ಕೋಣ ಮತ್ತು ನಾವು

ಏಕೆ ಜನುವ ಕೊಟ್ಟೆಯಮ್ಮಾ !
ಗಂಡಾಗಿ
ಜನರ ದೇವರಿಗೆ ತಲೆ ಕೆಡಿಸಿಕೊಳ್ಳಲಿಕೆ.

ನಾನು ಹುಟ್ಟಿದ ಕೂಡಲೆ
ಮಾರಿದೇವಿಯ ಒಳಿತು ಕೋರಿ
ಹರಕೆ ಕಟ್ಟಿ, ಕಾಲು ತೊಳೆದು ಬಿಟ್ಟರು
ಸಾಕಿದ್ದಕ್ಕೆ ಸುಂಕವಾಗಿ ಪ್ರಾಣ ಕೇಳುವ ಜನರು.

ನಾನು ಕೋಣ! ಉಬ್ಬಿ ಹೋದೆ
ದುಡಿಸಿ ದಣಿಸದೆ
ತಿಂದು ತಿರುಗಾಡಿಕೊಂಡು ಬೆಳೆಯಲು ಬಿಟ್ಟಿದ್ದಕ್ಕೆ;
ಗೊತ್ತಾಗಲಿಲ್ಲ ಆಗ ಇದರ ಹಿಂದಿನ ಹಿಕ್ಮತ್ತು.

ಮತ್ತನಾದೆ
ಸಿಕ್ಕ ಸಿಕ್ಕ ಕಡೆಗೆ ನುಗ್ಗಿ
ಸಿಕ್ಕ ಸಿಕ್ಕದ್ದು ಮೇದು
ಸಿಕ್ಕ ಸಿಕ್ಕಂಗೆ ಅಡ್ಡಾಡುತ್ತ
ಸಿಕ್ಕ ಸಿಕ್ಕಲ್ಲಿ ಮಲಗಿ ಎದ್ದು
ಸಿಕ್ಕ ಸಿಕ್ಕಂಗೆ ಕೊಬ್ಬಿ ಬೆಳೆದೆ.

ಕಂಬದಂತ ಕಾಲು
ಹಳೇ ರುಬ್ಬು ಗುಂಡಿನಂತ ತಲೆ
ಉಕ್ಕಿನಂತ ಕೋಡು
ಬೆಂಕಿ ಉಂಡೆಯಂತ ಕಣ್ಣು

ಹೊಗೆ ಕಾರುವ ಹೊಳ್ಳೆ
ಕರ್ರಗೆ ಮಿರ ಮಿರ ಮಿಂಚುವ
ಸಣ್ಣ ಗುಡ್ಡದಂತ ದೇಹ
ನಡೆದಾಡುತಿದ್ದ ನೆಲ ನಡುಗುತಿತ್ತು
ಅಂತಕನ ಕೋಣದಂತೆ.

ಊರೊಳಗೆ ನುಗ್ಗಿದರೆ
ಸಾವನ್ನು ಕಂಡಂತೆ
ಓಡಿ ಹೋಗಿ
ಮಕ್ಕಳು ಮರಿ ಬಾಚಿಕೊಂಡು
ಬಯಲಲ್ಲಿ ಕಟ್ಟಿದ್ದ ದನ ಕರು ಕಣ್ಣಿ ಹರಿದು
ಬಾಗಿಲು ಹಾಕಿ ಕೊಳ್ಳುವರು;
ಕನಸಲ್ಲಿ ಕಂಡರೂ ಬೆಚ್ಚಿ ಬೀಳುವರು.

ನನ್ನ ದೇಹ, ಭಾವದಿ
ಮಾರಿದೇವಿ ಪರಿಭಾವಿಸಿ
ಕೇಡಿನ ಭೀತಿಯಲ್ಲಿ
ತಿರುಗಿ ಬೀಳರು
ಸಹಿಸಿ ನಡೆವರು.

