Home / ಕವನ / ಕವಿತೆ / ಉಯಿಲು

ಉಯಿಲು

ಕೊಡಬೇಡವೋ ಶಿವನೆ!
ಕೂಸು ಮುದ್ದ
ಲೋಕವೆಲ್ಲಾ ಬಂಜೆ ಅಂದ್ರೂ ಪರವಾಗಿಲ್ಲ
ತೀರಿ ಹೋಗಲಿ ನಮ್ಮ ತಲೆಗೆ ಎಲ್ಲಾ!

ಅವರು ಇವರು ಯಾರ ಮಾತು ಏಕೆ ?
ಅಪ್ಪ ಯಾರೋ ಗೊತ್ತಿಲ್ಲ
ಸಾಯೋತನಕ ಅಮ್ಮನನ್ನಾದರು ನೋಡಿಕೊಂಡಿರುವ
ಭಾಗ್ಯವೂ ನಮಗಿಲ್ಲ; ಕಾರಣ ನಾವು ದನಗಳು.

ಎಲ್ಲೋ ಹುಟ್ಟಿ
ಎಲ್ಲೆಲ್ಲೋ ಯಾರು ಯಾರಿಗೋ ದಾಸರಾಗಿ ಜೀವತೇದು
ಹೇಗೋ ಕಂತೆ ಒಗೆದು ಹೋಗುವ
ಪರ್ದೇಸಿ ಬದುಕು ಯಾರಿಗೆ ಬೇಕ್ರಿ ?

ಹುಟ್ಟಿನಿಂದಲೇ ಶುರು
ನಮ್ಮ ಗೋಳು ಬಾಳು
ತಲೆ-ಕಾಲು, ಬೆನ್ನು-ಬಾಲ, ಅಚ್ಚೆ-ಮಚ್ಚೆ, ಸುಳಿ-ಮೂಳೆ
ನಂಬಿಕೆಗೆ ತಕ್ಕನಾಗಿ ಇದ್ದರೆ ಮಾತ್ರ ಲೇಸು!

ಆರೈಕೆ ಮನಸ್ಸಿದ್ದಂಗೆ
ತಾಯಿ ಹಾಲು ರುಚಿಗೆ ಮಾತ್ರ
ಮೈಗತ್ತುತ್ತೋ ಇಲ್ಲವೋ ಹಾಕಿದ ಕಸಕಡ್ಡಿ ತಿಂದು
ಜೀವ ಹೊರೆಯಬೇಕು.

ಹಲ್ಲು ಮೂಡಿರದಿದ್ದರೂ ಮರುಕ ತೋರಿಸರು
ತುಸುವೇ ಬನಿಯಾಗಿದ್ದರು ಸಾಕು
ಎಲ್ಲಾ ತರದ ನೊಗಗಳು ಹೆಗಲಿಗೇರುತ್ವೆ
ಬಿದ್ದು ಹೋಗೋ ತನಕ ಇದು ಸಾಗೇ ಇರುತ್ತೆ.

ಬೇನೆ-ಬೇಸರಿಕೆ, ಸುಸ್ತು-ಸಂಕಟ
ದಾಹ, ಹಸಿವು ಏರು ಇಳಿವು ಲೆಕ್ಕಕ್ಕಿಲ್ಲ
ಭಾವನಿಕೆಗೆ ಅರ್ಹವಾಗಲು, ಪ್ರೀತಿ ವಿಶ್ವಾಸ
ಪಡೆಯಲು
ನಾವೇನು ಮನುಷ್ಯರೇನು ?

ದುಡ್ಡಿನಾಸೆಗೋ… ಷೋಕಿಗೋ…
ಇಲ್ಲ! ನಮ್ಮ ಕ್ಷಮತೆ ಕಡ್ಡಿಯಷ್ಟು ಕಡಿಮೆಯಾದರೂ
ಸಂತೆ, ಜಾತ್ರೆಗೆ ಅಟ್ಟಿಕೊಂಡು ಹೋಗಿ
ತೋಚಿದ ಬೆಲೆಗೆ ತೂರಿ ಬಿಡುವರು.

ಯಾರು ಇಟ್ಟುಕೊಳ್ಳರು ನಮ್ಮನ್ನ ಕೊನೆತನಕ
ಉದ್ದಕ್ಕೂ ಮಾರುತ್ತಾ ನಡೆವರು
ಆಯ್ಕೆಗೆ ಎಲ್ಲಿದೆ ಸ್ವಾತಂತ್ರ್ಯ ?
ಅನುಭವಿಸುವುದನ್ನು ಬಿಟ್ಟು.

ಬರಬಾರದ್ದೇನಾದರು ಬಂದೋ…
ಬರ್ಬರ ದುಡಿಮೆಯಲಿ ಘಾತ ಸಂಭವಿಸಿಯೋ…
ವ್ಯರ್ಥ! ಹೊರೆಯೆನಿಸಿದರೆ
ತಿನ್ನುವ ಜನರಿಗೆ ಕೊಟ್ಟು ಮನೆಮಂದಿಗೆಲ್ಲಾ ಕೆರ
ಹೊಲಿಸಿಕೊಳ್ಳುವರು.

ಇವರಲ್ಲಿ ಸತ್ತರೆಂತಿಟ್ಟುಕೊಳ್ಳಿ,
ಎಲ್ಲರೂ ಸೇರುವರು, ಇನ್ನಿಲ್ಲದ ನೇಮ ನಡೆಸುವರು
ತೊಳೆದು, ಸಿಂಗರಿಸಿ ಹೂಳುವರು, ಸುಡುವರು
ಪೂಜೆ ಮಾಡುವರು ಆಗಲೂ… ಅನಂತರವು…
ಭಯದಿಂದ.

ನಾವು ಸತ್ತರೆ ಬಹಳ ಜನ
ಬಿಸಾಕಿ ಬರುವರು ಬಯಲಲ್ಲಿ
ಪ್ರಾಣಿ, ಪಕ್ಷಿಗೆ ಆಹಾರ ಮಾಡಿ
ನಾವು ಬದುಕಿನಲಿ ಸಾವಿನಲಿ ಉಪಯುಕ್ತರು
ಆದರೂ ನಮಗೀ ಗತಿ ನೋಡಿ!

ಬಯಲ ಮಹಾಮನೆ ಕಟುಕರಂಗಡಿಯಲಿ
ಕೊರಡು, ಮಚ್ಚುಗಳ ಉನ್ಮತ್ತ ನರ್ತನಕೆ
ನವರಂಗವಾಗುವೆವು ನಾವು
ತುಂಡು, ತುಂಡಾಗಿ ರವಾನೆಯಾಗುವೆವು
ಬೇಯಲಿಕೆ
ಪದಾರ್ಥವಾಗಿ.

ಕೊಡಬೇಡವೋ ಶಿವನೇ! ಕೂಸು ಮುದ್ದ
ನಮ್ಮ ಕುಲ ಹುಟ್ಟೋದು ಬೇಡ
ಈ ಸಾವು ಸಾಯೋದು ಬೇಡ
ತೀರಿ ಹೋಗಲಿ ನಮ್ಮ ತಲೆಗೆ… ಎಲ್ಲಾ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...