಹುಡುಗೂರ ಕಾಲಾಗ ಬ್ಯಾಸತ್ತು ಹೋಗಿನ್‌ ನೋಡ್ರಿ… ಅತು ಹಾಸಗೀ ಸುರಳೀಗೆ ನಂಬಿ ಕೂತುಗೊಳ್ರಿ! ಏನು ಚಹ ಆಗಬೇಕೊ, ಕಾಫಿಯೋ, ಹಾಲೊ….? ಏನುಬೇಕು ಹೇಳ್ರಿ! ಒಲ್ಲೇ ಅಂದ್ರ ಕೇಳೂಹಾಂಗಿಲ್ಲ… ಬಡವರ ಮನೀಗೆ ಬಂದು ಏನು ಹಾಂಗಽ ಹೋಗತೀರಾ? ನಾಳೆ ನಿಮ್ಮ ಮನೀ ಮುಂದ ನಾಲಗೀ ಕಿತ್ತಿಗೊಂಡು ಪ್ರಾಣಾ ಕೊಟ್ಟೇನು!”

“ಏ…! ಒಳಗ ಹೇಳೊ ರಾಯರಿಗೆ ಸ್ವಲ್ಪ ಸಜ್ಜಗೀ ಮಾಡಂತ ಹೇಳು….! ಮತ್ತ ಸಜ್ಜಗೀ ತುಪ್ಪದಾಗ ಕರೀಲಿಕ್ಕೆ ಹೇಳು….! ಇಲ್ಲದಿದ್ದರ ಏನ ಕೇಳತೀ ಅದು ಡೊಣಿಸಾಲ ಹೆಣ್ಣು! ನುಚ್ಚು ಕುದಿಸಿ ಇಟ್ಟೀತು…! ಸೀ ಸಜ್ಜಗೀ ಅಂತ ಹೇಳು ಮತ್ತೆ…! ಇಲ್ನೋಡು, ಒಮಗಿಲೆ ಓಡಬ್ಯಾಡ! ಕಿವಿ ಕಿತ್ತೇನು… ಪೂರಾ ಕೇಳಿಕೊಂಡು ಹೋಗು! ಬರೇ ಸೀ ಆದರ ನೆಟ್ಟಗಾಗೂದಿಲ್ಲ, ಸ್ಪಲ್ಪ ಅವಲಕ್ಕೀ ಒಗ್ಗರಣೀ ಹಾಕಲಿಕ್ಕೆ ಹೇಳು….! ಎಲೆಯಲ್ಲಾ! ಗೌಡರ ಹಿತ್ತಲಾಗಿಂದಽ ಕರೀಬೇವು ಇಸಗೊಂಡು ಬಾರೊ-ಅವಲಕ್ಕಿಗೆ-ಅವಲಕ್ಕಿ ಘಮಾ ಘಮಾ ಆಗಲಿ!…. ಚಹಾಕ್ಕ ಒಂದು ಬ್ಯಾರೆ ಎಸರಿಡಲಿಕ್ಕೆ ಹೇಳು ಸುಳ್ಳಽ ತಡಾ ಮಾಡಬ್ಯಾಡ್ರಿ!”

“ಎಲೊ-ಅಳಮಾರೀಗಂಡೇ! ಗಂಡಸಽ ನೀನು?…. ‘ಸಕ್ರಿಲ್ಲಾ-ಚಹಾ ಇಲ್ಲಾ-’ ಹೇಳಲಿಕ್ಕೆ ಬಂದಾನ ಅತುಗೋತ….! ಹೋಗು ಓಡು ಜಲ್‌ದಿ…, ಚೆನಬಸಪ್ಪನ ಅಂಗಡಿಗೆ ಹೋಗು, ನಾ ಹೇಳಿನಿ ಅಂತ ಹೇಳು! ಅತಗೋತಾಽ ತಿರಿಗಿ ಬರಬ್ಯಾಡ! ಕಾಲು ಮುರದೀನು, ಹಾಂಗ ಹೀಂಗ ಅಂತ ಚೆನಬಸಪ್ಪ ಅದಽ ಮಾತು ಹಚ್ಚಾನು…., ರಾಯರು ಬಂದು ಕೂತಾರಂತ ಹೇಳು, ಇಲ್ನೋಡು…. ಹಂಗಽ ನಾಲ್ಕು ಅಡಕಿ ಒಂದ್ನಾಲ್ಕು ಲವಂಗ, ಒಂದು ಕಾಚಿನ ಹಳ್ಳು ಕೊಡಂತ ಹೇಳು-ಚೆನಬಸಪ್ಪಗ… ಲಗೂ ಬಾ, ಬಿಸಲಾಯ್ತು….!

“ಏನಂತಾರೋ ಒಳಗ….? ತುಪ್ಪಿಲ್ಲಂತ….? ಇಷ್ಟೊತ್ತು ಏನು ಮಾಡತಿದ್ಲು….! ಹೇಳಲಿಕ್ಕೇನಾಗಿತ್ತು-ಹುಣ್ಣಾಗಿತ್ತೇನು ಬಾಯಿಗೆ….? ತುಪ್ಪ ತೀರಿಹೋಯ್ತೇನು? ಇದಽ, ಇಂದ ಇನ್ನೂ ಮಂಗಳವಾರ… ಶನಿವಾರ ಸಂತೀ ದಿನ ಮೂರು ಸೇರು ಬೆಣ್ಣೆ ತಂದಿತ್ತು….; ಏನು ಎರಕೋತಾಳೋ ಏನೊ ತುಪ್ಪದಲೆ! ಎಷ್ಟು ತಂದರೂ ಈಡಽ ಆಗೋದಿಲ್ಲ…! ಹೋಗೋ ದಾಮೂ; ಕುಲಕರ್ಣ್ಯಾರ ಮನ್ಯಾಗ ತುಪ್ಪಾ ಇಸಗೊಂಡು ಬಾ… ಸಂತೀ ದಿವಸ ಕೊಡತೀವಂತ್‌ ಹೇಳು! ಕೂಡ್ರಿ ರಾಯರಽ ತಡಾ ಅತ್ಯು! ಹತ್ತ ನಿಮಿಷದಾಗಽ ಚಹಾ ಆಗತದ…; ಎಂದೂ ಬಾರದವರು. ಹಂಗಽ ಕಳಿಸೂದು ನಮ್ಮ ಧರ್ಮಽ?

“ಏನದೂ….? ಗುರೂಗುರೂ ಸಪ್ಪಳ್ಯಾತರದು? ಸಜ್ಜಗೀ ಒಡೀತಾರ….? ಬೇಶ್‌ ಬೇಶ್‌ ಇದ್ದರಿಂಥಾ ಹೆಣ್ಣು ಇರಬೇಕು….; ಲಗೂ ಆಗಲೀ ಅಂತ ಹೇಳು. ರಾಯರು ಹಸದಿದ್ದರು….”

(ಒತ್ತಾಯದ ಕೆಮ್ಮನ್ನು ತಂದುಕೊಂಡು ಖೇಕರಿಸಿ ಉಗಳಲೆಂದು ಹೊರಗೆ ಹೋದ ರಾಯರು ಮೊಚ್ಚೆಯ ಪರಿವೆಯಿಲ್ಲದೆ ಊರಿನ ವರೆಗೆ ಓಡಿ ಬಿಟ್ಟರು.)
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...