Home / ಕವನ / ಕವಿತೆ / ೨೬-೧-೫೦

೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
‘ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...