Home / ಕವನ / ಕವಿತೆ / ಹುತ್ತರಿ ಹಾಡು

ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...