Home / ಕವನ / ಕವಿತೆ / ೨೬-೧-೫೦

೨೬-೧-೫೦

ತಲೆಯ ಮೇಲಿನ ಹೆಜ್ಜೆ ಎಂದೋ ತೆರಳಿತು
ಪಡುವಲಿನ ಬಿಳಿ ಕೆಂಪು ನೀಲಿ ನೀರನು ದಾಟಿ,
ಮರಕತ ದ್ವೀಪದಮನೆಗೆ. ದಣಿಗೂ ದಣಿವು!
ಇತ್ತ ಈ ಬಿಡುಗಡೆಯೂ ಮೈಮುರಿದು ಪರಶಿವನ
ತ್ರಿಶೂಲದಂತಾಯ್ತು ನೋಡುನ ಕಣ್ಣಿಗೆ!

ತಲೆಯ ಮೇಲಿನ ಹೆಜ್ಜೆ. -ಈ ಮಾತು ಮುಗಿಯಿತು;
‘ಹೆಜ್ಜೆಯೇ ಅಲ್ಲ ಮಕುಟದ ಮುತ್ತು ಅದು,
ಇರಲಿ ರಾಜತ್ವ ನೆಪಮಾತ್ರ’ ಎನುವಂತಿಲ್ಲ,-
ಮಕುಟ ರಹಿತ ಸಾಮ್ರಾಜ್ಞಿ ಭಾರತಲಕ್ಷ್ಮಿ,
ರಾಜತ್ವ ರಹಿತ ರಾಜ್ಯಾಂಗ ಮನೋಮಂದಿರೆ.

ನೆನೆ ನೆನೆ ಓ ಮನನೆ ನಿನ್ನ ಎದೆಗತ್ತಲೆಯೆ
ಬಲಿಗೊಟ್ಟ ತಂದೆ ಬಾಳಿನ ಚಂದ್ರಬಿಂಬವನು.
ಆ ನೋಟ ನಿನ್ನ ಕಣ್ಣಾಗಿ, ಅಮೃತವೆ ತುಂಬಿ,
ಗಾಂಧಿಜಿಯ ಮಂದಹಾಸವೆ ಗುರುವಾಗಲಿ !

ಬಾಂಬಿನ ಅಲಂಕಾರ ನಿನಗಿಲ್ಲ, ತಾಯೆ,
ಶಾಂತಿ ಪ್ರಿಯೆ, ಚಂದ್ರಕಾಂತಿ ಪ್ರಿಯೆ,
ಗಂಗಾ ಯಮುನಾ ನದನದೀ ಸ್ನಾತೆ,
ಉಪನಿಷದ್ವಿಪಿನ ಹೋಮಾಗ್ನಿ ಸಂಜಾತೆ !

ಚಳಿಗಾಲ ಬಂದಿರಲು, ಮುದುಕಿ ಮುಮ್ಮೂಲೆಯಲಿ
ಒಂದು ಕಿಡಿ ಕೆಂಡದೆದುರಿನಲಿ ಮೈ ಹಿಡಿಯಾಗಿ
ಬೆದರಿ ಕುಳಿತಂತೆ, ಚಿಂತೆಗೆ ಆತ್ಮನನು ತೆತ್ತು
ಸಂಗ್ರಾಮ ಭೀತಿಯಲಿ ಸೋತು ಸೊರಗಿ ಜಗತ್ತು
ದೂರ ಸಭೆಗಳಲಿ ಮುಗಿಯುವ ಮುನ್ನ ಎಚ್ಚರಿಸು.
ನಿನ್ನ ಗಂಭೀರವಾಣಿಯ ಪಾರಿವಾಳಗಳ
ಬೆಳ್ಗರಿಯ ಬೀಸಿ ಶಾಂತಿಯ ಶಿಶುವನುಪಚರಿಸು;
ಅದು ಬೆಳೆದು ಲೋಕನಾಯಕನಾಗಿ ರಾರಾಜಿಸಲಿ!

ಜಗಜ್ಜನನಿಯಲ್ಲ ನೀನು; ಜಗನ್ಮೋಹಿನಿಯೂ ಅಲ್ಲ;
ಜಗದ್ಧಾತ್ರಿಯಾಗಿರು ನೀನು; ಅಹಿಂಸಾವತ್ಸಲೆ,
ನಿನ್ನ ಶಾಸನವಿದು (ನಡೆ ನಗಾರಿಯ ಮೇಲೆ;
ಈ ಧರ್ಮ ನಿನ್ನ ಬಾವುಟದ ಇನ್ನೂ ಮೇಲೆ):

“ವಯಂ ಪುನಃ ಏವಂ ಆಚಕ್ಷಾಮಹೇ,
ಏನಂ ಭಾಷಾಮಹೇ, ಏವಂ ಪ್ರರೂಯಾಮಃ,
ಏವಂ ಪ್ರಜ್ಞಾಪಯಾಮಃ,-
ಸರ್ವೇ ಪ್ರಾಣಾಃ, ಸರ್ವೇ ಭೂತಾಃ, ಸರ್ವೇ ಜೀವಾಃ,
ಸರ್ವೇ ಸತ್ವಾಃ,
ನ ಹಂತಾವ್ಯಾಃ
ನ ಆಜ್ಞಾಪರಿಯಿತವ್ಯಾಃ
ನ ಪರಿಗ್ರಹೀತವ್ಯಾಃ
ನ ಪರಿತಾಪಯಿತವ್ಯಾಃ
ನ ಉಪದ್ರೋತವ್ಯಾಃ
ಆರ್ಯವಚನಮೇತತ್
ಓಂ ತತ್‍ಸತ್.”
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...