Home / ಕವನ / ಕವಿತೆ / ೧೫-೮-೫೦

೧೫-೮-೫೦

ಈ ಧ್ವನಿಯೆ ಬೇರೆ ಈ ನೋಟ ಚಂದ್ರನ ತೋಟ

ಇದರ ಕಣಿ ಬೇರೆ ಇದು ತಾನೊಂದೆ ಸಾರುತಿದೆ

ಯುದ್ಧ ಕೂಡದೆಂದು ಅತ್ತ ಅಸ್ತ್ರದ ನೋಟ

ಅರ್ಧ ಭೂಮಿಗೆ ಸದಾ ಸರಿಯೆಂದು ತೋರುತಿದೆ

ಕೊಲೆಮನೆ ಕಡುಗತ್ತಿ ಕುರಿಮರಿಯ ಕುಣಿದಾಟ

ಬೇಕು ಮಾನವನ ದಾನವತೆಗೀ ರಾತ್ರಿಯೂಟ

 

ಈ ಧ್ವನಿಯೆ ಬೇರೆ ಬಾಂಬಿಗೆ ಹೆದರಲಿಲ್ಲ ಇದು

ಕತ್ತಿಯಲಿ ಕೆತ್ತಿದ ಸ್ವತಂತ್ರತೆಯನರಿಯದಿದು

ನೆತ್ತರಲಿ ಬರೆದ ನಾಗರಿಕೆತೆಯ ಕುರಿಯದಿದು

ಶಸ್ತ್ರವನು ನ೦ಬಿ ಶಾ೦ತಿಯ ಸೋಗ ಹಾಡದಿದು

ಈ ನಾಡು ಬೇರೆ ಇದು ನಡೆವ ದಾರಿಯೆ ಬೇರೆ

ಇವರ ನಡೆ ನೋಟ ನಂಬಿಕೆ ಎಲ್ಲ ಬೇರೆ ಬೇರೆ

 

ಇಂಡಿಯಾ ಇಂಪಾದ ಹೆಸರು ಏಷ್ಯದ ತಾಯಿ

ಬೆಟ್ಟದಲಿ ಹಡೆದು ನದಿಯಲಿ ತೊಳೆದು ನಾಕದಲಿ

ತೂಗಿ ನೆತ್ತಿಗೆ ತಾರೆಗಳನೊತ್ತಿ ಮುಗಿಲಲಿ ಸುತ್ತಿ

ಚಳಿಗಾಳಿ ಉರಿಗಾಳಿ ಬೀಸಿ ಭುಜನನು ತಟ್ಟಿ

ಜಗಜಟ್ಟಿಯಾಗಿಸಿದ ಹಿರಿಯ ಮಗಳೀ ನಾಡು

ಆ ತಪೋವನಗಳಲಿ ನರ್ತಿಸುನ ನವಿಲ ನೋಡು

 

ದೇವದೂತರು ದಿಕ್ಕ ತೋರಿದರು ಶಾ೦ತಿಯಲಿ

ಧನ್ಯರ್ಷಿಗಳು ಕಡೆದ ಬ್ರಹ್ಮಜಿಜ್ಜಾಸೆಯಲಿ

ಧವಳಗಿರಿಯಂತೆ ಬೆಳಕಾದ ಸಿರಿಮೊಗವೆತ್ತಿ

ಏಷ್ಯದ ಹಿರಿಮಗಳು ಭರತನ ಸಾಕುತಾಯಿ

ಸಾರುತಿಹಳಿಂದು ಎತ್ತಿದ ಕತ್ತಿಗಳ ತಡೆದು

ಶಾಂತಿ ಮೂಡದು ರಕ್ತಪಾತದಲಿ ಶಾಂತಿರಸ್ತು

 

 

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...