ಪುಣ್ಯ ಮೂರ್ತಿ

ಬಾಳ ಹೊಳೆ ಬತ್ತಿ
ದಡಗಳೆರಡು ಒಣಗಿ
ಪಾತ್ರವು ವಿಕಾರವಾಗಿ ತೆರೆದುಕೊಂಡು
ನರಳುವ ನಡುವೆ
ಜೀವ ಸೆಲೆಯಾಗಿ ಬಂದ ದೌಹಿತ್ರ
ಚೆಂದಂಪು ತುಂಬಿತು.

ಕುಸಿಯುತ್ತಿದ್ದ ಮನೆ, ಮನಸಿನಲಿ
ಪ್ರಾಣ ವಾಯು ಪಲ್ಲವಿಸಿ
ಕೈ ಜಾರಿ ಹೋಗುತ್ತಿದ್ದ ಬದುಕು
ಮರಳಿ
ತಕ್ಕೈಸಿಕೊಂಡಿತು.

ಮೌನ ಸೊನ್ನೆ ತೆರವಾಗಿ
ಮುದ್ದು ಮಾತು ಹರಿದಾಡಿ
ಜೀವೋತ್ಸಾಹ ತಂಗಾಳಿ
ಮೊರೆಯ ತೊಡಗಿತು.

ಜಡವಾಗಿ
ಮೂಲೆ ಹಿಡಿದು ಕೂತಿದ್ದೆಲ್ಲ
ರೂಪು, ಲಾವಣ್ಯ ಪಡೆದು
ಉತ್ಸಾಹದ ಉತ್ಸವ ಹೊರಟಿತು.

ಸೂತ್ರದಾರ ಪೋರ
ಮರವೆಯಾಗಿದ್ದ, ಮಾಡದೆ ಉಳಿದಿದ್ದ
ಮಾಡುವಂತೆ ಮುಂದುಮಾಡಿ
ಪುಣ್ಯ ಮೂರ್ತಿಯಾದ.
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಕಾರ್ಯಕ್ರಮ
Next post ಸೋರುವ ತೂತು ಮುಚ್ಚ ಬೇಡವೇ ?

ಸಣ್ಣ ಕತೆ

  • ಎಪ್ರಿಲ್ ಒಂದು

    ಒಮ್ಮೆಲೇ ಅವನಿಗೆ ಮದುವೆಯಾಗಿಬಿಡಬೇಕೆಂಬ ವಿಚಾರ ಬಂತು. ಮದುವೆಯಾಗುವದೆಂದರೆ ಒಂದು ಸಹಜವಾದ ವಿಚಾರವೆಂದು ಕೆಲವರಿಗೆ ಅನಿಸಬಹುದು. ಆದರೆ ಅವನದು ಮಾತ್ರ ಹಾಗಿರಲಿಲ್ಲ. ಎಲ್ಲರೂ ಅವನಿಗೆ ‘ಆಜನ್ಮ ಬ್ರಹ್ಮಚಾರಿ’ ಎಂಬ… Read more…

  • ಆ ರಾಮ!

    ಮೇಲೆ ವಿಶಾಲವಾದ ನೀಲಮಯ ನಭೋಮಂಡಲ. ಲೋಕವನ್ನೆ ಅವಲೋಕಿಸ ಹೊರಟವನಂತೆ ದಿನಮಣಿಯು ದೀಪ್ತಿಯುಳ್ಳವನಾಗಿ ಮೂಡಣದಲ್ಲಿ ನಿಂತಿದ್ದಾನೆ. ಅವನ ಪ್ರಖರ ಕಿರಣಗಳು ನೀರಿನೆಲೆಗಳ ಮೇಲೆ ಕೆಳಗು ಮೇಲಾಗುತ್ತಿವೆ. ಚಿಕ್ಕವರು ದೊಡ್ಡವರು… Read more…

  • ದಾರಿ ಯಾವುದಯ್ಯಾ?

    ಮೂವತೈದು ವರ್‍ಷಗಳ ನಂತರ ಅಮಲ ನಿನ್ನೂರಿಗೆ ಬರುತ್ತಿದ್ದೇನೆ ಅಂತ ಫೋನ ಮಾಡಿದಾಗ ಮೃಣಾಲಿನಿಗೆ ಆಶ್ಚರ್‍ಯ ಮತ್ತು ಆತಂಕ ಕಾಡಿದವು. ಬರೋಬ್ಬರಿ ಮೂವತ್ತೈದು ವರ್ಷಗಳ ಹಿಂದೆ ವಿಶ್ವವಿದ್ಯಾಲಯದ ಕ್ಯಾಂಪಸ್… Read more…

  • ಮೌನವು ಮುದ್ದಿಗಾಗಿ!

    ಮೋಹನರಾಯರು ರಗ್ಗಿನ ಮಸಕು ತೆಗೆದು ಸುತ್ತಲೂ ನೋಡಲು ಇನ್ನೂ ಎಲ್ಲವೂ ಶಾಂತವಾಗಿಯೇ ಇದ್ದಿತು. ಬೆಳಗಿನ ಜಾವವು ಜಾರಿ, ಸೂರ್ಯನು ಮೇಲಕ್ಕೇರಿದುದು ಅವರಿಗೆ ಅರಿವೇ ಇರಲಿಲ್ಲ. ಅಷ್ಟು ಗಾಢ… Read more…

  • ಉರಿವ ಮಹಡಿಯ ಒಳಗೆ

    ಸಹ ಉದ್ಯೋಗಿಗಳ ಓಡಾಟ, ಗ್ರಾಹಕರೊಂದಿಗಿನ ಮೊಬೈಲ್ ಹಾಗೂ ದೂರವಾಣಿ ಸಂಭಾಷಣೆಗಳು, ಲ್ಯಾಪ್‌ಟಾಪಿನ ಶಬ್ದಗಳು ಎಲ್ಲಾ ಸ್ತಬ್ದವಾದಾಗಲೇ ಮಧುಕರನಿಗೆ ಕಚೇರಿಯ ಸಮಯ ಮೀರಿದ್ದು ಅರಿವಾಯಿತು. ಕುಳಿತಲ್ಲಿಂದಲೇ ತನ್ನ ಕುತ್ತಿಗೆಯನ್ನು… Read more…