ಸತ್ಯ ಸೀಮೆಗೆ ತಾಯೆ ನಡಿಸೆನ್ನ

ಮಳೆ ಹನಿಯ ಬಿಡು ಹೂಗಳಲಿ, ಮರ
ಗಳ ಹಸುರು ಹಚ್ಚೆಯಲಿ, ಕಡಲಿನ
ಬಿಳಿ ನೊರೆಗಳಂಚಿನಲಿ ಮಿರುಗುವ ಸೀರೆಯನು ತಳೆದ,
ಹೊಳೆವ ಹೊಳೆಗಳ ಗಳದ ಸರದಲಿ
ಝಳದ ಹಿಮಗಿರಿಮಕುಟದಲ್ಲಿ ಥಳ
ಥಳೆವ ರಮಣಿಯೆ! ಜನ್ಮಧರಣಿಯೆ! ಭರತಭೂಮಣಿಯೇ!

ಹೊತ್ತಿಸಿದೆನೌ ಮುಂಚಿನಾಳಕೆ
ವೆತ್ತ ಬೀರರ ಪೂರ್ವದರಸರ
ಹೊತ್ತ ನಿನ್ನುದರವನು; ಧರ್ಮಾಮೃತದ ಬೋಧಕರ
ಹೆತ್ತ ನಿನ್ನೀಬಸುರು, ನನ್ನನು
ಹೆತ್ತು ಹಡೆಯಿತು ವಿಷವ; ಸೀಗೆಯ
ಬಿತ್ತು ಮೊಳೆತಂತಾಯ್ತು ಬಾಳೆಯ ಬುಡದಿ ನನ್ನಿಂದ!

ಕತ್ತಿವೀರರು ನಿನ್ನ ಹಗೆತಲೆ
ಯೊತ್ತಿ, ರಣದಲಿ ಜಯಿಸಿ, ಕುಂಕುಮ
ನೆತ್ತರಿನ ಬೊಟ್ಟಿಟ್ಟು ಶೌರ್ಯದ ಹಣೆಯ ನಡುವಿನಲಿ,
ಮತ್ತೆ ಕೀರ್ತಿಯ ಕಾಲ್ಗೆ ಗೆಜ್ಜೆಯ
ಸುತ್ತಿ ಬೆಳಗಿದ ನಿನ್ನ ಮುಖದಲಿ
ಬಿತ್ತು ನನ್ನೆದೆಯೊಳಗೆ ತುಂಬಿದ ಕತ್ತಲೆಯ ನೆರಳು.

ಮೆರೆದೆನೌ ಹೊಂಗೋಳ ಕೈಯಲಿ
ಮೆರೆದೆನೌ ಮಾಯೆಯಲಿ ಹೊಟ್ಟೆಯ
ಹೊರೆದೆನೌ, ನನ್ನೆಲುಬು ಮಾಂಸವ ನಾನೆ ಉಂಡುಂಡು!
ತೊರೆದೆನೌ ನನ್ನವರ ಮುಟ್ಟಿದೆ
ಒರೆದೆನೌ ಪರತಂತ್ರ ಪಾಠವ
ಬರೆದೆನೌ ನಿನ್ನಯ ಲಲಾಟದಿ ದಾಸ್ಯಮುದ್ರೆಯನು!

ಕದ್ದ ಕಳ್ಳನು ಕೆಡುಕನಾದರು
ಮುದ್ದು ಮಗನಲೆ ತಾಯಿಗಾತನ
ನೊದ್ದು ಬಿಡುವಳೆ? ತಾಯೆ! ನೋಡೌ ಕರುಣದಿಂದೀಗ!
ನಿದ್ದೆಯಿಂದೆಚ್ಚೆತ್ತೆ, ಹೋ! ಹೋ!
ತಿದ್ದಿಕೊಳ್ಳಲು ಹೊತ್ತಿದೇ! ನೀ
ನಿದ್ದು ಕೈಗೊಟ್ರೆನಗೆ ಕಲಿಸೌ ನಿನ್ನ ಸೇವೆಯನು!

ನನ್ನ ಹಸಿ ಮೈದೊಗಲ ಜೋಡನು
ನಿನ್ನಡಿಗೆ ಜೋಡಿಸುವೆ; ಗುಡಿಸುವೆ
ನನ್ನ ಕೂದಲ ಚೌರಿಯಲಿ ನಿನ್ನಡಿಯ ಧೂಳಿಯನು;
ನನ್ನ ಮನದಲ್ಲಿ ಹಿಡಿವೆ ನಿನ್ನನು!
ಇನ್ನು ಕುಳ್ಳಿರ್ದೀ ಮನೋರಥ
ವನ್ನು ಬೇಗನೆ ನೂಕಿ ನಡೆವೆನು ಸುಖವ ಮೇರುವಿಗೆ!

ಎಲ್ಲಿ ಸಾಹಸ ಸತ್ವದಳತೆಗೆ
ಬಳ್ಳವಾಗದೊ ಮೈಯ ಬಣ್ಣವು,
ಎಲ್ಲಿ ಅನ್ಯಾಯಕ್ಕೆ ಕತ್ತಿಯು ಕೊಡದೊ ಬೆಂಬಲವ,
ಎಲ್ಲಿ ಆತ್ಮೋನ್ನತಿಯ ಹಾದಿಗೆ
ಕಲ್ಲು ಮುಳ್ಳನ್ನಿಡಿರೊ, ಆ ಸುಖ
ಸಲ್ಲಲಿತ ಸಮ ಸತ್ಯ ಸೀಮೆಗೆ ತಾಯೆ ನಡಿಸೆನ್ನಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬುದ್ಧಿವಾದ
Next post ಕತ್ತಲಲ್ಲಿರುವವನು

ಸಣ್ಣ ಕತೆ

  • ಮೃಗಜಲ

    "People are trying to work towards a good quality of life for tomorrow instead of living for today, for many… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಹೃದಯದ ತೀರ್ಪು

    ಬೆಳಿಗ್ಗೆ ಏಳು ಗಂಟೆಯ ಹೊತ್ತಿಗೆ ತಿಂಡಿ ಕೂಡ ಮಾಡದೆ ಹೊರ ಹೋಗುತ್ತಿದ್ದ ಯೂಸುಫ್, ಮಧ್ಯಾಹ್ನ ಮಾತ್ರ ಮನೆಯಲ್ಲಿ ಉಣ್ಣುತ್ತಿದ್ದ. ರಾತ್ರಿಯ ಊಟ ಅವನ ತಾಯಿಯ ಮನೆಯಲ್ಲಿ. ತಾಯಿಯ… Read more…

  • ಒಂಟಿ ತೆಪ್ಪ

    ನಮ್ಮ ಕಂಪೆನಿಗೆ ಹೊಸದಾಗಿ ಕೆಲಸಕ್ಕೆ ಸೇರಿದ ಕ್ಲೇರಾಳ ಬಗ್ಗೆ ನಾನು ತಿಳಿದುಕೊಳ್ಳಲು ಪ್ರಯತ್ನಿಸಿದಷ್ಟೂ ಅವಳು ನಿಗೂಢವಾಗುತ್ತಿದ್ದಳು. ನಾಲಗೆಯ ಚಪಲದಿಂದ ಸಹ-ಉದ್ಯೋಗಿಗಳು ಅವಳ ಬಗ್ಗೆ ಇಲ್ಲಸಲ್ಲದ ಆರೋಪಗಳನ್ನು ಹೊರಿಸಿದರೂ… Read more…

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…