ತೆಂಕಣ ಗಾಳಿಯಾಟ

(ರಗಳೆಯ ಪ್ರಭೇದ)

ಬರಲಿದೆ! ಅಹಹಾ! ದೂರದಿ ಬರಲಿದೆ-

ಬುಸುಗುಟ್ಟುವ ಪಾತಾಳದ ಹಾವೊ? |
ಹಸಿವಿನ ಭೂತವು ಕೂಯುವ ಕೂವೊ? ||
ಹೊಸತಿದು ಕಾಲನ ಕೋಣನ -ಓವೊ! |
ಉಸಿರಿನ ಸುಯ್ಯೋ? – ಸೂಸೂಕರಿಸುತ,

ಬರುವುದು! ಬರಬರ ಭರದಲಿ ಬರುವುದು- ||೧||

ಬೊಬ್ಬೆಯ ಹಬ್ಬಿಸಿ, ಒಂದೇ ಬಾರಿಗೆ |
ಉಬ್ಬರ ಎಬ್ಬಿಸಿ ಕಡಲಿನ ನೀರಿಗೆ, ||
ಬೊಬ್ಬುಳಿ ತೆರೆಯನು ದಡಕ್ಕೆ ಹೊಮ್ಮಿಸಿ, |
ಅಬ್ಬರದಲಿ ಭೋರ್ ಭೋರೆನೆ ಗುಮ್ಮಿಸಿ,

ಬರುತದೆ! ಮೈತೋರದೆ ಬರುತದೆ! ಅದೆ- ||೨||

ನಡುಮುರಿಯುತ ನಗನಾವೆಗೆ, ಕೂವೆಗೆ |
ಉಡಿಸಿದ ಹಾಯಿಯ ಹರಿಯುತ ಬಿರಿಯುತ, ||
ಹಡಗನು ಕೀಲಿಸಿ, ತುಮುರನು ತೇಲಿಸಿ, |
ದಡದಲಿ ಝಾಡಿಸಿ, ದೋಣಿಯನಾಡಿಸಿ,

ಇದೆ! ಇದೆ! ಬರುತಿದೆ! ಇದೆ! ಇದೆ! ಬರುತಿದೆ – ||೩||

ಹಕ್ಕಿಯ ಕಣ್ಣಿಗೆ ಧೂಳಿನ ಕಾಡಿಗೆ |
ಇಕ್ಕುತ, ಹೊಲದೆತ್ತಿಗೆ ದನಕಾಡಿಗೆ ||
ಫಕ್ಕನೆ ಹಟ್ಟಿಗೆ ಅಟ್ಟಿಸಿ, ಕಾಡಿಗೆ |
ಸಿಕ್ಕಿದ ಕಿಚ್ಚನು ಊದಲು ಹಾರುತ,

ಬರುತಿದೆ! ಇದೆ! ಇದೆ! ಇದೆ! ಇದೆ! ಬರುತಿದೆ- ||೪||

ಸಡಲಿಸಿ ಮಡದಿಯರುಡಿಯನು ಮುಡಿಯನು,
ಬಡಮುದುಕರ ಕೊಡೆಗರಿ ಹರಿದಾಡಿಸಿ,
ಹುಡುಗರ ತಲೆ ತಲೆ ಟೊಪ್ಪಿಯ ಆಟವ
ದಡಬಡನಾಡಿಸಿ ಮನೆಮನೆತೋಟವ
ಅಡಿಮೇಲಾಗಿಸಿ, ತೆಂಗನು ಲಾಗಿಸಿ,
ಅಡಿಕೆಯ ಬಾಗಿಸಿ, ಪನೆ ಇಬ್ಭಾಗಿಸಿ,
ಬುಡದೂಟಾಡಿಸಿ, ತಲೆ ತಾಟಾಡಿಸಿ,
ಗುಡಿಸಲ ಮಾಡನು ಹುಲುಹುಲುಮಾಡಿಸಿ,

ಬಂತೈ! ಬಂತೈ! ಇದೆ! ಇದೆ! ಬಂತೈ!- ||೫||

ಗಿಡಗಿಡದಿಂ-ಚೆಲು ಗೊಂಚಲು ಮಿಂಚಲು-
ಮಿಡಿಯನು ಹಣ್ಣನ್ನು ಉದುರಿಸಿ ಕೆದರಿಸಿ
ಎಡದಲಿ ಬಲದಲಿ ಕೆಲದಲಿ ನೆಲದಲಿ,
ಪಡುವಣ ಮೋಡವ ಬೆಟ್ಟಕೆ ಗಟ್ಟಕೆ
ಹೊಡೆದಟ್ಟುತ, ಕೋಲ್‌ ಮಿಂಚನು ಮಿರುಗಿಸಿ,
ಗುಡುಗನು ಗುಡುಗಿಸಿ, ನೆಲವನು ನಡುಗಿಸಿ,
ಸಿಡಿಲನು ತಾಳೆಗೆ ಬಾಳೆಗೆ ಎರಗಿಸಿ,
ಜಡಿಮಳೆ ಸುರಿವೋಲ್‌, ಬಿರುಮಳೆ ಬರುವೋಲ್‌,
ಕುಡಿ ನೀರನು ಒಣಗಿದ ನೆಲಕೆರೆವೋಲ್.
ಬಂತೈ ಬೀಸುತ! ಬೀಸುತ ಬಂತೈ!
ತೆಂಕಣ ಗಾಳಿಯು ಕೊಂಕಣ ಸೀಮೆಗೆ
ಬಂತೈ! ಬಂತೈ! ಬಂತೈ! ಬಂತೈ! ||೬||
*****
(ಪದ್ಯ ಪುಸ್ತಕ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಲಾವಿದರ ಕುಟುಂಬಗೀತೆ
Next post ಶಬ್ದಗಳು

ಸಣ್ಣ ಕತೆ

  • ಕಳಕೊಂಡವನು

    ಸುಮಾರು ಒಂದು ಗಂಟೆಯ ಪಯಣದಿಂದ ಸುಸ್ತಾದ ಅವನು ಬಸ್ಸಿನಿಂದ ಇಳಿದು ರಸ್ತೆಯ ಬದಿಗೆ ಬಂದು ನಿಂತು ತನ್ನ ಕೈಗಡಿಯಾರ ದೃಷ್ಟಿಸಿದ. ಮಧ್ಯಾಹ್ನ ಒಂದು ಗಂಟೆ. ಒಮ್ಮೆ ಮುಖ… Read more…

  • ತಿಥಿ

    "ಲೋ ಬೋಸುಡಿಕೆ ನನ್ಮಗನೇ, ಇದು ಕೊನೆಯ ಬಾರಿ ನಿನಗೆ ವಾರ್ನಿಂಗ್ ಕೊಡುತ್ತಾ ಇದ್ದೇನೆ. ಮೂರು ಸಾರಿ ಈ ಜೈಲಿನಿಂದ ನಿನಗೆ ವಿದಾಯ ಕೊಟ್ಟಾಯಿತು. ಇನ್ನು ಹೋಗಿ ನಿನ್ನ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…