ಬೆಸುಗೆ-ವಸುಗೆ

ಯಾವ ಶುಭಗಳಿಗೆಯಲಿ
ಪ್ರಕೃತಿ ತಾನುದೆಯಿಸಿತೊ
ಆವ ಶುಭ ವೇಳೆಯಲಿ
ಜೀವ ಕಣ್ ತೆರೆಯಿತೊ
ಅಮೃತ ಸೆಲೆ ನೆಲೆಯಂತೋ ದಯವಲೀಲೆ ||ಪ||

ಶುಭೋದಯದ ಹಗಲಿರುಳಿನಲಿ
ನವೋದಯದ ಬಾಳ ಬೆಳಕು
ಬೆಸುಗೆ ವಸುಗೆಯಲೆಂತೋ ಸಗ್ಗ ಸುಭಗ ||ಅ.ಪ||

ಈ ಮಣ್ಣು ಕಣ ಕಣದಿ
ಹರಿವ ತೊರೆ ನದನದಿ ರವದಿ
ಅಲೆಯಲೆಯ ಅನಿಲದಲಿ ದೇವ ನೋಟ
ಚಿಗುರು ತಂಬೆಲರಲ್ಲಿ
ಸುಮ ಚೆಲ್ವರಿದ ಸಿರಿಯಲ್ಲಿ
ಕಣ್ಣ ಕಾಂತಿಗೆ ನಿತ್ಯ ಹಬ್ಬದೂಟ

ಅಂಗಲಂಗುಲದಲ್ಲಿ
ಬಾಂದಳದ ಬಿನ್ನಾಣ
ಕುಣಿ-ಕುಣಿವ ಮನಗಳಲಿ ಹರಿಣಿ ಬಿಂಬ
ಏರು ಜವ್ವನದಲ್ಲಿ
ಶೃಂಗಾರದಂದಣದಿ
ತನ್ನ ತಾ ಮರೆವಂಥೆ ಷೋಡಷ ಬಿಂಬ

ನೆಲ ಮುಗಿಲ ಹರಹಿನಲಿ
ಬಾಳ್ಬಳ್ಳಿ ಹರಡಿರಲು
ಅಂಕು ಡೊಂಕಿನ ಹಾದಿ ಮುಳ್ಳ ಭೀತಿ ಏಕೆ
ತೆರೆದ ಗಣ್ಣಿನ ಮನಕೆ
ನೊರೆಯ ಹಾಲಿನ ಗುಣಕೆ
ಹೆಪ್ಪುಗಟ್ಟಿಸಿದರೂ ನವನೀತವಾಗೋ ಚಣಕೆ.

*****

 

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಕ್ರೋಶ
Next post ತಂಗಾಳಿ

ಸಣ್ಣ ಕತೆ

  • ಇನ್ನೊಬ್ಬ

    ದೇವರ ವಿಷಯದಲ್ಲಿ ನಾನು ಅಗ್ನೋಸ್ಟಿಕನೂ ರಾಜಕೀಯದ ವಿಷಯದಲ್ಲಿ ಸೆಂಟ್ರಿಸ್ಟನೂ ಆಗಿದ್ದೇನೆ. ಇವೆರಡೂ ಅಪಾಯವಿಲ್ಲದ ನಿಲುವುಗಳೆಂಬುದು ನನಗೆ ಗೊತ್ತು. ಅಗ್ನೋಸ್ಟಿಕನಾಗಿದ್ದವನನ್ನು ಆಸ್ತಿಕರೂ ನಾಸ್ತಿಕರೊ ಒಂದೇ ತರಹ ಪ್ರೀತಿಯಿಂದ ಕಾಣುತ್ತಾರೆ,… Read more…

  • ದೇವರೇ ಪಾರುಮಾಡಿದಿ ಕಂಡಿಯಾ

    "Life is as tedious as a twice-told tale" ಧಾರವಾಡದ ಶಾಖೆಯೊಂದಕ್ಕೆ ಸಪ್ತಾಪುರವೆಂಬ ಹೆಸರು, ದೂರ ದೂರಾಗಿ ಕಟ್ಟಿರುವ ಆ ಗ್ರಾಮದ ಮನೆಗಳಲ್ಲಿ ಒಂದು ಮನೆಯು… Read more…

  • ಪಾಠ

    ಚೈತ್ರ ಮಾಸದ ಮಧ್ಯ ಕಾಲ. ಬೇಸಿಗೆ ಕಾಲಿಟ್ಟಿದೆ. ವಸಂತಾಗಮನ ಈಗಾಗಾಲೇ ಆಗಿದೆ. ಊರಲ್ಲಿ ಸುಗ್ಗಿ ಸಮಯ. ಉತ್ತರ ಕರ್ನಾಟಕದ ನಮ್ಮ ಭಾಗದಲ್ಲಿ ಹತ್ತಿ ಜೋಳ ಪ್ರಮುಖ ಬೆಳೆಗಳು.… Read more…

  • ಸ್ನೇಹಲತಾ

    ೧೫-೯-೧೯.. ಈಗ ಮನಸ್ಸಿಗೆ ನೆಮ್ಮದಿಯೆನಿಸುತ್ತಿದೆ. ಇಂದಿನಿಂದ ಮತ್ತೆ ನನ್ನ ದಿನಚರಿ ಬರೆಯುವ ಕಾರ್ಯಕ್ರಮವನ್ನು ಆರಂಭಿಸಬೇಕು. ದಿನಚರಿಯೆ ನನ್ನ ಸಹಧರ್ಮಿಣಿ; ನನ್ನ ಸಹ-ಸಂಚಾರಿ; ಅದೆ ನನಗೆ ಸಂತಸ ಕೊಡುವುದು.… Read more…

  • ನಾಗನ ವರಿಸಿದ ಬಿಂಬಾಲಿ…

    ಬಿಂಬಾಲಿ ಬೋಯ್ ತನ್ನ ಅಮ್ಮ ಅಣ್ಣ ಅತ್ತಿಗೆ ಜೊತೆ ಅಟಲಾ ಎಂಬ ಒರಿಸ್ಸಾದ ಹಳ್ಳಿಯಲ್ಲಿ ವಾಸಿಸುತ್ತಿದ್ದಳು. ತಂದೆಯ ಮರಣದ ಮುಂಚೆಯೆ ಅವಳ ಹಿರಿಯಕ್ಕನ ಮದುವೆಯಾಗಿತ್ತು. ತಂದೆ ಬದುಕಿದ್ದಾಗ… Read more…

cheap jordans|wholesale air max|wholesale jordans|wholesale jewelry|wholesale jerseys