ಸತ್ಯ ಸೀಮೆಗೆ ತಾಯೆ ನಡಿಸೆನ್ನ

ಮಳೆ ಹನಿಯ ಬಿಡು ಹೂಗಳಲಿ, ಮರ
ಗಳ ಹಸುರು ಹಚ್ಚೆಯಲಿ, ಕಡಲಿನ
ಬಿಳಿ ನೊರೆಗಳಂಚಿನಲಿ ಮಿರುಗುವ ಸೀರೆಯನು ತಳೆದ,
ಹೊಳೆವ ಹೊಳೆಗಳ ಗಳದ ಸರದಲಿ
ಝಳದ ಹಿಮಗಿರಿಮಕುಟದಲ್ಲಿ ಥಳ
ಥಳೆವ ರಮಣಿಯೆ! ಜನ್ಮಧರಣಿಯೆ! ಭರತಭೂಮಣಿಯೇ!

ಹೊತ್ತಿಸಿದೆನೌ ಮುಂಚಿನಾಳಕೆ
ವೆತ್ತ ಬೀರರ ಪೂರ್ವದರಸರ
ಹೊತ್ತ ನಿನ್ನುದರವನು; ಧರ್ಮಾಮೃತದ ಬೋಧಕರ
ಹೆತ್ತ ನಿನ್ನೀಬಸುರು, ನನ್ನನು
ಹೆತ್ತು ಹಡೆಯಿತು ವಿಷವ; ಸೀಗೆಯ
ಬಿತ್ತು ಮೊಳೆತಂತಾಯ್ತು ಬಾಳೆಯ ಬುಡದಿ ನನ್ನಿಂದ!

ಕತ್ತಿವೀರರು ನಿನ್ನ ಹಗೆತಲೆ
ಯೊತ್ತಿ, ರಣದಲಿ ಜಯಿಸಿ, ಕುಂಕುಮ
ನೆತ್ತರಿನ ಬೊಟ್ಟಿಟ್ಟು ಶೌರ್ಯದ ಹಣೆಯ ನಡುವಿನಲಿ,
ಮತ್ತೆ ಕೀರ್ತಿಯ ಕಾಲ್ಗೆ ಗೆಜ್ಜೆಯ
ಸುತ್ತಿ ಬೆಳಗಿದ ನಿನ್ನ ಮುಖದಲಿ
ಬಿತ್ತು ನನ್ನೆದೆಯೊಳಗೆ ತುಂಬಿದ ಕತ್ತಲೆಯ ನೆರಳು.

ಮೆರೆದೆನೌ ಹೊಂಗೋಳ ಕೈಯಲಿ
ಮೆರೆದೆನೌ ಮಾಯೆಯಲಿ ಹೊಟ್ಟೆಯ
ಹೊರೆದೆನೌ, ನನ್ನೆಲುಬು ಮಾಂಸವ ನಾನೆ ಉಂಡುಂಡು!
ತೊರೆದೆನೌ ನನ್ನವರ ಮುಟ್ಟಿದೆ
ಒರೆದೆನೌ ಪರತಂತ್ರ ಪಾಠವ
ಬರೆದೆನೌ ನಿನ್ನಯ ಲಲಾಟದಿ ದಾಸ್ಯಮುದ್ರೆಯನು!

ಕದ್ದ ಕಳ್ಳನು ಕೆಡುಕನಾದರು
ಮುದ್ದು ಮಗನಲೆ ತಾಯಿಗಾತನ
ನೊದ್ದು ಬಿಡುವಳೆ? ತಾಯೆ! ನೋಡೌ ಕರುಣದಿಂದೀಗ!
ನಿದ್ದೆಯಿಂದೆಚ್ಚೆತ್ತೆ, ಹೋ! ಹೋ!
ತಿದ್ದಿಕೊಳ್ಳಲು ಹೊತ್ತಿದೇ! ನೀ
ನಿದ್ದು ಕೈಗೊಟ್ರೆನಗೆ ಕಲಿಸೌ ನಿನ್ನ ಸೇವೆಯನು!

ನನ್ನ ಹಸಿ ಮೈದೊಗಲ ಜೋಡನು
ನಿನ್ನಡಿಗೆ ಜೋಡಿಸುವೆ; ಗುಡಿಸುವೆ
ನನ್ನ ಕೂದಲ ಚೌರಿಯಲಿ ನಿನ್ನಡಿಯ ಧೂಳಿಯನು;
ನನ್ನ ಮನದಲ್ಲಿ ಹಿಡಿವೆ ನಿನ್ನನು!
ಇನ್ನು ಕುಳ್ಳಿರ್ದೀ ಮನೋರಥ
ವನ್ನು ಬೇಗನೆ ನೂಕಿ ನಡೆವೆನು ಸುಖವ ಮೇರುವಿಗೆ!

ಎಲ್ಲಿ ಸಾಹಸ ಸತ್ವದಳತೆಗೆ
ಬಳ್ಳವಾಗದೊ ಮೈಯ ಬಣ್ಣವು,
ಎಲ್ಲಿ ಅನ್ಯಾಯಕ್ಕೆ ಕತ್ತಿಯು ಕೊಡದೊ ಬೆಂಬಲವ,
ಎಲ್ಲಿ ಆತ್ಮೋನ್ನತಿಯ ಹಾದಿಗೆ
ಕಲ್ಲು ಮುಳ್ಳನ್ನಿಡಿರೊ, ಆ ಸುಖ
ಸಲ್ಲಲಿತ ಸಮ ಸತ್ಯ ಸೀಮೆಗೆ ತಾಯೆ ನಡಿಸೆನ್ನಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಬುದ್ಧಿವಾದ
Next post ಕತ್ತಲಲ್ಲಿರುವವನು

ಸಣ್ಣ ಕತೆ

  • ಅಂತರಂಗ ಶುದ್ಧಿ ಬಹಿರಂಗ ಶುದ್ಧಿ

    ಸ್ವಾಮೀಜಿಗಳಿಗೆ ಈವತ್ತಂತೂ ಮೈ ತುರಿಸಿಕೊಳ್ಳಲೂ ಪುರುಸೊತ್ತಿಲ್ಲ. ಹಲವು ಕಾರ್ಯಕ್ರಮಗಳ ಒತ್ತಡ, ರಾಜಕಾರಣಿಗಳ ಭೇಟಿ ಜೊತೆಗೆ ತಂಡೋಪತಂಡವಾಗಿ ಆಶೀರ್ವಾದ ಬೇಡಿ ಬರುವ ಭಕ್ತರ ಕಿರಿಕಿರಿ. ಇದರ ಮದ್ಯೆ ಜಪತಪ,… Read more…

  • ಸಂಶೋಧನೆ

    ವೇಣುಗೋಪಾಲನ ಜೀವನ ಬೆಳಗು ರಾತ್ರಿಗಳಂತೆ ಒಂದೇ ಮಾಂತ್ರಿಕತೆಗೆ ಹೊಂದಿಕೊಂಡಿತ್ತು. ಬೆಳಿಗ್ಗೆ ಏಳುವುದು ನೈಸರ್ಗಿಕ ವಿಧಿಗಳಿಂದ ಮುಕ್ತನಾಗಿ ಕಾಫಿ ಕುಡಿಯುತ್ತಾ ಅಂದಿನ ದಿನಪತ್ರಿಕೆ ಓದುವುದು, ಓದಿದ್ದರ ಬಗ್ಗೆ ಚಿಂತಿಸುತ್ತಾ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

cheap jordans|wholesale air max|wholesale jordans|wholesale jewelry|wholesale jerseys