ಉಯಿಲು

ಕೊಡಬೇಡವೋ ಶಿವನೆ!
ಕೂಸು ಮುದ್ದ
ಲೋಕವೆಲ್ಲಾ ಬಂಜೆ ಅಂದ್ರೂ ಪರವಾಗಿಲ್ಲ
ತೀರಿ ಹೋಗಲಿ ನಮ್ಮ ತಲೆಗೆ ಎಲ್ಲಾ!

ಅವರು ಇವರು ಯಾರ ಮಾತು ಏಕೆ ?
ಅಪ್ಪ ಯಾರೋ ಗೊತ್ತಿಲ್ಲ
ಸಾಯೋತನಕ ಅಮ್ಮನನ್ನಾದರು ನೋಡಿಕೊಂಡಿರುವ
ಭಾಗ್ಯವೂ ನಮಗಿಲ್ಲ; ಕಾರಣ ನಾವು ದನಗಳು.

ಎಲ್ಲೋ ಹುಟ್ಟಿ
ಎಲ್ಲೆಲ್ಲೋ ಯಾರು ಯಾರಿಗೋ ದಾಸರಾಗಿ ಜೀವತೇದು
ಹೇಗೋ ಕಂತೆ ಒಗೆದು ಹೋಗುವ
ಪರ್ದೇಸಿ ಬದುಕು ಯಾರಿಗೆ ಬೇಕ್ರಿ ?

ಹುಟ್ಟಿನಿಂದಲೇ ಶುರು
ನಮ್ಮ ಗೋಳು ಬಾಳು
ತಲೆ-ಕಾಲು, ಬೆನ್ನು-ಬಾಲ, ಅಚ್ಚೆ-ಮಚ್ಚೆ, ಸುಳಿ-ಮೂಳೆ
ನಂಬಿಕೆಗೆ ತಕ್ಕನಾಗಿ ಇದ್ದರೆ ಮಾತ್ರ ಲೇಸು!

ಆರೈಕೆ ಮನಸ್ಸಿದ್ದಂಗೆ
ತಾಯಿ ಹಾಲು ರುಚಿಗೆ ಮಾತ್ರ
ಮೈಗತ್ತುತ್ತೋ ಇಲ್ಲವೋ ಹಾಕಿದ ಕಸಕಡ್ಡಿ ತಿಂದು
ಜೀವ ಹೊರೆಯಬೇಕು.

ಹಲ್ಲು ಮೂಡಿರದಿದ್ದರೂ ಮರುಕ ತೋರಿಸರು
ತುಸುವೇ ಬನಿಯಾಗಿದ್ದರು ಸಾಕು
ಎಲ್ಲಾ ತರದ ನೊಗಗಳು ಹೆಗಲಿಗೇರುತ್ವೆ
ಬಿದ್ದು ಹೋಗೋ ತನಕ ಇದು ಸಾಗೇ ಇರುತ್ತೆ.

ಬೇನೆ-ಬೇಸರಿಕೆ, ಸುಸ್ತು-ಸಂಕಟ
ದಾಹ, ಹಸಿವು ಏರು ಇಳಿವು ಲೆಕ್ಕಕ್ಕಿಲ್ಲ
ಭಾವನಿಕೆಗೆ ಅರ್ಹವಾಗಲು, ಪ್ರೀತಿ ವಿಶ್ವಾಸ
ಪಡೆಯಲು
ನಾವೇನು ಮನುಷ್ಯರೇನು ?

ದುಡ್ಡಿನಾಸೆಗೋ… ಷೋಕಿಗೋ…
ಇಲ್ಲ! ನಮ್ಮ ಕ್ಷಮತೆ ಕಡ್ಡಿಯಷ್ಟು ಕಡಿಮೆಯಾದರೂ
ಸಂತೆ, ಜಾತ್ರೆಗೆ ಅಟ್ಟಿಕೊಂಡು ಹೋಗಿ
ತೋಚಿದ ಬೆಲೆಗೆ ತೂರಿ ಬಿಡುವರು.

ಯಾರು ಇಟ್ಟುಕೊಳ್ಳರು ನಮ್ಮನ್ನ ಕೊನೆತನಕ
ಉದ್ದಕ್ಕೂ ಮಾರುತ್ತಾ ನಡೆವರು
ಆಯ್ಕೆಗೆ ಎಲ್ಲಿದೆ ಸ್ವಾತಂತ್ರ್ಯ ?
ಅನುಭವಿಸುವುದನ್ನು ಬಿಟ್ಟು.

ಬರಬಾರದ್ದೇನಾದರು ಬಂದೋ…
ಬರ್ಬರ ದುಡಿಮೆಯಲಿ ಘಾತ ಸಂಭವಿಸಿಯೋ…
ವ್ಯರ್ಥ! ಹೊರೆಯೆನಿಸಿದರೆ
ತಿನ್ನುವ ಜನರಿಗೆ ಕೊಟ್ಟು ಮನೆಮಂದಿಗೆಲ್ಲಾ ಕೆರ
ಹೊಲಿಸಿಕೊಳ್ಳುವರು.

ಇವರಲ್ಲಿ ಸತ್ತರೆಂತಿಟ್ಟುಕೊಳ್ಳಿ,
ಎಲ್ಲರೂ ಸೇರುವರು, ಇನ್ನಿಲ್ಲದ ನೇಮ ನಡೆಸುವರು
ತೊಳೆದು, ಸಿಂಗರಿಸಿ ಹೂಳುವರು, ಸುಡುವರು
ಪೂಜೆ ಮಾಡುವರು ಆಗಲೂ… ಅನಂತರವು…
ಭಯದಿಂದ.

