ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಮನಾಥನ ವರದಿ
Next post ರಾತ್ರಿಯಲ್ಲಿ ಹೆಜ್ಜೆ ಸದ್ದು

ಸಣ್ಣ ಕತೆ

  • ಕ್ಷಮೆ

    ಸುಂದರರಾಜ್ ಬೆಂಗಳೂರಿನಲ್ಲಿಯೇ ಹುಟ್ಟಿಬೆಳೆದವನು. ಹಾಗಾಗಿ ಅವನು ಕನ್ನಡ ಮಾಧ್ಯಮದಲ್ಲಿಯೇ ವಿಧ್ಯಾಭ್ಯಾಸ ಮಾಡಿ ಮುಂದೆ ಕಾಲೇಜಿನ ದಿನಗಳಲ್ಲಿ ಇಂಗ್ಲೀಷ್ ಮಾಧ್ಯಮದಲ್ಲಿ ಓದಿದ್ದ. ತನ್ನ ಮಾತೃ ಭಾಷೆಯಾದ ತಮಿಳು ಸಾಧಾರಣವಾಗಿ… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಕೊಳಲು ಉಳಿದಿದೆ

    ಮಾತಿನ ತೆರೆ ಒಂದು "ನೋಡಿ, ಜನರು ನನ್ನನ್ನು ನೋಡಿ ನಗುತ್ತಾರೆ! ಈ ಬಂಗಾರದ ಕೃಷ್ಣನ ಮೂರ್ತಿ ಇವಳ ಕೈಯಲ್ಲಿ ಯಾವಾಗಲೂ ಏಕೆ ಎಂದು ಕೇಳುತ್ತಾರೆ! ನನ್ನ ಹತ್ತರ… Read more…

  • ವಿಷಚಕ್ರ

    "ಚಂದ್ರು, ಒಳಗೆ ಬಾಮ್ಮ. ಮಳೆ ಬರುತ್ತೆ." ತಾಯಿ ಕೂಗಿದುದನ್ನು ಕೇಳಿ ಚಂದ್ರು ನಕ್ಕ. ಒಳಕ್ಕೆ ಬರುವುದಿರಲಿ, ಪಕ್ಕದ ಮನೆಯ ಹುಡುಗಿ ವೇದಳೊಂದಿಗೆ ಆಡುತ್ತಿದ್ದುದನ್ನು ನಿಲ್ಲಿಸಲೂ ಇಲ್ಲ. "ನೋಡೇ-ನಾನು… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…