ಬಾರೋ ವಸಂತ ಬಾರೋ

ಬಾರೋ ವಸಂತ ಬಾರೋ ||
ಬರಿದಾದ ಈ ಮನಕೆ
ಮುದವ ನೀ ನೀಡಲು|
ಬಾರೋ ವಸಂತ ಬಾರೋ
ಈ ವಸುಂಧರೆಯ ನವ ವಧುವಾಗಿಸೆ
ರೇಷಿಮೆ ನವ ವಸ್ತ್ರವಾಗವಳ ಸಿಂಗರಿಸೆ||

ಕಾದಿರುವೆ ನಿನಗಾಗೆ
ಹಂದರವ ಅಣಿಮಾಡಿ|
ಆಲಿಸಲು ಕುಳಿತಿರುವೆ
ಕೋಗಿಲೆಯ ಗಾನ ಇಂಚರವ,
ಹೂ ದುಂಭಿಗಳ ಝೇಂಕಾರವ||

ಬರಿದಾದ ಈ ಗಿರಿ ಕಂದರ
ಬೆಟ್ಟ ಗುಡ್ಡಗಳ ಬಾಹುಗಳಲಿ
ಹಸಿರ ಚಿಗುರನು ಚಿಮ್ಮುತಲಿ|
ತರತರದ ಹೂಗಳಿಗೆ
ಬಣ್ಣದ ಬಣ್ಣದ ರಂಗನು
ತುಂಬುವಂದದಲಿ|
ನೋಡುಗರ ಮನಸ ತಣಿಸುತಲಿ
ಸೂರ್ಯ ಕಿರಣಗಳ ಬಣ್ಣಗಳ
ವರ್ಣವನು ವರ್ಣಿಸುತಲಿ||
ಬಾರೋ ವಸಂತ ಬಾರೋ
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೇವಿಸುವ ಆಹಾರ ಸುರಕ್ಷಿತವಾಗಿರಲಿ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೧೦೭

ಸಣ್ಣ ಕತೆ

  • ವಿರೇಚನೆ

    ರವಿವಾರ ರಜವೆಂದು ರಾಮರಾವು ಶನಿವಾರ ರಾತ್ರಿಯೇ ಭೇದಿಗೆ ಔಷಧಿ ತೆಗೆದುಕೊಂಡ, ಕೆಲವು ತಿಂಗಳುಗಳಿಂದ ಊಟಕ್ಕೆ ರುಚಿಯಿಲ್ಲ. ತಿಂದದ್ದು ಜೀರ್ಣವಾಗುವುದಿಲ್ಲ. ರಾತ್ರಿ ನಿದ್ರೆ ಬರುವುದಿಲ್ಲ, ಹೊಟ್ಟೆ ಉಬ್ಬುತ್ತಿದೆ, ದೃಷ್ಟಿ… Read more…

  • ಧನ್ವಂತರಿ

    ಡಾ|| ಕೃಷ್ಣ ಪ್ರಸಾದ್ ಮೂಲತಃ ದಕ್ಷಿಣ ಕನ್ನಡ ಜಿಲ್ಲೆಯವರು. ಅವರು ಯಾದಗಿರಿ ಜಿಲ್ಲೆ ಸುರಪುರ ತಾಲ್ಲೂಕಿನ ಕೆಂಭಾವಿಯಲ್ಲಿ ಬಂದು ನೆಲೆಸಿರುವುದೂ ಒಂದು ಆಕಸ್ಮಿಕವೇ. ಒಂದು ದಿನ ತಮ್ಮ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…

  • ದಿನಚರಿಯ ಪುಟದಿಂದ

    ಮಂಗಳೂರಿನ ಹೃದಯ ಭಾಗದಿಂದ ಸುಮಾರು ೧೫ ಕಿ.ಮೀ. ದೂರದಲ್ಲಿರುವ ಚಿತ್ರಾಪುರ ಪೇಟೆ ಕೆಲವು ವಿಷಯಗಳಲ್ಲಿ ಪ್ರಖ್ಯಾತಿಯನ್ನು ಹೊಂದಿದೆ. ಸಿಟಿಬಸ್ಸುಗಳು ಇಲ್ಲಿ ಓಡಾಡುತ್ತಿಲ್ಲವಾದರೂ ಬಸ್ಸುಗಳಿಗೇನೂ ಕಮ್ಮಿಯಿಲ್ಲ. ಎಕ್ಸ್‌ಪ್ರೆಸ್ ಬಸ್ಸುಗಳು… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…