Home / ಕವನ / ಕವಿತೆ / ಯಾರಿಗೂ ಬರದಿರಲಿ! ಯಾರಿಗೂ ಬರದಿರಲಿ!!

ಯಾರಿಗೂ ಬರದಿರಲಿ! ಯಾರಿಗೂ ಬರದಿರಲಿ!!

ಶಿಶುಗಿಳಿಯಂತ ಹಸುಗೂಸ
ಏನೇ ಕಾರಣ ವಿರಲಿ
ಅನ್ಯರು ಅವರು ಯಾರೇ ಇರಲಿ ಎಂತಹವರಿರಲಿ
ಅವರ ತೆಕ್ಕೆಗೆ ಸರಿಸಿ
ಹಾಲು, ಹಣ್ಣು ಉಣಿಸಿ
ನುಡಿಗಲಿಸಿ, ನಡೆಗಲಿಸಿ
ಸಾಕುವ ವ್ಯವಸ್ಥೆ ಮಾಡಿದ ಮಾತ್ರಕ್ಕೆ
ಪ್ರೀತಿ ಕೊಟ್ಟಂತಾಗುವುದೇ?

ನಸುಕಿಗೆ ಎದ್ದ ಪಕ್ಷಿಗಳು
ಇದ್ದಲ್ಲಿಯೇ ಕೂಟ ನಡೆಸಿ
ಗೋಷ್ಠಿ ಕಲರವವ ನಡೆಸುವಂತೆ
ಆಡುವರು ಪುಟ್ಟ ಪುಟ್ಟ ಮಕ್ಕಳು
ಓಣಿಯೊಳಗೆ.

ಅರೆಕ್ಷಣ ಕಣ್ತಪ್ಪಿದರೆ ಸಾಕು
ಆತಂಕಪಡುವ, ಕೂಗಿ ಕರೆವ
ಹುಡುಕಿ ಬರುವ
ಹೆತ್ತವರ ಉಲಿಗೆ ಸ್ಪಂದಿಸಿ
ಹಾರುತ್ತಾ ಹೋಗಿ
ತೆಕ್ಕೆಯನು ಸೇರಿ
ಮುದ್ದುಗರೆಯಲಿ ತೇಲಿ ಮುಳುಗುವ
ಓರಗೆಯ ಮಕ್ಕಳನ್ನು
ಪರಿತ್ಯಕ್ತನಂತೆ
ಒಂಟಿ ಒಂಟಿಯಾಗಿ
ನಿಂತು ನೋಡುವ ಮಗುವ ನೋಡಿ
ಚೂರಿಯಾಡಿಸಿದಂತಾಗುವುದು ಕರುಳಿನಲಿ.

ಅಡವಿಗೆ ತೆರಳಿ
ಕಣ್ಣಿ ಹರಿವುದನೆ ಕಾದು
ಜಗ್ಗಿ ಎಳೆದರೂ… ಅಡ್ಡಗಟ್ಟಿದರೂ… ಬಗ್ಗದೆ
ಅಂಬಾ! ಎಂದು ಮೊರೆಯುತ್ತಾ
ಓಡೋಡಿ ಬಂದು
ಕೊಟ್ಟಿಗೆಯ ಹೊಕ್ಕು
ಕಂದನ ಬಾಯಿಗೆ ಕೆಚ್ಚಲನ್ನೊಡ್ಡಿ ನಿಂತು
ವಾತ್ಸಲ್ಯಪೂರದಲಿ
ಮೈ ಪೂರ ನೆಕ್ಕಿ
ತಣಿವ ತಾಯಿ ಹಸುವ ನೆನಪಿಗೆ ತರುವಳು
ಕಂದನನು ನೋಡಲು ಬರು ಅಮ್ಮ.

ಹಾಯ್! ಹಾಯ್!
ಮೂರು ಕಡೆಗಳಲಿ
ನೋವಿನ ಮಡುಗಳನು ಸೃಜಿಸಿ
ಜೀವ ಹಿಂಡುವ ಸ್ಥಿತಿಯು
ಯಾರಿಗೂ ಬರದಿರಲಿ! ಯಾರಿಗೂ ಬರದಿರಲಿ!!
*****

Tagged:

Leave a Reply

Your email address will not be published. Required fields are marked *

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...

ಬೆಳಿಗ್ಗೆಯಿಂದ ಕತ್ತಲೆಯವರೆಗೂ ಬಸ್ ಸ್ಟಾಂಡಿನಲ್ಲಿ ಬಸ್ಸುಗಳಿಗೆ ಹತ್ತಿ ಇಳಿದುಕೊಂಡು ಎಷ್ಟು ಗೋಗರೆದು ಬಿಕ್ಷೆ ಬೇಡಿದರೂ ಆ ಹುಡುಗನಿಗೆ ಮಧ್ಯಾಹ್ನದ ಊಟ ಮಾಡುವಷ್ಟು ಹಣ ಸಂಗ್ರಹವಾಗುತ್ತಿರಲಿಲ್ಲ. ಮಧ್ಯಾಹ್ನ ಬಿಸ್ಕಿಟು ಮತ್ತು ನಲ್ಲಿ ನೀರು ಕುಡಿದು ಹಸಿವು ತಣಿಸಿದರೂ ರಾತ್ರಿಯ ಊಟಕ್ಕ...