Home / ಕವನ / ಕವಿತೆ / ಅವರು ಮತ್ತು ನಾವು

ಅವರು ಮತ್ತು ನಾವು

ನಾವು ತಿನ್ನುವುದಕ್ಕೆ
ಅನ್ನ ಕೇಳಿದೆವು
ಅವರು ಹುಳ ಬಿದ್ದ
ಅಕ್ಕಿ ಕೊಟ್ಟರು
ನಾವು ಹುಳ ದೇವರಿಗೆ ಕೊಟ್ಟು
ಅಕ್ಕಿಯನ್ನು ಕಣ್ಣಿಗೊತ್ತಿಕೊಂಡು
ಅನ್ನ ಮಾಡಿ ಉಂಡೆವು!

ಈಗ
ಅವರು ತಿನ್ನುವ ಅನ್ನಕ್ಕೇ
ಹುಳ ಬಿದ್ದಿದೆ
ಅವರು ಹುಳುಗಳನ್ನು
ನಿಷ್ಕಾರುಣ್ಯವಾಗಿ ಕೊಂದುಬಿಟ್ಟು
ಅನ್ನಕ್ಕಾಗಿ ದೇವರಿಗೇ
ಕೈ ಚಾಚುತ್ತಿದ್ದಾರೆ!

ಸಾಯುವಾಗ
ನಾವು ಕುಡಿಯುವುದಕ್ಕೆ
ನೀರು ಕೇಳಿದೆವು
ಅವರು ಆಕಾಶದಲ್ಲಿ ನಿಂತು
ಪಾತಾಳಕ್ಕೆ ನೀರು ಸುರಿದರು
ಸುರಿದ ನೀರಲ್ಲಿ
ನಾವು ದಣಿವಾರಿಸಿಕೊಂಡು
ಉಳಿದ ನೀರಲ್ಲಿ
ಕಣ್ಣೀರ ತೊಳೆದುಕೊಂಡೆವು

ಈಗ
ಅವರಿಗೆ ಸಾಯುವಾಗ
ಬಾಯಲ್ಲಿ ನೀರು ಬಿಡುವವರಿಲ್ಲ
ಅವರು ಸಾಕಿ ಸಲಹಿದ ಮಕ್ಕಳು
ಆಕಾಶದಲ್ಲಿ ಹಾರಿ
ದೂರ ದೇಶ ಸೇರಿದ್ದಾರೆ
ಅವರ ನೆನಪಿನಲ್ಲಿಯೇ ಇವರು
ಕಣ್ಣೀರು ಸುರಿಸುತ್ತಾ
ಪಾತಾಳಕ್ಕೆ ಇಳಿದು ಹೋಗಿದ್ದಾರೆ!

ನಮಗೇನಾದರೂ ಕೊಡುತ್ತಲೇ
ನಮ್ಮಗಳ
ಜೀವ, ಮಾನ, ಪ್ರಾಣಗಳ
ಉಳಿಸಿದ ಅವರ
ನಾವು ಶಪಿಸುವುದೂ ತರವಲ್ಲ!
ಮಾನವನೆದೆ ಬರಡೇನಲ್ಲ
ಪ್ರೀತಿ ಪ್ರೇಮಗಳ
ದವಸ ತುಂಬಿದ ಕಣಜ
ಹಂಚಿ ಉಟ್ಟುಣ್ಣುವ
ಸುಖದ ನಿಜ
ತಿಳಿಯಬೇಕಿದೆ ಮನುಜ!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...