Home / ಕವನ / ಕವಿತೆ / ೧೫-೮-೫೦

೧೫-೮-೫೦

ಈ ಧ್ವನಿಯೆ ಬೇರೆ ಈ ನೋಟ ಚಂದ್ರನ ತೋಟ

ಇದರ ಕಣಿ ಬೇರೆ ಇದು ತಾನೊಂದೆ ಸಾರುತಿದೆ

ಯುದ್ಧ ಕೂಡದೆಂದು ಅತ್ತ ಅಸ್ತ್ರದ ನೋಟ

ಅರ್ಧ ಭೂಮಿಗೆ ಸದಾ ಸರಿಯೆಂದು ತೋರುತಿದೆ

ಕೊಲೆಮನೆ ಕಡುಗತ್ತಿ ಕುರಿಮರಿಯ ಕುಣಿದಾಟ

ಬೇಕು ಮಾನವನ ದಾನವತೆಗೀ ರಾತ್ರಿಯೂಟ

 

ಈ ಧ್ವನಿಯೆ ಬೇರೆ ಬಾಂಬಿಗೆ ಹೆದರಲಿಲ್ಲ ಇದು

ಕತ್ತಿಯಲಿ ಕೆತ್ತಿದ ಸ್ವತಂತ್ರತೆಯನರಿಯದಿದು

ನೆತ್ತರಲಿ ಬರೆದ ನಾಗರಿಕೆತೆಯ ಕುರಿಯದಿದು

ಶಸ್ತ್ರವನು ನ೦ಬಿ ಶಾ೦ತಿಯ ಸೋಗ ಹಾಡದಿದು

ಈ ನಾಡು ಬೇರೆ ಇದು ನಡೆವ ದಾರಿಯೆ ಬೇರೆ

ಇವರ ನಡೆ ನೋಟ ನಂಬಿಕೆ ಎಲ್ಲ ಬೇರೆ ಬೇರೆ

 

ಇಂಡಿಯಾ ಇಂಪಾದ ಹೆಸರು ಏಷ್ಯದ ತಾಯಿ

ಬೆಟ್ಟದಲಿ ಹಡೆದು ನದಿಯಲಿ ತೊಳೆದು ನಾಕದಲಿ

ತೂಗಿ ನೆತ್ತಿಗೆ ತಾರೆಗಳನೊತ್ತಿ ಮುಗಿಲಲಿ ಸುತ್ತಿ

ಚಳಿಗಾಳಿ ಉರಿಗಾಳಿ ಬೀಸಿ ಭುಜನನು ತಟ್ಟಿ

ಜಗಜಟ್ಟಿಯಾಗಿಸಿದ ಹಿರಿಯ ಮಗಳೀ ನಾಡು

ಆ ತಪೋವನಗಳಲಿ ನರ್ತಿಸುನ ನವಿಲ ನೋಡು

 

ದೇವದೂತರು ದಿಕ್ಕ ತೋರಿದರು ಶಾ೦ತಿಯಲಿ

ಧನ್ಯರ್ಷಿಗಳು ಕಡೆದ ಬ್ರಹ್ಮಜಿಜ್ಜಾಸೆಯಲಿ

ಧವಳಗಿರಿಯಂತೆ ಬೆಳಕಾದ ಸಿರಿಮೊಗವೆತ್ತಿ

ಏಷ್ಯದ ಹಿರಿಮಗಳು ಭರತನ ಸಾಕುತಾಯಿ

ಸಾರುತಿಹಳಿಂದು ಎತ್ತಿದ ಕತ್ತಿಗಳ ತಡೆದು

ಶಾಂತಿ ಮೂಡದು ರಕ್ತಪಾತದಲಿ ಶಾಂತಿರಸ್ತು

 

 

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...