Home / ಕವನ / ಕವಿತೆ / ನನ್ನೂರ ಬಾಲೆ

ನನ್ನೂರ ಬಾಲೆ

ನನ್ನೂರ ಬಾಲೆ
ರಸ ಕಾವ್ಯ ನವ್ವಾಲೆ
ಸಿಹಿ ನೀರ ತರಲೆಂದು ಅಂಗಳಕ ಇಳಿದಳಂದರೆ…
ಓಣಿಯ ಗಂಡು ಹೆಣ್ಣು ಒಟ್ಟಾಗಿ
ತೇಜಃ ಪುಂಜವು ಕಂಡಂತೆ
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತ ನಿಲ್ಲುವರು.

ಅವಳೋ… ಕಂಡವರ ಕಣ್ಣುಗಳು ಕೆಟ್ಟದಿದು ಅನ್ನದ ಹಾಗೆ
ಸೂಕ್ಷ್ಮವಾಗಿ ಅತ್ತಿತ್ತ ನೋಡುತ್ತ
ಏನನ್ನೋ ಹುಡುಕುತ್ತ
ತೇಲುತ್ತ ನಡೆಯುವಳು ಚಾಣಾಕ್ಷಿ

ಒಳಗಿರುವ ಜೀವ
ಹೊರಗೆಲ್ಲೂ ಸುಳಿಯದಿರಲು
ಒಂದೆಳೆ ಕುಗ್ಗುವಳು ತರಳೆ
ಎಳೆ ಬಾಳೆ ಸುಳಿಗೆ ಬೆಂಕಿ ಝಳವು ಸೋಕಿದಂತೆ.

ಯಾಕಿಲ್ಲ ಯಾಕಿಲ್ಲ ವೆನುತಲಿ
ತನ್ನನ್ನು ತಾನೇ ಸಂಭಾಳಿಸಿ ಕೊಳುತಲಿ
ಸೇದೊ ಬಾವಿಯ ಸಾರುವಳು ಅಭಿಸಾರಿಕೆ.

ಮನಸಿಲ್ಲದ ಮನಸಿನಲಿ
ಆಗಲೂ ಅವಲೋಕನ ಮುಂದುವರಿಸಿ
ಕಂಠಕ್ಕೆ ಸರಕುಣಿಕೆ ಬಿಗಿವಳು
ಬಾವಿಯಲಿ ಇಳಿಬಿಟ್ಟು
ಗುಳು ಗುಳು ತುಂಬಿಸುವಳು ಕೊಡಗಳ.

ಕಲ್ಲು ಕಟ್ಟೆಯ ಪದ್ದಿಗೆ ತುಸುವೆ ಎಡ ಪಾದವ ತೂರಿಸಿ
ಹಾರುತ್ತ, ಹಾರುತ್ತ ಸೆಳೆಯುವಳು ಮೇಲೆ
ನೋಡುವ ಕಣ್ಣಿಗೆ ಹಬ್ಬವನು ತರುವಂತ ಲಾಸ್ಯದಲಿ
ಜಾನಪದ ಲೋಕದ ಐಸಿರಿ; ಕನ್ನಡ ಕುವರಿ.

ತುಂಬಿದ ಕೊಡದಂತ ಹುಡುಗಿ.
ತಲೆಯ ಮೇಲೊಂದು ಎಡದ ನಡುವಲ್ಲೊಂದು ಕೊಡವ
ಬಾಳೆ ಬಾಹುಗಳಲ್ಲಿ ಅವುಕಿ ಹಿಡಿದು
ಭಾರವನು ತೋಲಿಸುತ
ಹೆಜ್ಜೆಯನು ಹಾಕುವಳು ತ್ರಿಭಂಗಿ ಮುದ್ರೆಯಲಿ
ನನ್ನೂರ ಬೆಡಗಿನ ಬಿಡದಿ.

ಸಾಲದು ಎಂಬಂತೆ
ಹುಡುಕಿ ಹುಡುಕಿ ಮುತ್ತಿಟ್ಟ ಆ ತುಂಟ ಸೂರ್ಯ
ಮೂಗುತಿ ಮೇಲೆ ತುಳುಕಿದ ಹನಿಯೊಂದ
ಸುರ ಬಿಲ್ಲು ಮೂಡಿದವು.
ಅಂದಕ್ಕೆ ಮಕುಟವಿಟ್ಟಂತಾಯ್ತು.

ಮರೆಯಲ್ಲಿ ನಿಂತು
ಬಿಡದೆ ಎಲ್ಲವನು ಆಸ್ವಾದ ಮಾಡುತ್ತಿದ್ದ ಪೋರ
ಅಂತರಂಗದ ಚೋರ
ಇದುವೆ ಸಮಯವೆಂದ
ಛಂಗನೆ ಹೊರ ಜಿಗಿದು ಎದುರಿಗೆ ನಡೆದು ಬಂದ.

ಫಕ್ಕನೆ ಮಿನುಗಿದವು ಕಣ್ಣು
ಎದೆಯ ಸೆರಗು ಬೇರೆ ಸರಿದಿತ್ತು
ನಾಚಿ ರಂಗೇರಿ ಮುಖದಿರುವೆ
ತಾರಕದಲಿ ಮಿಡಿಯಿತು ಮಿದು ಹೃದಯದ ವೀಣೆ
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...