Home / ಕವನ / ಕವಿತೆ / ಹುತ್ತರಿ ಹಾಡು

ಹುತ್ತರಿ ಹಾಡು

ಎಲ್ಲಿ ಭೂರಮೆ ದೇವಸನ್ನಿಧಿ ಬಯಸಿ ಬಿಮ್ಮನೆ ಬಂದಳೋ?
ಎಲ್ಲಿ ಮೋಹನ ಗಿರಿಯ ಬೆರಗಿನ ರೂಪಿನಿಂದಲಿ ನಿಂದಳೋ?
ಎಲ್ಲಿ ಮುಗಿಲಲಿ ಮಿಂಚಿನೋಲ್‌ ಕಾವೇರಿ ಹೊಳೆ ಹೊಳೆ ಹೊಳೆವಳೋ?
ಎಲ್ಲ ನೆಲವನು ತಣಿಸಿ ಜನಮನ ಹೊಲದ ಕಳೆ ಕಳೆ ಕಳೆವಳೋ?
ಅಲ್ಲೆ ಆ ಕಡೆ ನೋಡಲಾ!
ಅಲ್ಲೆ ಕೊಡಗರ ನಾಡಲಾ!
ಅಲ್ಲೆ ಕೊಡಗರ ಬೀಡಲಾ!

ಸವಿದು ಮೆದ್ದರೊ ಯಾರು ಪೂರ್ವದಿ ಹುಲಿಯ ಹಾಲಿನ ಮೇವನು?
ಕವಣೆ ತಿರಿ ಕಲ್ಲಾಟ ಹಗ್ಗಕೆ ಸೆಳೆದರೋ ಹೆಬ್ಬಾವನು?
ಸವರಿ ಆನೆಯ ಸೊಂಡಿಲಲಿ ರಣಕೊಂಬನಾರ್‌ ಭೋರ್ಗರೆದರೋ?
ಸವೆದು ಸವೆಯದ ಸಾಹಸತ್ವದ ಕ್ಷಾತ್ರ ಬೇಟೆಯ ಮೆರೆದರೋ?
ಅವರೆ ಸೋಲ್‌ ಸಾವರಿಯರು!
ಅವರೆ ಕಡುಗಲಿ ಗರಿಯರು!
ಅವರೆ ಕೊಡಗಿನ ಹಿರಿಯರು!

ತಮ್ಮ ನಾಡಿನ ಕೊರಳು ದಾಸ್ಯದ ನೊಗದ ಭಾರಕೆ ಬಗ್ಗದೊಲ್‌,
ಹೆಮ್ಮೆಹಗೆಗಳ ಹೊಡೆದು ಹಿರಿಯರು ಹಸಿದು ಹಾರುವ ಬಗ್ಗದೊಲ್‌,
ಬೊಮ್ಮಗಿರಿಯಿ೦ ಪುಷ್ಪಗಿರಿಪರ್ಯಂತ ಬೆಳೆದೀ ದೇಶವು
ಧರ್ಮದಾನದ ಕಟ್ಟುಕಟ್ಟಳೆ ರೀತಿನೀತಿಯ ಕೋಶವು!
ನಮ್ಮ ಕೊಡಗಿದು ಜಮ್ಮದು;
ಜಮ್ಮ ಕೊಡಗಿದು ನಮ್ಮದು;
ನಮ್ಮೊಡಲ್ ಬಿಡಲಮ್ಮದು!

ಇದು ಅಗಸ್ತ್ಯನ ತಪದ ಮನೆ, ಕಾವೇರಿ ತಾಯ ತವರ್ಮನೆ
ಕದನಸಿರಿಗುಯ್ಯಾಲೆ ತೂಗಿದನಿಲ್ಲಿ ಚಂದಿರವರ್ಮನೆ!
ಇದಕೊ! ಚೆಂಗಾಳ್ವರಸರಾಡಂಬರವು ಕುಣಿದ ಶ್ರೀರಂಗವು!
ಇದೊ! ಇದೊ! ಇಲ್ಲುರುಳ್ದ ಹಾಲೇರಿಯರ ಬಲಗಿರಿಶೃಂಗವು!
ವಿಧಿಯ ಮಾಟದ ಕೊಡಗಿದು!
ಮೊದಲೆ ನಮ್ಮದು, ಕಡೆಗಿದು
ಕದಲದೆಮ್ಮನು; ಬೆಡಗಿದು!

ಒಮ್ಮತವು ಒಗ್ಗಟ್ಟು ಒಂದೇ ಮನವು ಎಲ್ಲಿದೆ ಹೇಳಿರಿ?
ಸುಮ್ಮನಿತ್ತರೊ ದಟ್ಟಿಕುಪ್ಪಸ! ಹಾಡು ಹುತ್ತರಿಗೇಳಿರಿ?
ಚಿಮ್ಮಿ ಪಾತುರೆಕೋಲ ಹೊಯ್ಲಿಗೆ ಕುಣಿವ ಪದ ಹೊರ ಹೊಮ್ಮಲಿ!
ಅಮ್ಮೆ ಹರಸಿದ ಸೀಮೆ ನಮಗಿದು ಇರಲಿ ನಮ್ಮದೆ ನಮ್ಮಲ್ಲಿ!
ನೆಮ್ಮದಿಯನಿದು ತಾಳಲಿ!
ಆಮ್ಮೆಯಾ ಬಲ ತೋಳಲಿ
ನಮ್ಮ ಕೊಡಗಿದು ಬಾಳಲಿ!
*****
(ಪದ್ಯ ಪುಸ್ತಕ)

