ಭಾಷ್ಯ ಬರೆಯುವುದೆಂತು

ಭೂರಮೆಯ ಭೌಮದನಿಕೇತನಕೆ
ಭಾಷ್ಯ ಬರೆಯುವುದೆಂತು ಬರಿ ಮಾತು ||
ಮೌನ ತವಸಿಯ ತಪದಾ ನೆಲೆಯಲಿ
ಮಾತಿಗೆಲ್ಲಿಯ ಕಾಲ ಸಂದಲಹುದು ||

ಎತ್ತರೆತ್ತರ ಶೃಂಗಾರನಂಗವು ಮೌನ
ಹಿಮದ ಪಾದಾದಿಯಲು ಮತ್ತೆ ಮೌನ ||
ಕಂದರಂದ್ಹರದಾಳದಳದಲೂ ನಿಃಶಬ್ದ
ನೀರವ ಉಷೆಗೆ ಸಂಧ್ಯಾ ಧ್ಯಾನ ಯಾನ ||

ಅಮರ ಸಮೀರದಿ ಗಾನ ದೌಘನ
ಮೇಘ ಮಂಡಲದ ತಾಳವಾದನ ||
ಸೃಷ್ಟಿ ಸಮಾಧಿಸ್ಥ ಸ್ಥಿತಿ ಯತಿ ಧ್ಯಾನ
ಋಕ್ಕುಗಳಾ ನಾದದಾ ಬ್ರಹ್ಮ ಬಿಂದು ||

ಕರ್ಮದಾಚೆಯ ವೇದಾಂತ ಸಾರದಲಿ
ಜೀವ ರೂಹಿರೂಪಿನೊಳಗಾತ್ಮ ಸಿಂಧು ||
ಅಂಗಾನಂಗವು ರಂಗ ಬಿನ್ನಪಮಾಟವು
ಅನಂಗ ಸಂಗ-ಸಾಂಗತ್ಯದ ನೋಟವು ||

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಶೂನ್ಯ
Next post ಮಾದಾಯಿ

ಸಣ್ಣ ಕತೆ

  • ಮೌನರಾಗ

    ಇಪ್ಪತ್ತೊಂಬತ್ತು ದಾಟಿ ಮೂವತ್ತಕ್ಕೆ ಕಾಲಿರಿಸುತ್ತಿದ್ದ ಸುಧೀರ್ ಮದುವೆಯ ಬಗ್ಗೆ ತಾಯಿ ಸೀತಮ್ಮ, ತಂದೆ ರಂಗರಾವ್ ಅವರಿಗೆ ಬಹಳ ಕಾತುರವಿತ್ತು. ಹೆಣ್ಣುಗಳನ್ನು ಸಂದರ್ಶಿಸಲು ಒಪ್ಪದೇ ಇದ್ದ ಸುಧೀರನ ಮನೋ… Read more…

  • ಬಲಿ

    ಅವಳು ಭಾಗಶಃ ಚಟ್ಟೆಯಾದ ಕಪ್ಪು ಬಣ್ಣಕ್ಕೆ ತಿರುಗಿದ ಅಲ್ಯೂಮೀನಿಯಂ ತಟ್ಟೆಯೊಳಗೆ ಸ್ವಲ್ಪ ಹಾಲು ಸುರಿದು ಅದಕ್ಕೆ ಸ್ವಲ್ಪ ನೀರನ್ನು ಬೆರೆಸಿ, ಒಲೆಯ ಮೇಲಿಟ್ಟು ಮುಚ್ಚಳ ಮುಚ್ಚಿದಳು. ಒಲೆಯ… Read more…

  • ಲೋಕೋಪಕಾರ!

    ಸಾಥಿ ಶಿವರಾವ ಅವರಿಗೆ ಬಹು ದೊಡ್ಡ ಚಿಂತೆ! ಅವರು ಅನೇಕ ಪ್ರಶ್ನೆಗಳನ್ನು ಬಹು-ಸರಳವಾಗಿ ಬಿಡಿಸುತ್ತಿದ್ದರು. ಪರೀಕ್ಷೆಯಲ್ಲಿ ಅನೇಕ ಪ್ರಶ್ನೆಗಳಿಗೆ ಉತ್ತರ ಬರೆದಿದ್ದಾರು. ಆದರೆ ಎಂತಹ ದೊಡ್ಡ ಪ್ರಶ್ನೆ… Read more…

  • ಗಂಗೆ ಅಳೆದ ಗಂಗಮ್ಮ

    ಕನ್ನಡ ನಾಡು ಆರ್ಯದ್ರಾವಿಡ ಸಂಸ್ಕೃತಿಗಳನ್ನು ಅರಗಿಸಿಕೊಂಡು ತನ್ನದಾದ ಒಂದು ಉಚ್ಚ ಸಂಸ್ಕೃತಿಯಿಂದ ಬಹು ಪುರಾತನ ಕಾಲದಿಂದಲೂ ಕೀರ್ತಿಯನ್ನು ಪಡೆದಿದೆ. ಇಂತಹ ನಾಡಿನಲ್ಲಿ ಕಾಣುವ ಅವಶೇಷಗಳು ಒಂದೊಂದು ಹಿರಿಸಂಸ್ಕೃತಿಯ… Read more…

  • ಅವನ ಹೆಸರಲ್ಲಿ

    ಎಂದಿನಂತೆ ಬೆಳಿಗ್ಗೆ ಮಾಮೂಲಿ ಸಮಯಕ್ಕೆ ಎಚ್ಚರವಾದರೂ, ಎಂದಿನ ಉಲ್ಲಾಸ ನನ್ನಲ್ಲಿರಲಿಲ್ಲ. ತಿರುಗುತ್ತಿರುವ ಫ್ಯಾನಿನತ್ತ ದೃಷ್ಟಿ ಇಟ್ಟು ಮಲಗಿಕೊಂಡೇ ಆಲೋಚನೆ ಮಾಡುತ್ತಿದ್ದೆ. ನಿನ್ನೆ ತಾನೇ ಸರಕಾರಿ ಕೆಲಸದಿಂದ ನಿವೃತ್ತಿಯಾಗಿ… Read more…

cheap jordans|wholesale air max|wholesale jordans|wholesale jewelry|wholesale jerseys