Home / ಲೇಖನ / ಹಾಸ್ಯ / ಆತಿಥ್ಯ

ಆತಿಥ್ಯ

(ಹಳ್ಳಿ ಯೂರ ಸಭ್ಯಗೃಹಸ್ಥರೊಬ್ಬರ ಮನೆ; ಅತಿಥಿಗಳೊಬ್ಬರು ಮನೆಗೆ ಬರುವರು ಮನೆಯ ಯಜಮಾನನು ಗಡಬಡಿಸಿ ಎದ್ದು ನುಡಿಯುವನು)

“ಆಲಲ ರಾಯರ ಬರೋಣಾಯ್ತೇನು?…. ಬರಬೇಕ…. ಬರಬೇಕು. ಇದೇನಿದು ಬಡವರ ಮನೀಗೆ ಭಾಗೀರಥಿ ಬಂದಹಾಂಗ?…. ಇಲ್ಲೆ ,ಇಲ್ಲೆ ಮ್ಯಾಲೆ ಕೂಡ್ರಿ ರಾಯರಽ! ಎಲೋ… ಯಾರಾವರು….? ದಿಂಬೆಲ್ಲಿ ಅದನೋ….? ತಾ; ತಾ, ಲಗೂನಽ ತಾ! ಏನಪಾ… ಈ ಹುಡಗೋರು….! ಇಟ್ಟದ್ದು ಇಟ್ಟಲ್ಲಿ ಇರಗೊಡೂಹಾಂಗಽ ಇಲ್ಲ! ಕೂಡ್ರಿ ರಾಯರಽ ಕೂಡ್ರಿ….! ಹುಡುಗೂರ ಕಾಲಾಗ ಬ್ಯಾಸತ್ತು ಹೋಗಿನ್‌ ನೋಡ್ರಿ… ಅತು ಹಾಸಗೀ ಸುರಳೀಗೆ ನಂಬಿ ಕೂತುಗೊಳ್ರಿ! ಏನು ಚಹ ಆಗಬೇಕೊ, ಕಾಫಿಯೋ, ಹಾಲೊ….? ಏನುಬೇಕು ಹೇಳ್ರಿ! ಒಲ್ಲೇ ಅಂದ್ರ ಕೇಳೂಹಾಂಗಿಲ್ಲ… ಬಡವರ ಮನೀಗೆ ಬಂದು ಏನು ಹಾಂಗಽ ಹೋಗತೀರಾ? ನಾಳೆ ನಿಮ್ಮ ಮನೀ ಮುಂದ ನಾಲಗೀ ಕಿತ್ತಿಗೊಂಡು ಪ್ರಾಣಾ ಕೊಟ್ಟೇನು!”

“ಏ…! ಒಳಗ ಹೇಳೊ ರಾಯರಿಗೆ ಸ್ವಲ್ಪ ಸಜ್ಜಗೀ ಮಾಡಂತ ಹೇಳು….! ಮತ್ತ ಸಜ್ಜಗೀ ತುಪ್ಪದಾಗ ಕರೀಲಿಕ್ಕೆ ಹೇಳು….! ಇಲ್ಲದಿದ್ದರ ಏನ ಕೇಳತೀ ಅದು ಡೊಣಿಸಾಲ ಹೆಣ್ಣು! ನುಚ್ಚು ಕುದಿಸಿ ಇಟ್ಟೀತು…! ಸೀ ಸಜ್ಜಗೀ ಅಂತ ಹೇಳು ಮತ್ತೆ…! ಇಲ್ನೋಡು, ಒಮಗಿಲೆ ಓಡಬ್ಯಾಡ! ಕಿವಿ ಕಿತ್ತೇನು… ಪೂರಾ ಕೇಳಿಕೊಂಡು ಹೋಗು! ಬರೇ ಸೀ ಆದರ ನೆಟ್ಟಗಾಗೂದಿಲ್ಲ, ಸ್ಪಲ್ಪ ಅವಲಕ್ಕೀ ಒಗ್ಗರಣೀ ಹಾಕಲಿಕ್ಕೆ ಹೇಳು….! ಎಲೆಯಲ್ಲಾ! ಗೌಡರ ಹಿತ್ತಲಾಗಿಂದಽ ಕರೀಬೇವು ಇಸಗೊಂಡು ಬಾರೊ-ಅವಲಕ್ಕಿಗೆ-ಅವಲಕ್ಕಿ ಘಮಾ ಘಮಾ ಆಗಲಿ!…. ಚಹಾಕ್ಕ ಒಂದು ಬ್ಯಾರೆ ಎಸರಿಡಲಿಕ್ಕೆ ಹೇಳು ಸುಳ್ಳಽ ತಡಾ ಮಾಡಬ್ಯಾಡ್ರಿ!”

