ಏಕೆ ಹುಡುಕಲಿ ನಿನ್ನ?

ಏಕೆ ಹುಡುಕಲಿ ನಿನ್ನ?
ಜಗಜ್ಜಾಹೀರವಾಗಿರಲು ನೀನು|
ಏಕೆ ಕಾಣಿಸುವುದಿಲ್ಲವೆನ್ನಲಿ
ಸರ್ವವ್ಯಾಪಿಯಾಗಿರುವ ನಿನ್ನ|
ಅಣುರೇಣು ತೃಣಕಾಷ್ಟದಲಿ, ಎಲ್ಲಂದರಲ್ಲಿ
ಸರ್ವಾಂತರ್ಯಾಮಿಯಾದ ನಿನ್ನ||

ನಿನ್ನ ಒಂದು ಈ ಭೂ‌ಅರಮನೆಯಲಿ
ಗಾಳಿ, ನೀರು, ಬೆಳಕು
ಶಕ್ತಿಯಾಗಿ ನಿರಂತರ ಚಲಿಸುತಿರಲು|
ಎಂದೋ ಅತಿಥಿಯಾಗಿ
ಬಂದು ಹೋಗುವ ನಾನು
ನಿನ್ನ ಅರಿಯಲು ಸಾಧ್ಯವೇ||

ಅನಂತ ಶತಮಾನಗಳ ಹಿಂದೆ
ನೀ ಸೃಷ್ಟಿಸಿರುವ ನಿನ್ನ ಕುರುಹುಗಳ
ಸರಿಯಾಗಿ ಅರಿಯದಲೆ
ನಿನ್ನ ಅಲ್ಲಗಳೆವುದು ನ್ಯಾಯವೇ?
ನೀನಿತ್ತ ಮತಿಯ ಉಪಯೋಗಿಸಿ
ನಿನ್ನ ಪ್ರಶ್ನೆಮಾಡುವುದು ಸರಿಯೇ||

ಕುರುಡನೊಬ್ಬ ಆನೆಯ ಕಾಲ ಮುಟ್ಟಿ
ಅದು ಕಂಬದಂತಿದೆ ಎಂದಂತೆ
ಪರಿಕಲ್ಪಿಸುವುದು ಸರಿಯೇ?
ನಿನ್ನನರಿಲುಬೇಕು ಅಂತರಂಗದ ಕಣ್ಣು,
ಸತ್ಯವನರಿಯುವ ಕಣ್ಣು||

ಚಂದ್ರ, ಮಂಗಳನ ಮೇಲೆ ಕಾಲಿರುಸಿದಕೆ|
ತಂತ್ರಜ್ಞಾನದಿ ಹಕ್ಕಿಯಂದದಿ
ಹಾರಾಡುವುದ, ಪ್ರಾಣಿಯಂತೆ ನೀರಲಿ
ಚಲಿಸುವುದ ಕಲಿತಿದಕೆ,
ಅಂತರಿಕ್ಷದಲಿ ಸಂಚರಿಸುವುದ
ಅರಿತಿರುವುದಕೆ
ದೇವರಿಲ್ಲವೆಂಬುದು ತರವೇ?||

ಕೋಟ್ಯಾನು ಕೋಟಿ
ಜೀವ ಜಂಗುಳಿಯ ಸೃಷ್ಟಿಸಿ
ಅನ್ನಾದಿಗಳನಿತ್ತು ಸಲಹುವ
ಆ ದೈವವ ಅಪಮಾನಿಸುವುದು
ನ್ಯಾಯವೇ, ಧರ್ಮವೇ ? ||

ಬೇಡ, ಹೆತ್ತತಾಯಿಯನೇ
ಶಂಕಿಸಿಸುವುದು ದೂಷಿಸುವುದು|
ತಾಯಿ ಎದೆಹಾಲು ಕುಡಿದು
ಬೆಳೆದಾದ ಮೇಲೆ,
ಅದು ನಿನ್ನೆಯದೊ ಇಂದಿನದೊ
ಎಂಬ ರಾಜಕೀಯತೆ||