ಅಂತ್ಯವಿಲ್ಲದದು ಯಾವುದಿದೆ ಈ ಲೋಕದಲಿ
ನನಗೂ ಬಂತು;
ಜಾತ್ರೆಯು ಗೊತ್ತಾಯಿತು
ಹುಡುಕಿಸಿ ತಂದರು ನನ್ನನ್ನು ಬಿಡದೆ
ಸುತ್ತಿಸಿದರು ಏಳೂರ ಮನೆ, ಮನೆಯನ್ನು.

ಪೂಜೆಯ ಮಾಡಿಸಿ
ಸುಲಭದಿ ಕಡಿಯಲು
ಪಟ್ಟೆ ಶಿರಕೆ ಎಣ್ಣೆ ಹೊಯ್ಯಿಸಿ
ಕೊಡತಿಯಲಿ ಗುದ್ದುತ್ತಿದ್ದರೆ
ಗುದ್ದು ಗುದ್ದಿಗೂ ಎದ್ದದ್ದು ಬೀಳುತಿತ್ತು ಜೀವ.

ಪಾಷಂಡಿಗಳು
ಕತ್ತರಿಸಿ ಎಸೆಯಲೊಲ್ಲರು!
ತೀರಿ ಹೋಗುತ್ತಿತ್ತಲ್ಲ! ಎಲ್ಲಾ!
ಎಚಿದೊರಲುತಿತ್ತು; ತರಹರಿಸುತಿತ್ತು ಜೀವ.

ಇವರವರೇ ಕೆಲವರು ಮಹಾನುಭಾವರು
ಹಿಂಸೆ ಬೇಡವೆಂದು ಸಾರಿ ಸಾರಿ ಹೇಳಿದರು
ಎಂದಿಗೂ ಕೇಳಿಲ್ಲ; ಕೇಳುವುದಿಲ್ಲ!
ಒಳ್ಳೆಯದನ್ನು ಹೇಳಿದ ಯಾರನ್ನೂ
ಸುಖವಾಗಿ ಸಾಯಲು ಬಿಟ್ಟಿಲ್ಲ
ನ್ಯಾಯವು ಇವರಿಗೆ ಒಂದಲ್ಲ; ಹೊಂದುವುದಿಲ್ಲ
ಜೀವ ಚಕ್ರದ ದುರ್ಬಳಕೆ ನಿಂತಿಲ್ಲ.

ಮೂಢ ನಂಬಿಕೆಯ
ಹೊಸ, ಹೊಸ ಬಟ್ಟೆಯುಟ್ಟುಕೊಂಡು
ಬಂಧು, ಬಳಗ ಕೂಡಿಕೊಂಡು
ಅಸಹಜ ಮಿಂಚನು ತುಂಬಿಕೊಂಡು
ವಿಧ, ವಿಧ ವಾದ್ಯಗಳ ಮೇಳದಲಿ
ಹಾಡುತ್ತ, ಕೂಗುತ್ತ, ಕುಣಿಯುತ್ತ,
ಉನ್ಮಾದ ಸೂಸುತ್ತ,
ಮೌರೆವಣಿಗೆಯಲಿ ಸಾಗಿದರು.

ಉತ್ತೇಜಿತ ಉತ್ಸವ ಗುಡಿಯನು ಸಾರಿತ್ತು
ಪೂಜೆಯು ಮೊದಲಾಯಿತು
ಸ್ಮಶಾನ ಮೌನವು ಕವಿಯಿತು
ಆರತಿಯಾಗಿ ಅಪ್ಪಣೆ ಹೊರಬಿತ್ತು
ಬಿದ್ದವು ತಲೆಗಳು ಸಾಲು, ಸಾಲಾಗಿ
ನನ್ನಿಂದ ಶುರುವಾಗಿ
ಕುರಿ, ಕೋಳಿ ತರುವಾಯ.

