Home / ಕವನ / ಕವಿತೆ / ನನ್ನೂರ ಬಾಲೆ

ನನ್ನೂರ ಬಾಲೆ

ನನ್ನೂರ ಬಾಲೆ
ರಸ ಕಾವ್ಯ ನವ್ವಾಲೆ
ಸಿಹಿ ನೀರ ತರಲೆಂದು ಅಂಗಳಕ ಇಳಿದಳಂದರೆ…
ಓಣಿಯ ಗಂಡು ಹೆಣ್ಣು ಒಟ್ಟಾಗಿ
ತೇಜಃ ಪುಂಜವು ಕಂಡಂತೆ
ಬಿಟ್ಟ ಕಣ್ಣು ಬಿಟ್ಟಂತೆ ನೋಡುತ್ತ ನಿಲ್ಲುವರು.

ಅವಳೋ… ಕಂಡವರ ಕಣ್ಣುಗಳು ಕೆಟ್ಟದಿದು ಅನ್ನದ ಹಾಗೆ
ಸೂಕ್ಷ್ಮವಾಗಿ ಅತ್ತಿತ್ತ ನೋಡುತ್ತ
ಏನನ್ನೋ ಹುಡುಕುತ್ತ
ತೇಲುತ್ತ ನಡೆಯುವಳು ಚಾಣಾಕ್ಷಿ

ಒಳಗಿರುವ ಜೀವ
ಹೊರಗೆಲ್ಲೂ ಸುಳಿಯದಿರಲು
ಒಂದೆಳೆ ಕುಗ್ಗುವಳು ತರಳೆ
ಎಳೆ ಬಾಳೆ ಸುಳಿಗೆ ಬೆಂಕಿ ಝಳವು ಸೋಕಿದಂತೆ.

ಯಾಕಿಲ್ಲ ಯಾಕಿಲ್ಲ ವೆನುತಲಿ
ತನ್ನನ್ನು ತಾನೇ ಸಂಭಾಳಿಸಿ ಕೊಳುತಲಿ
ಸೇದೊ ಬಾವಿಯ ಸಾರುವಳು ಅಭಿಸಾರಿಕೆ.

ಮನಸಿಲ್ಲದ ಮನಸಿನಲಿ
ಆಗಲೂ ಅವಲೋಕನ ಮುಂದುವರಿಸಿ
ಕಂಠಕ್ಕೆ ಸರಕುಣಿಕೆ ಬಿಗಿವಳು
ಬಾವಿಯಲಿ ಇಳಿಬಿಟ್ಟು
ಗುಳು ಗುಳು ತುಂಬಿಸುವಳು ಕೊಡಗಳ.

ಕಲ್ಲು ಕಟ್ಟೆಯ ಪದ್ದಿಗೆ ತುಸುವೆ ಎಡ ಪಾದವ ತೂರಿಸಿ
ಹಾರುತ್ತ, ಹಾರುತ್ತ ಸೆಳೆಯುವಳು ಮೇಲೆ
ನೋಡುವ ಕಣ್ಣಿಗೆ ಹಬ್ಬವನು ತರುವಂತ ಲಾಸ್ಯದಲಿ
ಜಾನಪದ ಲೋಕದ ಐಸಿರಿ; ಕನ್ನಡ ಕುವರಿ.

ತುಂಬಿದ ಕೊಡದಂತ ಹುಡುಗಿ.
ತಲೆಯ ಮೇಲೊಂದು ಎಡದ ನಡುವಲ್ಲೊಂದು ಕೊಡವ
ಬಾಳೆ ಬಾಹುಗಳಲ್ಲಿ ಅವುಕಿ ಹಿಡಿದು
ಭಾರವನು ತೋಲಿಸುತ
ಹೆಜ್ಜೆಯನು ಹಾಕುವಳು ತ್ರಿಭಂಗಿ ಮುದ್ರೆಯಲಿ
ನನ್ನೂರ ಬೆಡಗಿನ ಬಿಡದಿ.

ಸಾಲದು ಎಂಬಂತೆ
ಹುಡುಕಿ ಹುಡುಕಿ ಮುತ್ತಿಟ್ಟ ಆ ತುಂಟ ಸೂರ್ಯ
ಮೂಗುತಿ ಮೇಲೆ ತುಳುಕಿದ ಹನಿಯೊಂದ
ಸುರ ಬಿಲ್ಲು ಮೂಡಿದವು.
ಅಂದಕ್ಕೆ ಮಕುಟವಿಟ್ಟಂತಾಯ್ತು.

ಮರೆಯಲ್ಲಿ ನಿಂತು
ಬಿಡದೆ ಎಲ್ಲವನು ಆಸ್ವಾದ ಮಾಡುತ್ತಿದ್ದ ಪೋರ
ಅಂತರಂಗದ ಚೋರ
ಇದುವೆ ಸಮಯವೆಂದ
ಛಂಗನೆ ಹೊರ ಜಿಗಿದು ಎದುರಿಗೆ ನಡೆದು ಬಂದ.

ಫಕ್ಕನೆ ಮಿನುಗಿದವು ಕಣ್ಣು
ಎದೆಯ ಸೆರಗು ಬೇರೆ ಸರಿದಿತ್ತು
ನಾಚಿ ರಂಗೇರಿ ಮುಖದಿರುವೆ
ತಾರಕದಲಿ ಮಿಡಿಯಿತು ಮಿದು ಹೃದಯದ ವೀಣೆ
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...