Home / ಕವನ / ಕವಿತೆ / ಅವರು ಮತ್ತು ನಾವು

ಅವರು ಮತ್ತು ನಾವು

ನಾವು ತಿನ್ನುವುದಕ್ಕೆ
ಅನ್ನ ಕೇಳಿದೆವು
ಅವರು ಹುಳ ಬಿದ್ದ
ಅಕ್ಕಿ ಕೊಟ್ಟರು
ನಾವು ಹುಳ ದೇವರಿಗೆ ಕೊಟ್ಟು
ಅಕ್ಕಿಯನ್ನು ಕಣ್ಣಿಗೊತ್ತಿಕೊಂಡು
ಅನ್ನ ಮಾಡಿ ಉಂಡೆವು!

ಈಗ
ಅವರು ತಿನ್ನುವ ಅನ್ನಕ್ಕೇ
ಹುಳ ಬಿದ್ದಿದೆ
ಅವರು ಹುಳುಗಳನ್ನು
ನಿಷ್ಕಾರುಣ್ಯವಾಗಿ ಕೊಂದುಬಿಟ್ಟು
ಅನ್ನಕ್ಕಾಗಿ ದೇವರಿಗೇ
ಕೈ ಚಾಚುತ್ತಿದ್ದಾರೆ!

ಸಾಯುವಾಗ
ನಾವು ಕುಡಿಯುವುದಕ್ಕೆ
ನೀರು ಕೇಳಿದೆವು
ಅವರು ಆಕಾಶದಲ್ಲಿ ನಿಂತು
ಪಾತಾಳಕ್ಕೆ ನೀರು ಸುರಿದರು
ಸುರಿದ ನೀರಲ್ಲಿ
ನಾವು ದಣಿವಾರಿಸಿಕೊಂಡು
ಉಳಿದ ನೀರಲ್ಲಿ
ಕಣ್ಣೀರ ತೊಳೆದುಕೊಂಡೆವು

ಈಗ
ಅವರಿಗೆ ಸಾಯುವಾಗ
ಬಾಯಲ್ಲಿ ನೀರು ಬಿಡುವವರಿಲ್ಲ
ಅವರು ಸಾಕಿ ಸಲಹಿದ ಮಕ್ಕಳು
ಆಕಾಶದಲ್ಲಿ ಹಾರಿ
ದೂರ ದೇಶ ಸೇರಿದ್ದಾರೆ
ಅವರ ನೆನಪಿನಲ್ಲಿಯೇ ಇವರು
ಕಣ್ಣೀರು ಸುರಿಸುತ್ತಾ
ಪಾತಾಳಕ್ಕೆ ಇಳಿದು ಹೋಗಿದ್ದಾರೆ!

ನಮಗೇನಾದರೂ ಕೊಡುತ್ತಲೇ
ನಮ್ಮಗಳ
ಜೀವ, ಮಾನ, ಪ್ರಾಣಗಳ
ಉಳಿಸಿದ ಅವರ
ನಾವು ಶಪಿಸುವುದೂ ತರವಲ್ಲ!
ಮಾನವನೆದೆ ಬರಡೇನಲ್ಲ
ಪ್ರೀತಿ ಪ್ರೇಮಗಳ
ದವಸ ತುಂಬಿದ ಕಣಜ
ಹಂಚಿ ಉಟ್ಟುಣ್ಣುವ
ಸುಖದ ನಿಜ
ತಿಳಿಯಬೇಕಿದೆ ಮನುಜ!
*****

Tagged:

Leave a Reply

Your email address will not be published. Required fields are marked *

ಮಳೆ ಜೋರಾಗಿ ಸುರಿಯುತ್ತಿತ್ತು. ಚಾವಣಿ ತೂತಾಗಿ ಸೋರುತ್ತಿದ್ದುದರಿಂದ ಸಾವಿತ್ರಿಗೆ ನಿದ್ದೆ ಇರಲಿಲ್ಲ. ಅವಳ ಉಗ್ಗವನದೂ ಅದೇ ಕತೆ. ಒಂದು ಮೂಲೆಯಲ್ಲಿ ಉಗ್ಗವನಿಗೆ ಒರಗಿಕೊಂಡು ಹಳೇ ಕಂಬಳಿ ಹೊದ್ದು ಸಾವಿತ್ರಿ ತೂಕಡಿಸುತ್ತಿದ್ದಳು. ಬಾಗಿಲ ಸಂದಿನಿಂದ ಆಗಾಗ ಚಳಕ್ಕನೆ ಕಾಣಿಸಿಕೊಳ್ಳುವ ಮಿ...

