ಹಾವಿನ ಹಾಡು

[ರಗಳೆಯ ಪ್ರಭೇದ]

ನಾಗರ ಹಾವೆ! ಹಾವೊಳು ಹೂವೆ! |
ಬಾಗಿಲ ಬಿಲದಲಿ ನಿನ್ನಯ ಠಾವೆ! ||
ಕೈಗಳ ಮುಗಿವೆ, ಹಾಲನ್ನೀವೆ |
ಬಾ ಬಾ ಬಾ ಬಾ ಬಾ ಬಾ ಬಾ ಬಾ ||೧||

ಹಳದಿಯ ಹೆಡೆಯನು ಬಿಚ್ಚೋ ಬೇಗಾ! |
ಹೊಳಹಿನ ಹೊಂದಲೆ ತೂಗೋ ನಾಗಾ! ||
ಕೊಳಲನ್ನೂದುವೆ ಲಾಲಿಸು ರಾಗಾ |
ನೀ ನೀ ನೀ ನೀ ನೀ ನೀ ನೀ ನೀ ||೨||

ಎಲೆ ನಾಗಣ್ಣ, ಹೇಳೆಲೊ ನಿನ್ನಾ |
ತಲೆಯಲಿ ರನ್ನವಿಹ ನಿಜವನ್ನಾ! ||
ಬಲು ಬಡವಗೆ ಕೊಪ್ಪರಿಗೆಯ ಚಿನ್ನಾ |
ತಾ ತಾ ತಾ ತಾ ತಾ ತಾ ತಾ ತಾ ||೩||

ಬರಿಮೈ ತಣ್ಣಗೆ, ಮನದಲ್ಲಿ ಬಿಸಿ ಹಗೆ |
ಎರಡೆಳೆ ನಾಲಗೆ ಇದ್ದರು ಸುಮ್ಮಗೆ ||
ಎರಗುವೆ ನಿನಗೆ, ಈಗಲೆ ಹೊರಗೆ |
ಪೋ ಪೋ ಪೋ ಪೋ ಪೋ ಪೋ ಪೋ ಪೋ || ೪||
*****
(ಪದ್ಯ ಪುಸ್ತಕ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ದೀಪಿಕಾ – ಸ್ವಗತ
Next post ಚಹರೆಪಟ್ಟಿ

ಸಣ್ಣ ಕತೆ

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಮುಗ್ಧ

    ಆಲೀ........ ಏ ಆಲೀ........ ಐಸಮ್ಮ ಮಗನನ್ನು ಎಷ್ಟು ಜೋರಾಗಿ ಕರೆದರೂ ಆಲಿಯಿಂದ ಉತ್ತರ ಬರಲಿಲ್ಲ. ಒಂದು ಕಡೆ ಕತ್ತಲೆಯಾಗುತ್ತಾ ಬರುತ್ತಿದೆ. ಬೀಡಿ ಕಟ್ಟುಗಳನ್ನು ಸಂಜೆಯ ಒಳಗೆ ಬ್ರಾಂಚಿಗೆ… Read more…

  • ಮೇಷ್ಟ್ರು ವೆಂಕಟಸುಬ್ಬಯ್ಯ

    ಪ್ರಕರಣ ೧೨ ಜನಾರ್ದನಪುರಕ್ಕೆ ರಂಗಣ್ಣ ಹಿಂದಿರುಗಿದ್ದಾಯಿತು. ತಿಮ್ಮರಾಯಪ್ಪ ಹೇಳಿ ಕೊಟ್ಟಿದ್ದ ಹಾಗೆ ಕಲ್ಲೇಗೌಡರಿಗೆ ಕಾಗದಗಳನ್ನು ಬರೆದದ್ದೂ ಆಯಿತು. ಕಡೆಗೆ ರಿಜಿಸ್ಟರ್ಡ್ ಕಾಗದವನ್ನೂ ಅದಕ್ಕೆ ಒಂದು ಜ್ಞಾಪಕದೋಲೆಯನ್ನೂ ಕಳಿಸಿದ್ದಾಯಿತು.… Read more…