Home / ಕವನ / ಕವಿತೆ / ಪರೀಕ್ಷೆಯಲ್ಲಿ ಪರಾಜಿತನಾದ ವಿದ್ಯಾರ್ಥಿಯ ಪ್ರಲಾಪ

ಪರೀಕ್ಷೆಯಲ್ಲಿ ಪರಾಜಿತನಾದ ವಿದ್ಯಾರ್ಥಿಯ ಪ್ರಲಾಪ

ಚತುಷ್ಪದಿ

ಸಾಧ್ಯವಿಲ್ಲವು ಪರೀಕ್ಷೆಯೊಳನಗೆ ಜಯವು; |
ವಿದ್ಯಾಪರೀಕ್ಷಕರಿಗಿಲ್ಲವೈ ದಯವು||

ಆರು ವರ್ಷಗಳಿಂದ ಪೋಗುವೆನು ನಾನು; |
ದೂರ ಗುಡ್ಡಕೆ ಬರಿದೆ ಮಣ್ಣ ತುಂಬಿದೆನು. ||
ತೋರಲಿಲ್ಲವು ಪರೀಕ್ಷೆಯೊಳು ಜಯವಿನ್ನು |
ನೀರೊಳಗೆ ಹೋಮ ಗೈದಂತದುದೇನು? ||೧||

ನೊಸಲ ಪೊರೆಯಾಯ್ತು ಪಾಠದ ಭಾರ ಚಿಂತೆ, |
ಹಸಿವು ನೀರಡಿಕೆಯಿರದಾ ವೊಂಟೆಯಂತೆ, ||
ಉಸುಬೆಂಬ ಜೀವಕಾಲದಿ ನಡೆದು ಮುಂತೆ, |
ಬಸವಳಿದು ಬರಿದೆ ಸೇರ್ದೆನು ಪರಿಕೆ (೧) ಸಂತೆ. ||೨||

ಆಟಗಳ ಬರಿದೆ ನಾನಾಡದೇ ಬಿಟ್ಟು, |
ಪಾಟದಲಿ ಬಯಲಾಗಿ ಪೂರ್ಣ ಮನವಿಟ್ಟು, ||
ಮೂಟೆ ಹೊರುವಾ ಎತ್ತಿನೊಲ್ ನಿದ್ದೆಗೆಟ್ಟು, |
ಓಟವೋಡಿದೆ. ನೋವ್ಲಿದ್ ಕಣ್ಣುಕಟ್ಟು! ||೩||

ಹಲವು ಪುಸ್ತಕಗಳನ್ನು ಪರರೊಡನೆ ಬೇಡಿ, |
ಕೆಲವನ್ನು ಕೊಂಡೆನೈ ಹಣವನು ಬಿಸಾಡಿ, ||
ಕಲಿತೆನಾನೆಲ್ಲವನು ಪೂರ್ಣ ಮನಮಾಡಿ, |
ಗೆಲಲಿಲ್ಲವಿದು ಪರೀಕ್ಷೆಯ ಮಂತ್ರಮೋಡಿ! ||೪||

ತಂದೆ ಮನೆಯನ್ನು ಬಿಟ್ಟು, ಪರರ ಕೂಳುಂಡು, |
ಚೆಂದದಾ ಸತಿಯ ನೋಡದೆ ಸಾಸಗೊಂಡು, ||
ಬಂದು ಕಲಿತುದುದೆಲ್ಲ ಇಂಗ್ಲೀಷು ಬಂಡು |
ಸಂದ ಸಂಬಳವು ಸರಕಾರಕ್ಕೆ ದಂಡು! (೨) ||೫||

ನೆನೆಯದಿರ್ದೆನು ಸ್ನಾನಜಪಯೋಗವೆಲ್ಲ; |
ಮನೆಯ ಹಬ್ಬವ ಬಿಟ್ಟರೂ ಸಾಗಲಿಲ್ಲ; ||
ಅನುಜನಿಗೆ ಮದುವೆಯಾಗಲು ಪೋಗಲಿಲ್ಲ; |
ವನಿತೆ ಬಳೆದಾಗ ಸುಖದನುರಾಗವಿಲ್ಲ. ||೬||

ಮರುಗುವನು ಗುರು ನಾನು ಬಹುಮೂರ್ಖನೆಂದು, |
ಹುರುಳಿಲ್ಲ (೩) ವೆನುತ ಹೀನಿಪರು ಜನರಿಂದು. ||
ಬರಿದೆ ಹಣ ತಿಂದೆನೆಂದಾ ತಂದೆ ನೊಂದು, |
ಜರೆಯುವನು, ಜಾರುವುದು ಸ್ತ್ರೀಪ್ರೇಮಬಿಂದು. ||೭||

೧ ಪರೀಕ್ಷೆ ಎಂಬ ಸಂತೆ
೨ ಜುರುಮಾನೆ
೩ ಸತ್ವ
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...