ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?

ತೂಕಡಿಕೆಯನು ಕಳೆಯದೇಕೆ ಕುಳಿತಿಹೆ ಗೆಳೆಯ?
ಸಾಕು, ಸುತ್ತಲು ನೋಡು ಕಣ್ತೆರೆದು ನಿಂದು;
ಲೋಕದಲಿ ವಂದೆ ಮಾತರಮೆಂಬುದೊಂದೆ ಮಾ
ತೀ ಕಿವಿಯನೊಡೆಯುತಿರೆ ಉಚ್ಛಳಿಸಿ ಬಂದು.

ಮತಜಾಲದಲ್ಲಿ ಸಿಲುಕಿ, ಅತಿ ಜಾತಿಯಲ್ಲಿ ಕುಲುಕಿ,
ಗತಿಗೆಟ್ಟು ಸರ್‍ವರಲಿ ನೀನಾದೆ ಹಿಂದು;
ಪತಿತರಿಗೆ ಕೈಗೊಟ್ಟು ಭಾರತ ಧ್ವಜ ನೆಟ್ಟು
ಪಥದೋರಿ ಬಂಗಾಲಿ ಕಾಯುತಿರೆ ಮುಂದು.

ನುಗ್ಗು ನುಗ್ಗುತ ಪರರು ನುಗ್ಗುತ್ತೆ ಬರುತಿಹರು;
ಬಗ್ಗಿರದೆ ಬಾಗುವುದೆ ನಿನಗಾದುದಿಂದು?
ಹಗ್ಗವಿಲ್ಲದ ಕಟ್ಟು, ಬೆತ್ತವಿಲ್ಲದ ಪೆಟ್ಟು,
ಒಗ್ಗಿತೇ ಈ ಗತಿಯು ಸವಿವಿಷವ ತಿಂದು?

ಕಿತ್ತು ಬಿಡು ಸಂದೇಹ, ಇತ್ತುಬಿಡು ಧನ ದೇಹ,
ಮಾತೃಭೂಮಿಯ ಪದಾರ್ಚನೆಗೆ ಬಲವಂದು.
ಹೊತ್ತ ಕಳೆಯಲು ಬೇಡ, ಭ್ರಾಂತಿಗೊಳದಿರು ಮೂಢ!
ಸತ್ತಿರುವೆ ಏತಕೀ ಜೀವನದೊಳಿಂದು?

ಚಿತ್ತವ್ಯಸನಾಕುಲೆಯು ಕುತ್ತಿಗೆಯ ಸಂಕಲೆಯ
ಕತ್ತರಿಸಿ ತನ್ನ ಸೆರೆ ಬಿಡಿಸಬೇಕೆಂದು,
ನೆತ್ತಿಯಲಿ ಬೊಟ್ಟಿಡದೆ, ಬಿರುದುಬಾವಲಿ ತೊಡದೆ,
ಅತ್ತತ್ತು ಹಲುಬುತಿರೆ ಭೂಮಾತೆ ನೊಂದು.

ಸತ್ತಿತೇ ಸಾಹಸವು? ಬತ್ತಿತೇ ಧೃತಿರಸವು?
ಮತ್ತೆ ಮಡಿದಾ ಕರ್ಣನಾ ಬೆನ್ನ ಹಿಂದು
ಎತ್ತ ಪೋದುದು ಪರಶುರಾಮನಾ ತೋಳ್ವಿರಿಸು?
ನೆತ್ತರೊಳಗಿಲ್ಲವೇ ವಿಕ್ರಮದ ಬಿಂದು?

ಕಳವಾದ ಮೇಲ್ನೀನು ಕಳವಳಿಸಿ ಫಲವೇನು?
ಕಳೆದಪುದು ನಿನ್ನ ಸ್ವಾತಂತ್ರ್ಯಮಣಿಯೊಂದು.
ಕೆಳಕೋಟೆ ಕೈಸೋಕೆ ಕಹಳೆ ಕೂಗುವುದೇಕೆ?
ಕಳಚಿಬಿಡು ಅಧ್ಯಾತ್ಮನಿದ್ರೆ ಮಮ ಬಂಧು.

ಎದ್ದೇಳು, ಎದ್ದೇಳು! ನಿದ್ದೆಗಣ್ಣನು ಕೀಳು;
ಹೊದ್ದಿರ್ದ ವೇದಗಂಬಳಿ ಮೂಲೆಗ್ಹೊಂದು.
ಎದ್ದು ಬರುತಿಹ ಭಾನು, ಎದ್ದಿತೈ ಜಾಪಾನು?
ಬಿದ್ದುಕೊಂಡಿರುವೇಕೆ ಕತ್ತಲೆಯೊಳಿಂದು?

ತಳರು ಭರತ ಕುಮಾರ, ಕೊಳುಗುಳದಲತಿವೀರ,
ಸೆಳೆ ಮಿಂಚಿನಸಿಯ ತೆಗೆ, ರಣಕೆ ಬಳಿಸಂದು!
ಮಳೆ ರಕುತದಲ್ಲಿ ಬೀಳೆ, ಬೆಳೆ ಕಲಿಗಳಿಂದೇಳೆ,
ಭಳಿರೇ ಭಾರತವರ್ಷ ಸೌಭಾಗ್ಯಮಂದು.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಅಹವಾಲು
Next post ಮನುಷ್ಯನ ಬದುಕಿನಲ್ಲಿ

ಸಣ್ಣ ಕತೆ

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

  • ಟೋಪಿ ಮಾರುತಿ

    "ಏ ಕಾಗಿ, ಕಾಳೀ ಮಗನ! ಯಾಕ ಕೂಗ್ತೀಯಾ?" ಭಾವಿಯಲ್ಲಿಯ ಹಗ್ಗ ಮೇಲೆ ಕೆಳಗೆ ಹೋಗುತ್ತಿರುತ್ತದೆ. ಒಂದು ಮೊಳ ಹಗ್ಗ ಸೇದಿದರೆ ಅರ್‍ಧ ಮೊಳ ಒಳಗೆ ಸೇರಿರುತ್ತದೆ. "ಥೂ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕಳ್ಳನ ಹೃದಯಸ್ಪಂದನ

    ಅದು ಅಪರಾತ್ರಿ ೨ ಘಂಟೆ ಸಮಯ. ಎಲ್ಲರೂ ಗಾಢ ನಿದ್ರೆಯಲ್ಲಿದ್ದರು. ಊರಿನಿಂದ ಸ್ವಲ್ಪ ದೂರವಾಗಿದ್ದ ಕಲ್ಯಾಣ ನಗರದ ಬಡಾವಣೆ, ಅಷ್ಟಾಗಿ ಹತ್ತಿರ ಹತ್ತಿರವಲ್ಲದ ಮನೆಗಳು, ಒಂದು ವರ್ಷದ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…