Home / ಕವನ / ಕವಿತೆ / ಅವರು ಮತ್ತು ನಾವು

ಅವರು ಮತ್ತು ನಾವು

ನಾವು ತಿನ್ನುವುದಕ್ಕೆ
ಅನ್ನ ಕೇಳಿದೆವು
ಅವರು ಹುಳ ಬಿದ್ದ
ಅಕ್ಕಿ ಕೊಟ್ಟರು
ನಾವು ಹುಳ ದೇವರಿಗೆ ಕೊಟ್ಟು
ಅಕ್ಕಿಯನ್ನು ಕಣ್ಣಿಗೊತ್ತಿಕೊಂಡು
ಅನ್ನ ಮಾಡಿ ಉಂಡೆವು!

ಈಗ
ಅವರು ತಿನ್ನುವ ಅನ್ನಕ್ಕೇ
ಹುಳ ಬಿದ್ದಿದೆ
ಅವರು ಹುಳುಗಳನ್ನು
ನಿಷ್ಕಾರುಣ್ಯವಾಗಿ ಕೊಂದುಬಿಟ್ಟು
ಅನ್ನಕ್ಕಾಗಿ ದೇವರಿಗೇ
ಕೈ ಚಾಚುತ್ತಿದ್ದಾರೆ!

ಸಾಯುವಾಗ
ನಾವು ಕುಡಿಯುವುದಕ್ಕೆ
ನೀರು ಕೇಳಿದೆವು
ಅವರು ಆಕಾಶದಲ್ಲಿ ನಿಂತು
ಪಾತಾಳಕ್ಕೆ ನೀರು ಸುರಿದರು
ಸುರಿದ ನೀರಲ್ಲಿ
ನಾವು ದಣಿವಾರಿಸಿಕೊಂಡು
ಉಳಿದ ನೀರಲ್ಲಿ
ಕಣ್ಣೀರ ತೊಳೆದುಕೊಂಡೆವು

ಈಗ
ಅವರಿಗೆ ಸಾಯುವಾಗ
ಬಾಯಲ್ಲಿ ನೀರು ಬಿಡುವವರಿಲ್ಲ
ಅವರು ಸಾಕಿ ಸಲಹಿದ ಮಕ್ಕಳು
ಆಕಾಶದಲ್ಲಿ ಹಾರಿ
ದೂರ ದೇಶ ಸೇರಿದ್ದಾರೆ
ಅವರ ನೆನಪಿನಲ್ಲಿಯೇ ಇವರು
ಕಣ್ಣೀರು ಸುರಿಸುತ್ತಾ
ಪಾತಾಳಕ್ಕೆ ಇಳಿದು ಹೋಗಿದ್ದಾರೆ!

ನಮಗೇನಾದರೂ ಕೊಡುತ್ತಲೇ
ನಮ್ಮಗಳ
ಜೀವ, ಮಾನ, ಪ್ರಾಣಗಳ
ಉಳಿಸಿದ ಅವರ
ನಾವು ಶಪಿಸುವುದೂ ತರವಲ್ಲ!
ಮಾನವನೆದೆ ಬರಡೇನಲ್ಲ
ಪ್ರೀತಿ ಪ್ರೇಮಗಳ
ದವಸ ತುಂಬಿದ ಕಣಜ
ಹಂಚಿ ಉಟ್ಟುಣ್ಣುವ
ಸುಖದ ನಿಜ
ತಿಳಿಯಬೇಕಿದೆ ಮನುಜ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...