ನಾವು ಸತ್ತರೆ ಬಹಳ ಜನ
ಬಿಸಾಕಿ ಬರುವರು ಬಯಲಲ್ಲಿ
ಪ್ರಾಣಿ, ಪಕ್ಷಿಗೆ ಆಹಾರ ಮಾಡಿ
ನಾವು ಬದುಕಿನಲಿ ಸಾವಿನಲಿ ಉಪಯುಕ್ತರು
ಆದರೂ ನಮಗೀ ಗತಿ ನೋಡಿ!

ಬಯಲ ಮಹಾಮನೆ ಕಟುಕರಂಗಡಿಯಲಿ
ಕೊರಡು, ಮಚ್ಚುಗಳ ಉನ್ಮತ್ತ ನರ್ತನಕೆ
ನವರಂಗವಾಗುವೆವು ನಾವು
ತುಂಡು, ತುಂಡಾಗಿ ರವಾನೆಯಾಗುವೆವು
ಬೇಯಲಿಕೆ
ಪದಾರ್ಥವಾಗಿ.

ಕೊಡಬೇಡವೋ ಶಿವನೇ! ಕೂಸು ಮುದ್ದ
ನಮ್ಮ ಕುಲ ಹುಟ್ಟೋದು ಬೇಡ
ಈ ಸಾವು ಸಾಯೋದು ಬೇಡ
ತೀರಿ ಹೋಗಲಿ ನಮ್ಮ ತಲೆಗೆ… ಎಲ್ಲಾ!
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

ಸಣ್ಣ ಕತೆ Previous post ಜೀತ
Next post ಎನಗ್ಯಾಕೆ ಕಾವ್ಯದ ಹಂಗು ?

ಸಣ್ಣ ಕತೆ

  • ಬಾಗಿಲು ತೆರೆದಿತ್ತು

    ಆ ಮನೆಯ ಮುಂದಿನ ಬಾಗಿಲು ಯಾವಾಗಲೂ ಇಕ್ಕಿರುವುದು! ನನ್ನ ಓದುವ ಕೋಣೆಯ ಕಿಡಿಕೆಯೊಳಗಿಂದ ಆ ಮನೆಯ ಬಾಗಿಲು ಕಾಣುವುದು. ನಾನು ಕಿಡಿಕೆಯೊಳಗಿಂದ ಎಷ್ಟೋ ಸಲ ಅತ್ತ ಕಡೆ… Read more…

  • ಬಸವನ ನಾಡಿನಲಿ

    ೧೯೯೧ರಲ್ಲಿ ನಾ ವಿಭಾಗೀಯ ಸಾರಿಗೆ ಅಧಿಕಾರಿ ಎಂದು ಬಡ್ತಿ ಹೊಂದಿದೆ! ಇಷ್ಟಕ್ಕೆ ಕೆಲವರು ಹೊಟ್ಟೆ ಉರಿ ಬಿದ್ದರು. ಪ್ರಾಮಾಣಿಕರು, ಶೋಷಿತರು, ವಂಚಿತರು, ಪಾಪದವರು, ಮುಂದೆ ಬರಲಿ ಎಂಬ… Read more…

  • ಜೋತಿಷ್ಯ

    ತಮಿಳು ಮೂಲ: ಕೊನಷ್ಟೈ "ನೀವು ಏನು ಬೇಕಾದರೂ ಹೇಳಿ, ನನಗೆ ಜ್ಯೋತಿಷ್ಯದಲ್ಲಿ ನಂಬಿಕೆ ತಪ್ಪುವುದಿಲ್ಲ. ಅದರಲ್ಲಿಯೂ ರಾಮಲಿಂಗ ಜೋಯಿಸರಲ್ಲಿ ಪೂರ್ಣ ನಂಬಿಕೆ"ಎಂದಳು ಕಮಲಾ. ಸಮಯ, ಸಂಧ್ಯಾ ಕಾಲ.… Read more…

  • ಬೂಬೂನ ಬಾಳು

    ನಮ್ಮೂರು ಚಿಕ್ಕ ಹಳ್ಳಿ. ಹಳ್ಳಿಯೆಂದ ಕೂಡಲೆ, ಅದಕ್ಕೆ ಬರಬೇಕಾದ ಎಲ್ಲ ವಿಶೇಷಣಗಳೂ ಬರಬೇಕಲ್ಲವೇ ? ಸುತ್ತಲೂ ಹಸುರಾಗಿ ಒಪ್ಪುವ ಹೊಲಗಳು, ನಾಲ್ಕೂ ಕಡೆಗೆ ಸಾಗಿ ಹೋಗುವ ದಾರಿಗಳು,… Read more…

  • ವರ್ಗಿನೋರು

    ಆಗ್ಲೇ ವಾಟು ವಾಲಿತ್ತು. ಯೆಷ್ಟು ವಾಟು ವಾಲ್ದ್ರೇನು? ಬಳ್ಳಾರಿ ಬಿಸ್ಲೆಂದ್ರೆ ಕೇಳ್ಬೇಕೇ? ನಡೆವ... ದಾರ್ಗೆ ಕೆಂಡ ಸುರ್ದಂಗೆ. ನೆಲಂಭೋ ನೆಲಾ... ಝಣ ಝಣ. ‘ಅಲ್ಗೆ’ ಕಾದಂಗೆ. ಕಾಲಿಟ್ರೆ… Read more…

cheap jordans|wholesale air max|wholesale jordans|wholesale jewelry|wholesale jerseys