Home / ಕವನ / ಕವಿತೆ / ಬಿಸಿಲ ನಾಡಿನ ಬೇಸಿಗೆ

ಬಿಸಿಲ ನಾಡಿನ ಬೇಸಿಗೆ

ಆಡಿ ಹಗುರವಾಗಲೇನಲ್ಲ! ನಿಜ!
ಕೇಳಿ ಬಿಸಿಲ ನಾಡಿನ ಬವಣೆ.

ರವಿ
ಹತ್ತಿರವೆ ಸರಿದವನಂತೆ
ಉದಯಾಸ್ತಗಳಲಿ ಒಗ್ಗರಣೆಗೆ ಸೌಮ್ಯನಾಗಿ
ಉಳಿದಂತೆ ಬೆಂಕಿ ಬಿಸಿಲನು ಕಾರಿ
ಕಾಲಗಳ ಕತ್ತು ಹಿಸುಕಿ
ಜೀವಗಳ ಜೀವಂತ ಬೇಯಿಸುವನು.

ಗಾಳಿ
ಎಲ್ಲೋ ಬಂಧಿಯಾಗಿ
ಸುಳಿಯದೆ
ಜೀವಕ್ಕೆ ಬಿಸಿಲ ಜ್ವರ ಬಡಿಸಿ
ಮೈ ಮನ ಕೆಂಡ ಮಾಡಿ
ಆಂತಿಕಾವಸ್ಥೆ ತಲುಪಿಸಿ
ನರಳಾಡಿಸುವುದು.

ಧಗೆ.
ಹೊರಗೂ ಒಳಗೂ ತಕ್ಕೈಸಿ
ನೆಲ್ಲು ಕಣ ಮಾಡುವಾಗ ಹಾರಿ
ಬೆವರಿಳಿವ ಮೈಯನ್ನೇರಿ ಕಚ್ಚುವ
ಅಸಾಧ್ಯ ತುರಿಕೆ ತರುವ ಸುಂಕಿನಂತೆ
ಜೀವ ಕಸಿವಿಸಿಗೊಳಿಸುವುದು.

ಗಿಡ ಮರಗಳು
ಮಾಟಕ್ಕೆ ಮಣಿದವರಂತೆ
ಸ್ಥಬ್ದವಾಗಿ
ಸೂತಕದ ಮನೆಯ ಜನರಂತೆ
ಅರಕ್ತ ಮುಖವ ಹೊತ್ತು
ಚಿತ್ರದಂತೆ ನಿಂತು ಕೊಲ್ಲುವವು.

ಬೆಟ್ಟ ಗುಡ್ಡಗಳು
ಅರುಣನ ವಿಕಟ ಅಟ್ಟಹಾಸಕ್ಕೆ ಶರಣಾಗಿ
ಬೆಂಕಿ ಉಂಡೆಗಳಾಗಿ
ಅಸ್ತವಾದ ಬಹು ಹೊತ್ತಿನವರೆಗೂ ಕಾವು ಕಕ್ಕಿ
ಜೀವಕ್ಕೆ ತಹತಹಿಕೆ ತರುವವು.

ಮಣ್ಣು
ನಿರುಪಾಯವಾಗಿ
ನಿರ್ದಯ ರವಿಯು ಕಾರುವ ಎಲ್ಲಾ ಉರಿ ಹೀರಿ
ಬಿರಿದು ಧೂಳಾಗಿ, ಮೇಲೇರಿ
ಒಡಲೊಳಗಿನ ಉರಿಯನ್ನು ಸೇರಿಸಿ
ಪರಿಸರ ಪೂರ ಕುಂಬಾರನ ಆವಿಗೆಯ ಮಾಡಿ
ಜೀವದ ಸಮಾಧಾನ ಕೆಡಿಸುವುದು.

ತಾಯಿ ತುಂಗಭದ್ರೆ
ದುರ್ಭರ ಬದುಕಿನ ಬೇಗೆಯಲಿ ಬೆಂದ ಜೀವದಂತೆ
ಬಲ, ಚೆಲುವು ಸೋರಿಹೋಗಿ.
ಅಸ್ಥಿ ಪಂಜರದಂತೆ ವಿಕಾರವಾಗಿ
ಧಿಗ್ಗನೆ ಎದುರಾದರೆ ಹೃದಯ ಸ್ಥಂಭಿಸುವ
ಭೂತದಂತಾಗಿದ್ದಾಳೆ.
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...