ಹಾಡು-ಪಾಡು

ಕುಸುಮವೊಂದು ಉಲ್ಲಾಸದಿಂದ
ಅರಳಿನಿಂತು ನಕ್ಕಿತು |

ನಭದ ನೀಲಿ ಬಣ್ಣ ಕಂಡು
ನಾನೇ ಚೆಲುವೆ ಎಂದಿತು |

ಇಳೆಯ ಮೇಲಣ ಕೊಳೆಯ ಕಂಡು
ಹಮ್ಮಿನಿಂದ ಅಣಕಿತು |

ಸುಳಿದು ಸೂಸೋ ತಂಗಾಳಿಗೆ
ಒನಪಿನಿಂದ ಬಳುಕಿತು |

ಹಾರಿ ಬಂದ ದುಂಬಿಯುಸಿರು
ಮಧುರ ಸುಧೆಯೆ ಎಂದಿತು |

ಮುಂಬೆಳಗು ಜಾರೆ
ಧಗೆ ಬಗೆಯು ಏರಿ ಏರೆ
ತಾಪಕದುವೆ ಬಳಲಿತು |

ಮುಖದಿ ಮೂಡಿದ ನೆರಿಗೆ ಕಂಡು
ದುಃಖದಿಂದ ನೊಂದಿತು |

ಮುಗಿಲ ಸ್ವಚ್ಛವಾದ ಬಣ್ಣ
ಇಳೆಯ ಪುಷ್ಟವಾದ ಮಣ್ಣ |

ವಂದಿಸುತಲೇ ಉದುರಿತು
ಉದುರಿ ಮಣ್ಣ ಸೇರಿತು ||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ವಾರಿಜಮುಖಿ ದೊಡ್ಡಶಹರ ಹುಬ್ಬಳ್ಳಿಯೊಳು
Next post ನಾನು ಬದುಕುತ್ತೇನೆ

ಸಣ್ಣ ಕತೆ

  • ಕರಿಗಾಲಿನ ಗಿರಿರಾಯರು

    ಪ್ರಜಾಪೀಡಕನಾದ ಮೈಸೂರಿನ ಟೀಪೂ ಸುಲ್ತಾನನನ್ನು ಶ್ರೀರಂಗ ಪಟ್ಟಣದ ಯುದ್ಧದಲ್ಲಿ ಕೊಂದು ಅವನ ರಾಜ್ಯವನ್ನು ಇಂಗ್ಲಿಶ್ ಸರಕಾರ ದವರು ತಮ್ಮ ವಶಕ್ಕೆ ತೆಗೆದುಕೊಂಡ ಕಾಲಕ್ಕೆ, ಉತ್ತರಕರ್ನಾಟಕದ ನಿವಾಸಿಗಳಾದ ಅನೇಕ… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ಮರೀಚಿಕೆ

    ನಂಬಿದರೆ ನಂಬಿ ಬಿಟ್ಟರೆ ಬಿಡಿ ನನ್ನೆಲ್ಲಾ ಭಾವನೆಗಳೂ ತಬ್ಬಲಿಗಳಾಗಿಬಿಟ್ಟಿವೆ. ಪ್ರೇಮವೆಂದರೆ ತ್ಯಾಗವೆ, ಭೋಗವೆ, ಭ್ರಮೆಯೆ ಆಥವಾ ಕೇವಲ ದಾಸ್ಯವೆ? ಮನಸ್ಸಿಗಾದ ಗ್ಯಾಂಗ್ರಿನ್ ಕಾಯಿಲೆಯೆ? ಇಂತಹ ದುರಾರೋಚನೆಗಳು ಹುಟ್ಟಲು… Read more…

  • ಯಿದು ನಿಜದಿ ಕತೀ…

    ಯೀ ಕತೀನ ನಾ... ಯೀಗಾಗ್ಲೇ, ಬರ್ಲೇಬೇಕಾಗಿತ್ತು! ಆದ್ರೆ ನಾ ಯೀತನ್ಕ...  ಯಾಕೆ ಬರ್ಲೀಲ್ಲ? ನನ್ಗೇ ಗೊತ್ತಿಲ್ಲ. ಯಿದು ನಡೆದಿದ್ದು... ೧೯೬೬ರಲ್ಲಿ. ‘ವುಗಾದಿ ಮುಂದೆ ತಗಾದಿ...’ ಅಂಬಂಗೆ,  ವುಗಾದಿ… Read more…

cheap jordans|wholesale air max|wholesale jordans|wholesale jewelry|wholesale jerseys