Tagged:

Leave a Reply

Your email address will not be published. Required fields are marked *

ಅವಳು ಯಾವ ಹುಡುಗರ ಜೊತ ನಿಂತು ಮಾತನಾಡಿದರೂ ಶ್ರೀಕಾಂತನಪಾಲಿಗೆ ಆ ಹುಡುಗರು ವಿಲನ್‌ಗಳಂತೆಯೇ ಭಾಸವಾಗುತ್ತಿದ್ದರು. ಅವಳು ತನ್ನ ಕಾಲೇಜಿನ ಲೆಕ್ಚರರ್‌ಗಳು ಪಾಠ ಮಾಡುವ ವೈಖರಿ ಸ್ಟೈಲು ಹೈಲುಗಳ ಕುರಿತು ಬಣ್ಣಿಸುವಾಗಲೂ ಕೇಳಲಾಗದೆ ಶ್ರೀಯ ಹೊಟ್ಟೆಯಲೆಲ್ಲಾ ತಳಮಳ. ಅಷ್ಟೇಕೆ ಅವಳು ತನ್ನ ತ...

ಬೆಳಿಗ್ಗೆ ಏಳರ ಸಮಯ ಮೈಸೂರಿನ ರೋಹಿಣಿ ಲಾಡ್ಜ್‌ನ ಕೊಠಡಿ ಸಂಖ್ಯೆ ೧೦೩. ಪೋಲೀಸರು, ಪತ್ರಕರ್ತರು, ಫೊಟೋ ಗ್ರಾಫರ್‌ಗಳಿಂದ ತುಂಬಿಹೋಗಿದೆ. ಬೆಳ್ಳಂ ಬೆಳಿಗ್ಗೆಯೇ ಯುವತಿಯೊಬ್ಬಳ ಕೊಲೆ ನಡೆದುಹೋಗಿದೆ. ಲಾಡ್ಜ್‌ನ ಹೊರಗೆ ಜನರು ಕುತೂಹಲಭರಿತರಾಗಿ ಸೇರಿದ್ದಾರೆ. ಸೇರಿದ್ದ ಜನರನ್ನು ನಿಯಂತ್ರ...

೧ ಗೌರಿಯ ಹಬ್ಬವು ಕಳೆದು ಕೆಲವು ದಿನಗಳಾಗಿದ್ದುವು. ಭಾಗೀರಥಮ್ಮನೂ ಅವಳ ಜೊತೆಯ ಹುಡುಗಿಯರೂ ಒಂದೊಂದು ದಿನವನ್ನು ಕಳೆಯುವುದೂ ಒಂದೊಂದು ಯುಗವನ್ನು ಕಳೆದಂತೆ ಕಷ್ಟವಾಗಿದ್ದಿತು. ಅವರು ಎಷ್ಟು ಕುತೂಹಲದಿಂದ ಬಯಸಿದರೂ ದಿನಗಳು ಬೇಗ ಬೇಗ ಉರುಳಲೊಲ್ಲವು. ಒಂದು ದಿನ ಅವರೆಲ್ಲರೂ ಸೇರಿ ಕವಡೆಯ...

ಸಂಜೆ ನಾಲ್ಕು ಗಂಟೆಯಾದರೆ ಸಾಕು. ಅವರೆಲ್ಲರೂ ಒಬ್ಬೊಬ್ಬರಾಗಿ ಬಂದು ಸೇರುತ್ತಾರೆ. ಅದೊಂದು ಪಂಚಾಯಿತಿ ಕಟ್ಟೆ ಇದ್ದಂತೆ. ಮಧ್ಯದಲ್ಲೊಂದು ಸಿಮೆಂಟ್ ಬೆಂಚು, ಅದರ ಎಡ, ಬಲ ಎರಡೂ ಕಡೆ ಇವರೇ ಒಂದಷ್ಟು ಕಲ್ಲು ಚಪ್ಪಡಿಗಳನ್ನು ಎಳೆದು ತಂದು ಕೊಡುವುದಕ್ಕೆ ಪೀಠಗಳನ್ನು ಮಾಡಿಕೊಂಡಿದ್ದಾರೆ. ಸ...

ತಿಮ್ಮಣ್ಣ ನಮ್ಮೂರಿನ ಪಕ್ಕದ ಹಳ್ಳಿಯಲ್ಲಿನ ಅಡುಗೆ ಭಟ್ಟ ತಿಪ್ಪಾಭಟ್ಟರ ಮಗ. ತಿಪ್ಪಾಭಟ್ಟರಿಗೆ ಮದುವೆಯಾಗಿ ಹತ್ತು ವರ್ಷ ಕಳೆದರೂ ಮಕ್ಕಳಾಗಿರಲಿಲ್ಲ. ಕೊನೆಗೆ ಪಕ್ಕದ ಮನೆಯ ಕಮಲಾಕ್ಷಮ್ಮನ ಸಲಹೆ ಮೇರೆಗೆ ಮಗುವಾದರೆ ತಿರುಪತಿಗೆ ಹೋಗಿ ಬರುವ ಹರಕೆ ಹೊತ್ತರು. ತಿಮ್ಮಪ್ಪನ ಕೃಪಾಕಟಾಕ್ಷವೋ ...

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...