ಏನೇ ಬಂದರೂ

ಏನೇ ಬಂದರೂ ನೀ ದಯೆತೋರು
ನಿನ್ನಾ ದಯೆಯಲಿ ಬಾಳನು ನೀಡು |
ಬಾನಿಗೆ ರವಿಕಾಂತಿ ಶೋಭಿಸುವಂತೆ
ನನ್ನೀ ಬಾಳಿಗೆ ನೀ ಬೆಳಕಾಗು||ಕೃಷ್ಣಾ||

ಕಷ್ಟವೇ ಬರಲಿ, ಬದುಕಲಿ
ಕಾಳಿರುಳ ಕತ್ತಲೆ ಕವಿಯಲಿ|
ನಿನ್ನಾಕರುಣೆಯ ಕಿಡಿಯೊಂದಿರಲಿ
ಎದುರಿಸಿ ಜಯಿಸುವೆ ಕಠಿಣ ಸಂಕೋಲೆ||

ನಿಂತ ನೆಲವೆ ಕುಸಿಯಲಿ
ಜೀವವಿದು ಪಾತಾಳವನೇ ಸೇರಲಿ|
ನಿನ್ನಾಕರುಣೆಯ ಕರೆಯದು ಕೇಳೆ
ಜ್ವಾಲಾಮುಖಿಯಂತೆ ನೆಲಸೀಳಿ ಬರುವೆ||

ಬರವೇ ಬರಲಿ ಕ್ಷಾಮವೇ ಇರಲಿ
ಭೀಕರ ರೋಗವೇ ಬಳಲಿಸಿ ಬೇಯಿಸಲಿ|
ನಿನ್ನಾ ಅಭಯವು ಅರಳಿದ ಮರುಕ್ಷಣ
ನಾನುದ್ಭವಿಸುವೆ ಶಿಲ್ಪಕಲಾಮೂರ್ತಿಯಂತೆ
ಹೊಳೆಯುತಲಿ ಕಣಕಣ||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ನಮ್ಮ ಆರೋಗ್ಯದಲ್ಲಿ ವಿಟಮಿನ್ನುಗಳ ಪಾತ್ರವೇನು?
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೩

ಸಣ್ಣ ಕತೆ

  • ಕನಸುಗಳಿಗೆ ದಡಗಳಿರುದಿಲ್ಲ

    ಬೆಳಗ್ಗಿನ ಸ್ನಾನ ಮುಗಿಸಿದ ವೃಂದಾ ತನ್ನ ರೂಮಿಗೆ ಬಂದು ಬಾಗಿಲುಹಾಕಿಕೊಂಡು ಕನ್ನಡಿಯಲ್ಲಿ ತನ್ನ ದೇಹ ಸಿರಿಯನ್ನೊಮ್ಮೆ ನೋಡಿಕೊಂಡಳು. ಯಾಕೋ ಅವಳ ಮೈ - ಮನ ಒಮ್ಮೆ ಪುಲಕಿತವಾಯಿತು.… Read more…

  • ಮಲ್ಲೇಶಿಯ ನಲ್ಲೆಯರು

    ಹೇಮರಡ್ಡಿ ಪ್ರಭುಗಳು ಒಂದು ಊರಿನ ದೇಸಾಯರು. ಆ ಗ್ರಾಮದ ಉತ್ಪನ್ನವು ಆರೇಳು ಸಾವಿರ ರೂಪಾಯಿ ಇರುವದಲ್ಲದೆ ದೇಸಾಯರಿಗೆ ತೋಟ ಪಟ್ಟಿ ಮನೆಯ ಒಕ್ಕಲತನಗಳಿಂದಾದರೂ ಪ್ರಾಪ್ತಿಯು ಚನ್ನಾಗಿತ್ತು. ಅವರೊಂದು… Read more…

  • ಮತ್ತೆ ಬಂದ ವಸಂತ

    ಚಿತ್ರ: ಆಮಿ ಮೊದಲ ರಾತ್ರಿಯ ಉನ್ಮಾದದಲ್ಲಿದ್ದ ಮಧುವಿನ ಕಿವಿ ಹಿಂಡಿ ಅವಳಂದಳು. ‘ಮಧು, ಇಂದಿನಿಂದ ನಾವು ಗಂಡ - ಹೆಂಡತಿಯಾಗಿರುವುದು ಬೇಡ. ಬದುಕಿನ ಕೊನೆ ತನಕವೂ ಗೆಳೆಯ… Read more…

  • ಆಮಿಷ

    ರಮಾ ಕುರ್ಚಿಯನ್ನೊರಗಿ ಕುಳಿತಿದ್ದಳು. ದುಃಖವೇ ಮೂರ್ತಿವೆತ್ತಂತೆ ಕುಳಿತಿದ್ದ ಅವಳ ಹೃದಯದಲ್ಲಿ ಭೀಕರ ಕೋಲಾಹಲ ನಡೆದಿತ್ತು. ಕಣ್ಣುಗಳು ಆಳಕ್ಕಿಳಿದಿದ್ದವು. ದೇಹದ ಅಣು ಅಣುವೂ ನೋವಿನಿಂದ ಮಿಡಿಯುತ್ತಿತ್ತು. "ತಾನೇಕೆ ದುಡುಕಿಬಿಟ್ಟೆ?… Read more…

  • ದೇವರು ಮತ್ತು ಅಪಘಾತ

    ಊರಿನ ಕೊನೆಯಂಚಿನಲ್ಲಿದ್ದ ಕೆರೆಯಂಗಳದಲ್ಲಿ ಅಣಬೆಗಳಂತೆ ಮೈವೆತ್ತಿದ್ದ ಗುಡಿಸಲುಗಳಲ್ಲಿ ಕೊನೆಯದು ಅವಳದಾಗಿತ್ತು. ನಾಲ್ಕೈದು ಸಾರಿ ಮುನಿಸಿಪಾಲಿಟಿಯವರು ಆ ಗುಡಿಸಲುಗಳನ್ನು ಕಿತ್ತು ಹಾಕಿದ್ದರೂ ಮನುಷ್ಯ ಪ್ರಾಣಿಗಳ ಸೂರಿನ ಅದಮ್ಯ ಅವಶ್ಯಕ… Read more…