ನೋಡಿದರೆ…!
ಒಬ್ಬರ ತಲೆಯೂ ತಗ್ಗಿರಲಿಲ್ಲ
ಪಶ್ಚಾತ್ತಾಪದ ಒಂದು ಕ್ಷೀಣ ಶಬ್ಧವೂ ಕೇಳಿ ಬರಲಿಲ್ಲ.

ಸೃಷ್ಟಿಯಲಿ ಶ್ರೇಷ್ಠರೆನ್ನುವರು
ವಿಚಾರಿಸರು
ನಂಬಿಕಯಲಿ ಯಾವುದನ್ನೂ!!
ಸ್ವಹಿತವಾದಿಗಳು ಏನು ಮಾಡಲು ಹೇಸರು
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಎರಡು ಪರಿವಾರಗಳು
Next post ಪ್ರಕೃತಿ ಎನ್ನನ್ಯಾಕೆ ಬರೆಸಿಹುದು ?

ಸಣ್ಣ ಕತೆ

  • ಡಿಪೋದೊಳಗಣ ಕಿಚ್ಚು…

    ಚಿತ್ರ: ವಾಲ್ಡೊಪೆಪರ್‍ ಬೆಳಿ… ಬೆಳಿಗ್ಗೆನೇ… ಡಿಪೋದಲ್ಲಿ, ಜನ್ರು ಜಮಾಯಿಸಿದ್ದು ಕಂಡು, ಡಿಪೋ ಮ್ಯಾನೇಜರ್ ಮನೋಜ್ ಪಾಟೀಲರ ಹೃದಯ ಬಾಯಿಗೆ ಬಂತು. ’ಮ್ಯಾನೇಜರ್ ಡಿಪೋದಲ್ಲಿ ಕ್ಷಣ ಇಲ್ಲೆಂದ್ರೆ ಸಾಕು…… Read more…

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ದೊಡ್ಡವರು

    ಬೀದಿ ಬದಿಯ ಪುಸ್ತಕದ ಅಂಗಡಿ ಪ್ರಭಾಕರನನ್ನು ಅರಿಯದವರು ಬಹಳ ವಿರಳ. ತಳ್ಳೋ ಗಾಡಿಯ ಮೇಲೆ ದೊಡ್ಡ ಟ್ರಂಕನ್ನಿಟ್ಟು ನಿಧಾನವಾಗಿ ತಳ್ಳಿಕೊಂಡು ಬರುವ ಪ್ರಭಾಕರ ಕೆನರಾ ಬ್ಯಾಂಕಿನ ರಸ್ತೆಬದಿ… Read more…

  • ಇರುವುದೆಲ್ಲವ ಬಿಟ್ಟು

    ನಿಂತ ರೈಲು ಬೋಗಿಯೊಳಗಿಂದ ನನ್ನ ದೃಷ್ಟಿ ಹೊರಗಿನ ನಿಲ್ದಾಣವನ್ನು ವೀಕ್ಷಿಸುತ್ತಿತ್ತೇ ಹೊರತು ನನ್ನ ಮನಸ್ಸು ಮಾತ್ರ ನಾಗಾಲೋಟದಿಂದ ಓಡುತ್ತಿತ್ತು. ಒಂದು ರೀತಿಯಲ್ಲಿ ಆಲೋಚನೆಗಳು ನನ್ನ ಗೆಳೆಯ ಎಂದೇ… Read more…

  • ನಿರೀಕ್ಷೆ

    ಆ ಹಣ್ಣು ಮುದುಕ ಎಲ್ಲಿಂದ ಬರುತ್ತಾನೆ, ಎಲ್ಲಿಗೆ ಹೋಗುತ್ತಾನೆ ಎಂದು ಯಾರಿಗೂ ತಿಳಿಯದು. ಆದರೆ ಎಲ್ಲರೂ ಅವನನ್ನು ಕಲ್ಲು ಬೆಂಚಿನ ಮುದುಕ ಎಂದೇ ಕರೆಯುತ್ತಾರೆ. ಪ್ರೈಮರಿ ಶಾಲೆಯ… Read more…