“ಎಲೊ-ಅಳಮಾರೀಗಂಡೇ! ಗಂಡಸಽ ನೀನು?…. ‘ಸಕ್ರಿಲ್ಲಾ-ಚಹಾ ಇಲ್ಲಾ-’ ಹೇಳಲಿಕ್ಕೆ ಬಂದಾನ ಅತುಗೋತ….! ಹೋಗು ಓಡು ಜಲ್‌ದಿ…, ಚೆನಬಸಪ್ಪನ ಅಂಗಡಿಗೆ ಹೋಗು, ನಾ ಹೇಳಿನಿ ಅಂತ ಹೇಳು! ಅತಗೋತಾಽ ತಿರಿಗಿ ಬರಬ್ಯಾಡ! ಕಾಲು ಮುರದೀನು, ಹಾಂಗ ಹೀಂಗ ಅಂತ ಚೆನಬಸಪ್ಪ ಅದಽ ಮಾತು ಹಚ್ಚಾನು…., ರಾಯರು ಬಂದು ಕೂತಾರಂತ ಹೇಳು, ಇಲ್ನೋಡು…. ಹಂಗಽ ನಾಲ್ಕು ಅಡಕಿ ಒಂದ್ನಾಲ್ಕು ಲವಂಗ, ಒಂದು ಕಾಚಿನ ಹಳ್ಳು ಕೊಡಂತ ಹೇಳು-ಚೆನಬಸಪ್ಪಗ… ಲಗೂ ಬಾ, ಬಿಸಲಾಯ್ತು….!

“ಏನಂತಾರೋ ಒಳಗ….? ತುಪ್ಪಿಲ್ಲಂತ….? ಇಷ್ಟೊತ್ತು ಏನು ಮಾಡತಿದ್ಲು….! ಹೇಳಲಿಕ್ಕೇನಾಗಿತ್ತು-ಹುಣ್ಣಾಗಿತ್ತೇನು ಬಾಯಿಗೆ….? ತುಪ್ಪ ತೀರಿಹೋಯ್ತೇನು? ಇದಽ, ಇಂದ ಇನ್ನೂ ಮಂಗಳವಾರ… ಶನಿವಾರ ಸಂತೀ ದಿನ ಮೂರು ಸೇರು ಬೆಣ್ಣೆ ತಂದಿತ್ತು….; ಏನು ಎರಕೋತಾಳೋ ಏನೊ ತುಪ್ಪದಲೆ! ಎಷ್ಟು ತಂದರೂ ಈಡಽ ಆಗೋದಿಲ್ಲ…! ಹೋಗೋ ದಾಮೂ; ಕುಲಕರ್ಣ್ಯಾರ ಮನ್ಯಾಗ ತುಪ್ಪಾ ಇಸಗೊಂಡು ಬಾ… ಸಂತೀ ದಿವಸ ಕೊಡತೀವಂತ್‌ ಹೇಳು! ಕೂಡ್ರಿ ರಾಯರಽ ತಡಾ ಅತ್ಯು! ಹತ್ತ ನಿಮಿಷದಾಗಽ ಚಹಾ ಆಗತದ…; ಎಂದೂ ಬಾರದವರು. ಹಂಗಽ ಕಳಿಸೂದು ನಮ್ಮ ಧರ್ಮಽ?

“ಏನದೂ….? ಗುರೂಗುರೂ ಸಪ್ಪಳ್ಯಾತರದು? ಸಜ್ಜಗೀ ಒಡೀತಾರ….? ಬೇಶ್‌ ಬೇಶ್‌ ಇದ್ದರಿಂಥಾ ಹೆಣ್ಣು ಇರಬೇಕು….; ಲಗೂ ಆಗಲೀ ಅಂತ ಹೇಳು. ರಾಯರು ಹಸದಿದ್ದರು….”

(ಒತ್ತಾಯದ ಕೆಮ್ಮನ್ನು ತಂದುಕೊಂಡು ಖೇಕರಿಸಿ ಉಗಳಲೆಂದು ಹೊರಗೆ ಹೋದ ರಾಯರು ಮೊಚ್ಚೆಯ ಪರಿವೆಯಿಲ್ಲದೆ ಊರಿನ ವರೆಗೆ ಓಡಿ ಬಿಟ್ಟರು.)
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...