ದೀಪಾವಳಿಯ ಸೂಟಿಯನ್ನು ಕಳೆಯಲು ಊರಿಗೆ ಹೋಗಿದ್ದೆ. ಹಳ್ಳಿಗೆ ಹೋದಾಗೆಲ್ಲ ಕತೆಯ ಸುಬ್ಬಣ್ಣನ ಮನೆಗೆ ಹೋಗದಿದ್ದರೆ ನನ್ನ ಮನಸ್ಸು ಕೇಳುವದಿಲ್ಲ. ಊರಿಗೆ ಬಂದು ತನ್ನ ಮನೆಗೆ ಬರದಿದ್ದರೆ ಸುಬ್ಬಣ್ಣ ಬಿಡುತ್ತಾನೇ? ಅವನ ಆಮಂತ್ರಣ ಬರುವ ಮುಂಚೆಯೇ ಹೋಗುವದು ಉಚಿತವೆಂದು ತೋರಿತು. ಅವನ ಕತೆ ಕೇ...

ಒಂದು ತಿಂಗಳ ಮಗು ಹೆನ್ರಿ ನೋಡಲು ಬಲು ಮುದ್ದಾಗಿದ್ದ. ಸೇಬಿನ ಕೆನ್ನೆಗಳು, ದೊಡ್ಡ ಕಪ್ಪು ಕಣ್ಣುಗಳು, ತಲೆಯಲ್ಲಿ ಕೆಂಚು ಕೂದಲು, ನೀಳ ಮೂಗು, ಮುದ್ದಾದ ಪುಟ್ಟ ಬಾಯಿ, ನೋಡಿದೊಡನೆ ಹೇಳಬಹುದಿತ್ತು ಆ ಮಗು ಬ್ರಿಟಿಷ್ ತಂದೆ ತಾಯಿಗೆ ಹುಟ್ಟಿದವನೆಂದು. ತಂದೆ ಸ್ಮಿಥ್ ಮತ್ತು ತಾಯಿ ಮೇರಿಗೆ...

ಕೊನೆಗೊಮ್ಮೆ ಶಂಕರ ಹೂಂಗುಟ್ಟಲೇಬೇಕಾಯಿತು. “ಹುಡುಗಿ ಮನಸ್ಸಿಗೆ ಬಂದರೆ ಮಾತ್ರ ಆಗಿ. ಈ ವಿಷಯದಲ್ಲಿ ಒತ್ತಾಯಮಾಡಬರುತ್ತದೆಯೇ?” ಎಂದು ಶಿವರಾಮ ಹೆಗಡೆಯವರು ಶಂಕರನನ್ನು ಹೊರಡಿಸಿದರು. ದಾರಿಯುದ್ದಕ್ಕೂ ಹೆಗಡೆಯವರು ತಮ್ಮ ಮಗಳ ಗುಣಗಾನವನ್ನು ಪ್ರಸ್ತುತ ಅಪ್ರಸ್ತುತ ಪ್ರಶಂಸೆಗಳಿಂದ...

ಅಡಿಗೆಯ ಮನೆಯಿಂದ ಉಮೆಯು ಓಡಿ ಬಂದು “ನೀರಿನ ಕೊಡದ ಬಳಿಗೆ ಒಂದು ಕಪ್ಪೆ ಕುಳಿತಿದೆ. ಹೊರಗೆ ಹಾಕಿ ಕೊಡಿ” ಅಂದಳು. ತನಗೆ ಹೆದರದವಳು ಒಂದು ಕಪ್ಪೆಗೆ ಅಂಜುತ್ತಾಳಲ್ಲ ಅಂದುಕೊಂಡು ಉಮೇಶ ಒಳಗೆ ಬಂದ. ಕಪ್ಪೆಯು ಭದ್ರಾಸನ ಹಾಕಿತ್ತು. ಉಮೇಶ ಒಂದು ಸೌದೆಯಿಂದ ಕೊಡವನ್ನು ಕುಟ್ಟಿ...

ಹೊಲದ ಬದುವಿನ ಮೇಲೆ ಸಿದ್ದವ್ವ ಕುಳಿತಿದ್ದಳು. ಬಿಳಿ ಜ್ವಾಳದ ತೆನೆಗಳ ಮೇಲೆ ಹಾಯ್ದ ಗಾಳಿ ಒಂದೇ ಸಮನೆ ಬೀಸುತ್ತಿತ್ತು. ಇದೇ ಹೊಲದಲ್ಲಿ ತಾನು ಬಾಲ್ಯವನ್ನೆಲ್ಲಾ ಕಳೆದದ್ದು ನೆನಪಾಗಿ ಎಂಬತ್ತೈದರ ಸಿದ್ದವ್ವಳಿಗೆ ಮೈಯಲ್ಲಿ ಹರೆಯ ಉಕ್ಕಿ ಬಂದಂಗೆ ಆಯ್ತು. ತನ್ನ ಸೊರಗಿ ತೆಳುವಾದ ಕೈ ಕಾಲು...