೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
‘ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ‘ಸೂಟ್‌ಕೇಸ್ ಸ್ಟೆಟಲಾನಾ’
Next post ಲಿಂಗಮ್ಮನ ವಚನಗಳು – ೬

ಸಣ್ಣ ಕತೆ

  • ಸಿಹಿಸುದ್ದಿ

    ಶ್ರೀನಿವಾಸ ದೇವಸ್ಥಾನದಲ್ಲಿ ಎರಡು ಪ್ರದಕ್ಷಿಣೆ ಹಾಕಿ ಮೂರನೇ ಪ್ರದಕ್ಷಿಣೆಗೆ ಹೊರಡುತ್ತಿದ್ದಂತೆಯೇ, ಯಾರೋ ಹಿಂದಿನಿಂದ "ಕಲ್ಯಾಣಿ," ಎಂದು ಕರೆದಂತಾಯಿತು. ಹಿಂತಿರುಗಿ ನೋಡಿದರೆ ಯಾರೋ ಮಧ್ಯ ವಯಸ್ಸಿನ ಮಹಿಳೆ ಬರುತ್ತಿದ್ದರು.… Read more…

  • ನಿಂಗನ ನಂಬಿಗೆ

    ಹೊಸಳ್ಳಿ ನೋಡುವದಕ್ಕೆ ಸಣ್ಣದಾದರೂ ಕಣ್ಣಿಗೆ ಅಂದವಾಗಿದೆ. ಬೆಳವಲ ನಾಡಿನಲ್ಲಿ ಬರಿ ಬಯಲೆಂದು ಟೀಕೆ ಮಾಡುವವರಿಗೆ ಹೊಸಳ್ಳಿ ಕೂಗಿ ಹೇಳುತ್ತಿದೆ - ತಾನು ಮಲೆನಾಡ ಮಗಳೆಂದು ! ಊರ… Read more…

  • ಕಲ್ಪನಾ

    ಚಿತ್ರ: ಟಾಮ್ ಬಿ ಇದು ಇಪ್ಪತ್ತು ವರ್ಷಗಳ ಹಿಂದಿನ ಕಥೆ! ಮಾತನಾಡುವ ಸಿನಿಮಾ ಪ್ರಪಂಚ ಅದೇ ಆಗ ದಕ್ಷಿಣ ಭಾರತದಲ್ಲಿ ತಲೆಯೆತ್ತಿದ್ದಿತು! ಸಿನಿಮಾದಲ್ಲಿ ಪಾತ್ರವಹಿಸುವ ನಟಿನಟಿಯರನ್ನು ಅಚ್ಚರಿಯ… Read more…

  • ಸಾವಿಗೊಂದು ಸ್ಮಾರಕ

    ಶಾಲೆಯ ಮಾಸ್ತರ್ ಆಗಿ ಗಜರಾಜ ಸಿಂಗ್ ಅವರು ಪ್ರೈಮರಿ ಶಾಲೆಯ ಮಕ್ಕಳಿಗೆ ಹೇಳಿಕೊಡುತ್ತಿದ್ದ ಮೊದಲ ಪಾಠವೆಂದರೆ "ತಂದೆ ತಾಯಿಯನ್ನು ಗೌರವಿಸಿ, ಅವರೇ ನಿಮ್ಮ ಪಾಲಿನ ದೈವ" ಎಂದು.… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

cheap jordans|wholesale air max|wholesale jordans|wholesale jewelry|wholesale jerseys