Home / ಕವನ / ಕವಿತೆ / ಭೀಷ್ಮ ನಿರ್‍ಯಾಣ

ಭೀಷ್ಮ ನಿರ್‍ಯಾಣ

(ಮತ್ತೇಭವಿಕ್ರೀಡಿತ)

ಇಳಿದಂ ಪರ್ವತದಗ್ರದಿಂದೆ ದಿನವಂ, ಕೆಂಪೇರ್ದುದಾಕಾಶಮಂ-
ಡಳಮುಂ ಶೋಭಿಸಿದತ್ತು. ಪೂರ್ವದಿಶೆಯೊಳ್‌ ಕಾಲಿಟ್ಟುದೈ ಕತ್ತಲುಂ.
ಇಳಿದಸ್ತ೦ಗತನಾಗುತಿರ್ದನಧಿಕ ಶ್ರೇಯಃಪ್ರತಾಪಂಗಳಿಂ
ವಿಳಸದ್ಭಾರತದದ್ವಿತೀಯ ರವಿಯುಂ ಭೀಷ್ಮಂ ಕುರುಕ್ಷೇತ್ರದೊಳ್.

ಶಿರಮಂ ಬಾಗಿಸೆ ಚಿಂತೆಯಿಂ, ಗಳದ ಸಂದೊಳ್ ಸಿಲ್ಕಲಾ ನಿಟ್ಟುಸಿರ್,
ಸುರಿದುಂ ಕಂಬನಿ ಜಾರೆ ಗಲ್ಲತಟದೊಳ್‌, ಕುಂತೀಕುಮಾರರ್ ವಲಂ
ಮರಣಾಸನ್ನನ ತಲ್ಪಮಂ ಬಳಸಿ ನಿಂದರ್; ಭೀಷ್ಮನುಂ ಕಂಗಳಂ
ತೆರೆದುಂ ನೋಡಿದನೊಮ್ಮೆ ಕೃಷ್ಣಮುಖಮಂ ಮಂದಸ್ಮಿತಾಹ್ಲಾದದಿಂ

“ಆರೆರೇ! ಧರ್ಮಜ! ಮಾತೃಭೂಮಿಯ ಪರಾಧೀನತ್ವದಾಪಾಶಮಂ
ತರಿದುಂ, ಧರ್ಮಪತಾಕೆಯಂ ಭರತಕ್ಷೋಣೀ ವಕ್ಷದೊಳ್‌ ನೆಟ್ಟಿಹೈ!
ಶಿರದೊಳ್‌ ಪಾತಕಮಿಲ್ಲಮಿಲ್ಲಮಿನಿಸುಂ ದುರ್ಯೋಧನ ಧ್ವಂಸದಿಂ,
ಧರೆಯಂ ಪಾಲಿಸು ಮೆಚ್ಚುವೊಲ್ ಪ್ರಜೆಗಳುಂ! ಕರ್ತವ್ಯದೊಳ್‌ ಕಣ್ಣಿಡೈ!

ನುಡಿಯಿಂದುಜ್ವಲಕಾಂತಿ ಭೀಷ್ಮಮುಖದೊಳ್‌ ವಿಭ್ರಾಜಿಸಲ್‌, ಹಸ್ತದಿಂ-
ದೊಡನಾಶೀರ್ವದಿಸುತ್ತ ಧರ್ಮಸುತನಂ, ಶ್ರೀಕೃಷ್ಣನುತ್ಸಂಗದೊಳ್
ಮುಡಿಯಂ ನೀಡಿ, ಮಲಂಗಿದಂ ಸುಭಟಭೀಷ್ಮಂ ಯೋಧಶಾರ್ದೂಲಮಂ
ದೊಡಲಿಂ ನೀಡಿ, ಮಲಗಿದಂ ಸುಭಟಭೀಷ್ಮಂ ಯೋಧಶಾರ್ದೂಲಮಂ
ದೊಡಲಿಂ ನಂದುದು ಲೇಶಜೀವಕಳೆಯುಂ-ನಿರ್ಯಾಣದಾ ದೀಪದೋಲ್
*****
(ಸುವಾಸಿನಿಯಿಂದ ೧೯೦೨)

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...