Home / ಕವನ / ಕವಿತೆ / ಏಕೆ ಹುಡುಕಲಿ ನಿನ್ನ?

ಏಕೆ ಹುಡುಕಲಿ ನಿನ್ನ?

ಏಕೆ ಹುಡುಕಲಿ ನಿನ್ನ?
ಜಗಜ್ಜಾಹೀರವಾಗಿರಲು ನೀನು|
ಏಕೆ ಕಾಣಿಸುವುದಿಲ್ಲವೆನ್ನಲಿ
ಸರ್ವವ್ಯಾಪಿಯಾಗಿರುವ ನಿನ್ನ|
ಅಣುರೇಣು ತೃಣಕಾಷ್ಟದಲಿ, ಎಲ್ಲಂದರಲ್ಲಿ
ಸರ್ವಾಂತರ್ಯಾಮಿಯಾದ ನಿನ್ನ||

ನಿನ್ನ ಒಂದು ಈ ಭೂ‌ಅರಮನೆಯಲಿ
ಗಾಳಿ, ನೀರು, ಬೆಳಕು
ಶಕ್ತಿಯಾಗಿ ನಿರಂತರ ಚಲಿಸುತಿರಲು|
ಎಂದೋ ಅತಿಥಿಯಾಗಿ
ಬಂದು ಹೋಗುವ ನಾನು
ನಿನ್ನ ಅರಿಯಲು ಸಾಧ್ಯವೇ||

ಅನಂತ ಶತಮಾನಗಳ ಹಿಂದೆ
ನೀ ಸೃಷ್ಟಿಸಿರುವ ನಿನ್ನ ಕುರುಹುಗಳ
ಸರಿಯಾಗಿ ಅರಿಯದಲೆ
ನಿನ್ನ ಅಲ್ಲಗಳೆವುದು ನ್ಯಾಯವೇ?
ನೀನಿತ್ತ ಮತಿಯ ಉಪಯೋಗಿಸಿ
ನಿನ್ನ ಪ್ರಶ್ನೆಮಾಡುವುದು ಸರಿಯೇ||

ಕುರುಡನೊಬ್ಬ ಆನೆಯ ಕಾಲ ಮುಟ್ಟಿ
ಅದು ಕಂಬದಂತಿದೆ ಎಂದಂತೆ
ಪರಿಕಲ್ಪಿಸುವುದು ಸರಿಯೇ?
ನಿನ್ನನರಿಲುಬೇಕು ಅಂತರಂಗದ ಕಣ್ಣು,
ಸತ್ಯವನರಿಯುವ ಕಣ್ಣು||

ಚಂದ್ರ, ಮಂಗಳನ ಮೇಲೆ ಕಾಲಿರುಸಿದಕೆ|
ತಂತ್ರಜ್ಞಾನದಿ ಹಕ್ಕಿಯಂದದಿ
ಹಾರಾಡುವುದ, ಪ್ರಾಣಿಯಂತೆ ನೀರಲಿ
ಚಲಿಸುವುದ ಕಲಿತಿದಕೆ,
ಅಂತರಿಕ್ಷದಲಿ ಸಂಚರಿಸುವುದ
ಅರಿತಿರುವುದಕೆ
ದೇವರಿಲ್ಲವೆಂಬುದು ತರವೇ?||

ಕೋಟ್ಯಾನು ಕೋಟಿ
ಜೀವ ಜಂಗುಳಿಯ ಸೃಷ್ಟಿಸಿ
ಅನ್ನಾದಿಗಳನಿತ್ತು ಸಲಹುವ
ಆ ದೈವವ ಅಪಮಾನಿಸುವುದು
ನ್ಯಾಯವೇ, ಧರ್ಮವೇ ? ||

ಬೇಡ, ಹೆತ್ತತಾಯಿಯನೇ
ಶಂಕಿಸಿಸುವುದು ದೂಷಿಸುವುದು|
ತಾಯಿ ಎದೆಹಾಲು ಕುಡಿದು
ಬೆಳೆದಾದ ಮೇಲೆ,
ಅದು ನಿನ್ನೆಯದೊ ಇಂದಿನದೊ
ಎಂಬ ರಾಜಕೀಯತೆ||

ನೀ ಚಲಿಸುತ್ತಿರುವುದು
ನಿನ್ನ ಶಕ್ತಿಯಿಂದ ಎನ್ನುವುದಾದರೆ!
ಈ ಭೂಮಿ, ಈ ಬ್ರಹ್ಮಾಂಡ
ಸಹಾಸ್ರಾರು ವರುಷ ನಿರಂತರ
ಹೀಗೆ ಸಾಗುತ್ತಿರುವುದು
ಆ ದೈವದಶಕ್ತಿ ಇರುವುದರಿಂದಲೇ|
ಅನ್ಯತಾ ಕಾಲಹರಣವ ಮಾಡದಲೆ
ಅನ್ಯರ ಮಾರ್ಗದಲಿ ತೊಡಕಾಗದೆ
ನೀ ಬಂದ ಕಾರ್ಯ ಮುಗಿಸುವುದೇ ಲೇಸು||
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...