Home / ಕವನ / ಕವಿತೆ / ಹುತ್ತರಿ ಹಾಡು

ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...