ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ರಾಮನಾಥನ ವರದಿ
Next post ರಾತ್ರಿಯಲ್ಲಿ ಹೆಜ್ಜೆ ಸದ್ದು

ಸಣ್ಣ ಕತೆ

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…

  • ಅವಳೇ ಅವಳು

    ಇತ್ತೀಚೆಗೆ ಅವಳೇಕೋ ತುಂಬಾ ಕಾಡುತ್ತಿದ್ದಾಳೆ- ಮೂವತ್ತು ವರ್ಷಗಳೇ ಸಂದರೂ ಮರೆಯಾಗಿಲ್ಲ ಜೀವನದಲ್ಲಿ ಅದೆಷ್ಟೋ ನಡೆಯಬಾರದ ಅಥವಾ ನಡೆಯಲೇಬೇಕಾದ ಅನೇಕ ಘಟನೆಗಳು ನಡೆದು ಹೋಗಿವೆ. ದೈಹಿಕವಾಗಿ, ಮಾನಸಿಕವಾಗಿ, ವ್ಯಾವಹಾರಿಕವಾಗಿ,… Read more…

  • ಉಪ್ಪು

    ಸಂಜೆ ಮೆಸ್ಸಿನಲ್ಲಿ ಚಹಾ ಕುಡಿಯುತ್ತಿದ್ದಾಗ ಎದುರು ಕುಳಿತ ಪ್ರೊಫ಼ೆಸರ್ ಬಾನಲಗಿಯವರು ಕೇಳಿದರು : "ಸ್ಟೈಲಿಸ್ಟಿಕ್ಸ್ ಬಗ್ಗೆ ನಿನ್ನ ಅಭಿಪ್ರಾಯ ಏನು?" ಅವರು ಬಿಸಿಯಾದ ಚಹಾದ ನೀರನ್ನು ಜಾಡಿಯಿಂದ… Read more…

  • ಪ್ರೇಮನಗರಿಯಲ್ಲಿ ಮದುವೆ

    ಜಾರ್ಜ್, ಎಲೆನಾಳನ್ನು ಸಂಧಿಸಿದಾಗ ಅವಳ ಮನೋಸ್ಥಿತಿ ಬಹಳ ಹದಗೆಟ್ಟಿತ್ತು. ಪಾರ್ಕಿನ ಬೆಂಚಿನ ಮೇಲೆ ತಲೆ ಬಗ್ಗಿಸಿ ಕಣೀರನ್ನು ಒರೆಸಿಕೊಳ್ಳುತ್ತಿದ್ದ ಎಲೆನಾಳನ್ನು ಕಂಡು ಅವರ ಮನಸ್ಸು ಕರಗಿತು. "ಹಾಯ್,… Read more…