ನೀ ಚಲಿಸುತ್ತಿರುವುದು
ನಿನ್ನ ಶಕ್ತಿಯಿಂದ ಎನ್ನುವುದಾದರೆ!
ಈ ಭೂಮಿ, ಈ ಬ್ರಹ್ಮಾಂಡ
ಸಹಾಸ್ರಾರು ವರುಷ ನಿರಂತರ
ಹೀಗೆ ಸಾಗುತ್ತಿರುವುದು
ಆ ದೈವದಶಕ್ತಿ ಇರುವುದರಿಂದಲೇ|
ಅನ್ಯತಾ ಕಾಲಹರಣವ ಮಾಡದಲೆ
ಅನ್ಯರ ಮಾರ್ಗದಲಿ ತೊಡಕಾಗದೆ
ನೀ ಬಂದ ಕಾರ್ಯ ಮುಗಿಸುವುದೇ ಲೇಸು||
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಸೂರ್ಯನ ವಿದ್ಯುತ್ ಆವೇಷ
Next post ಗಳಿಗೆಬಟ್ಟಲ ತಿರುವುಗಳಲ್ಲಿ – ೧೨೭

ಸಣ್ಣ ಕತೆ

  • ಪ್ರಥಮ ದರ್ಶನದ ಪ್ರೇಮ

    ಭಾಗೀರಥಿ ತೀರದಲ್ಲಿರುವದೊಂದು ಅತಿ ರಮಣೀಯವಾಗಿರುವ ಪ್ರದೇಶದಲ್ಲಿ ಕುಸುಮಪುರವೆಂಬ ಚಿಕ್ಕಿದಾದ ನಗರವಿತ್ತು. ಭೂಮಿಯ ಗುಣಕ್ಕಾಗಿ ಆ ಪ್ರದೇಶದಲ್ಲಿ ಬೆಳೆಯುವ ಬಕುಲ, ಚಂಪಕ, ಮಾಲತಿ, ಪುನ್ನಾಗ, ಗುಲಾಬೆ, ಸೇವಂತಿ ಮುಂತಾದ… Read more…

  • ಕತೆಗಾಗಿ ಜತೆ

    ರಾಜರ ಮನಿಲಿ ವಂದ್ ಮಡವಾಳವ ಬಟ್ಟೆ ಶೆಳೀಲಿಕ್ಕಿದಿದ್ದ. ಅವನಿಗೆ ನೆಂಟ್ರ ಮನಿಗೆ ವಂದಿವ್ಸ ಹೋಗಬೇಕು ಹೇಳಿರೆ ಸೌಡಾಗುದಿಲ್ಲ. ನಿತ್ಯೆ ಬಟ್ಟೆ ಶೆಳುದ್ ವಂದೇಯ. ವಂದಾನೊಂದ ದಿವಸ ಇವತ್… Read more…

  • ದೋಂಟಿ ತ್ಯಾಂಪಣ್ಣನ ಯಾತ್ರಾ ಪುರಾಣವು

    ಸುಮಾರು ಆರೂವರೆ ಅಡಿಗಿಂತಲೂ ಎತ್ತರಕ್ಕೆ ಗಳದ ಹಾಗೆ ಬೆಳೆದಿರುವ ದೋಂಟಿ ತ್ಯಾಂಪಣ್ಣನು ತನ್ನ ದಣಿ ಕಪಿಲಳ್ಳಿ ಕೃಷ್ಣ ಮದ್ಲೆಗಾರರ ಮನೆ ಜಗಲಿಯಲ್ಲಿ ಮೂಡು ಸಂಪೂರ್ಣ ಆಫಾಗಿ ಕೂತಿದ್ದನು.… Read more…

  • ದೇವರು

    ನನ್ನ ದೇವರಿಗೆ, ಬಹಳ ದಿನಗಳ ನಂತರ ನಿಮಗೆ ಕಾಗದ ಬರೆಯುತ್ತಿದ್ದೇನೆ. ಏಕೆಂದರೆ ನೀವು ಬರೆದ ಕಾಗದಕ್ಕೆ ಉತ್ತರ ಕೇಳಿದ್ದೀರಿ. ನಾನೀಗ ಉತ್ತರ ಬರೆಯಲೇಬೇಕು ಬರೆಯುತ್ತಿದ್ದೇನೆ. "ಪತಿಯೇ ದೇವರು"… Read more…

  • ಗೋಪಿ

    ವೆಂಕಪ್ಪನ ಜೊತೆಗೆ ಒಂದು ಆಕಳು ಇದ್ದೇ ಇದೆ. ಅವನ ಮನೆಯ ಮುಂದೆ ಯಾವಾಗಲೂ ಅದು ಜೋಲುಮೋರೆ ಹಾಕಿಕೊಂಡು ನಿಂತೇ ನಿಂತಿರುತ್ತದೆ. ದಾರಿಯಲ್ಲಿ ಹೋಗುತ್ತಿದ್ದವರನ್ನು ಮಿಕಿ ಮಿಕಿ ಕಣ್ಣು… Read more…

cheap jordans|wholesale air max|wholesale jordans|wholesale jewelry|wholesale jerseys