ಸ್ವರ್ಣಪಂಜರ

ನಾನು ಹಕ್ಕಿ ಆದರೂಽನು
ಹಾರಲಾರೆ ಇನ್ನುಽ ನಾಽನು ||

ಪುಕ್ಕ ಬಿಗಿದ ಕ್ರೂರಗಣ್ಣು
ಯಾವ ಯುಗದ ಮಾಯೆಯೋ
ಅತಂತ್ರ ತಂತ್ರ ಪಾರತಂತ್ರ್‍ಯದಲ್ಲಿ
ಸ್ವತಂತ್ರ ಬರೀ ಛಾಯೆಯೋ ||

ಮೇಘ ಮುಗಿಲ ಮೇಲ್ಮೆ ಬಲ್ಮೆ ಸಾಲಲಿ
ಶಂಕೆಯಲೆಯಲೆ ಭೀತಿಯು
ಅನಿಲನಿಲದ ಕೊರಳ ರವದಲಿ
ಕಣ್ಣ ಬಯಕೆಯ ಗೀತೆಯು ||

ಆವ ಮೊಟ್ಟೆಯೊಡೆದು ಬಂದ
ಶೂಲ ಶೃಂಖಲೆ ಪಂಜರಿ
ಯಾವ ಮತಿಯೊಳ್ಮಥಿಸಿ ಬಂದ
ನಿಯತಿ ಯತಿಯ ಕಣ್ಣುರಿ ||

ಗ್ರಹ ತಾರೆ ಕಾಯ ಪಥಗಳಲ್ಲೂ
ಕರಿನೆರಳ ಸರಳ ಬಂಧನ
ಶತ ಶತಮಾನಗಳ ಹೆರಿಗೆಯಲ್ಲೂ
ವಿಪಿನ ವಿಪನದ ರೋದನ ||

*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸಣ್ಣ ಹುಡುಗನ ಶಡುವಿಗೆ
Next post ನೀ ಬರುವೆಯೆಂದು

ಸಣ್ಣ ಕತೆ

  • ಕೇರೀಜಂ…

    ಮಂಜೇಲ್ಮುಂಜೇಲಿ ಯೆದ್ಬೇಗ್ನೇ ಕೇರ್ಮುಂದ್ಗಡೆ ಸಿವಪ್ಪ ಚೂರಿ, ಕತ್ತಿ, ಕುಡ್ಗೋಲು, ಯಿಳ್ಗೆಮಣೆ, ಕೊಡ್ಲಿನ... ಮಸ್ಗೆಲ್ಗೆ ಆಕಿ, ಗಸ್ಗಾಸಾ... ನುಣ್ಗೆ ತ್ವಟ್ವಟ್ಟೇ... ನೀರ್ಬಟ್ಗಾಂತಾ, ಜ್ವಲ್ಸುರ್ಗಿಗ್ಯಾಂತಾ, ಅವ್ಡುಗಚ್ಗೊಂಡೂ ಮಸೆಯತೊಡ್ಗಿದ್ವನ... ಕಟ್ದಿ ತುರ್ಬು,… Read more…

  • ಗಿಣಿಯ ಸಾಕ್ಷಿ

    ಹತ್ತಿರವಿದ್ದ ನೆರೆಹೊರೆಯ ಮನೆಯವರಿಗೆ ಗಿಣಿಯ ಕೀರಲು ಕಿರುಚಾಟ ಕೂಗಾಟ ಸತತವಾಗಿ ಕೇಳಿಬಂದಾಗ ಅವರು ಅಲ್ಲಿಗೆ ಧಾವಿಸಿ ಬಂದಿದ್ದರು. ಗೌರಿಯು ಕಳೇಬರವಾಗಿ ಬಿದ್ದಿರುವುದು ನೋಡಿ ಅವರಿಗೆ ದಿಗ್ಭ್ರಾಂತಿಯಾಯಿತು. ಅವಳ… Read more…

  • ಜೀವಂತವಾಗಿ…ಸ್ಮಶಾನದಲ್ಲಿ…

    ಎರಡು ಮೂರು ವರ್ಷದ ಅಂತರದಲ್ಲಿ ಒಂದಾದ ಮೇಲೊಂದು ಗಂಡು ಮಕ್ಕಳು ಜನನವಾದಾಗ ದೇಬಾನಂದಸಾಹುಗೆ ಅವನ ಪತ್ನಿ ನಿಲಾಂದ್ರಿಗೆ ಬಹಳ ಸಂತಸವಾಗಿತ್ತು. "ಮಕ್ಕಳು ದೊಡ್ಡವರಾಗಿ ವಿದ್ಯಾವಂತರಾಗಿ ಉದ್ಯೋಗ ಮಾಡಿದರೆ… Read more…

  • ಅಪರೂಪದ ಬಾಂಧವ್ಯ

    ಹೆತ್ತ ತಾಯಿ ಬಿಟ್ಟುಹೋದ ಎರಡು ಮುಂಗಸಿ ಮರಿಗಳು ಅನಾಥವಾಗಿ ಚೀರಾಡುತ್ತಿದ್ದುದು, ಮನೆಯ ಮಕ್ಕಳ ಕಣ್ಣಿಗೆ ಬಿದ್ದಿತು. "ಅಪ್ಪಾ ಇಲ್ಲಿ ನೋಡು, ಮುಂಗುಸಿ ಮರಿ ಅಳುತ್ತಾ ಇವೆ. ಅದಕ್ಕೆ… Read more…

  • ಪತ್ರ ಪ್ರೇಮ

    ಅಂಚೆ ಇಲಾಖೆಯ ಅದೊಂದು ಸಮಾರಂಭ. ಇಲಾಖೆಯ ಸಿಬ್ಬಂದಿ ವರ್ಗದ ಕಾರ್ಯದಕ್ಷತೆ ಕುರಿತು ಕೇಂದ್ರ ಕಾರ್ಮಿಕ ಸಚಿವ ಆಸ್ಕರ್‍ ಫರ್ನಾಂಡಿಸ್ ಅಮೆರಿಕಾದಲ್ಲಿ ನಡೆದ ಒಂದು ಸತ್ಯ ಘಟನೆ ಎಂದು… Read more…

cheap jordans|wholesale air max|wholesale jordans|wholesale jewelry|wholesale jerseys