Home / ಕವನ / ಕವಿತೆ / ಉಯಿಲು

ಉಯಿಲು

ಕೊಡಬೇಡವೋ ಶಿವನೆ!
ಕೂಸು ಮುದ್ದ
ಲೋಕವೆಲ್ಲಾ ಬಂಜೆ ಅಂದ್ರೂ ಪರವಾಗಿಲ್ಲ
ತೀರಿ ಹೋಗಲಿ ನಮ್ಮ ತಲೆಗೆ ಎಲ್ಲಾ!

ಅವರು ಇವರು ಯಾರ ಮಾತು ಏಕೆ ?
ಅಪ್ಪ ಯಾರೋ ಗೊತ್ತಿಲ್ಲ
ಸಾಯೋತನಕ ಅಮ್ಮನನ್ನಾದರು ನೋಡಿಕೊಂಡಿರುವ
ಭಾಗ್ಯವೂ ನಮಗಿಲ್ಲ; ಕಾರಣ ನಾವು ದನಗಳು.

ಎಲ್ಲೋ ಹುಟ್ಟಿ
ಎಲ್ಲೆಲ್ಲೋ ಯಾರು ಯಾರಿಗೋ ದಾಸರಾಗಿ ಜೀವತೇದು
ಹೇಗೋ ಕಂತೆ ಒಗೆದು ಹೋಗುವ
ಪರ್ದೇಸಿ ಬದುಕು ಯಾರಿಗೆ ಬೇಕ್ರಿ ?

ಹುಟ್ಟಿನಿಂದಲೇ ಶುರು
ನಮ್ಮ ಗೋಳು ಬಾಳು
ತಲೆ-ಕಾಲು, ಬೆನ್ನು-ಬಾಲ, ಅಚ್ಚೆ-ಮಚ್ಚೆ, ಸುಳಿ-ಮೂಳೆ
ನಂಬಿಕೆಗೆ ತಕ್ಕನಾಗಿ ಇದ್ದರೆ ಮಾತ್ರ ಲೇಸು!

ಆರೈಕೆ ಮನಸ್ಸಿದ್ದಂಗೆ
ತಾಯಿ ಹಾಲು ರುಚಿಗೆ ಮಾತ್ರ
ಮೈಗತ್ತುತ್ತೋ ಇಲ್ಲವೋ ಹಾಕಿದ ಕಸಕಡ್ಡಿ ತಿಂದು
ಜೀವ ಹೊರೆಯಬೇಕು.

ಹಲ್ಲು ಮೂಡಿರದಿದ್ದರೂ ಮರುಕ ತೋರಿಸರು
ತುಸುವೇ ಬನಿಯಾಗಿದ್ದರು ಸಾಕು
ಎಲ್ಲಾ ತರದ ನೊಗಗಳು ಹೆಗಲಿಗೇರುತ್ವೆ
ಬಿದ್ದು ಹೋಗೋ ತನಕ ಇದು ಸಾಗೇ ಇರುತ್ತೆ.

ಬೇನೆ-ಬೇಸರಿಕೆ, ಸುಸ್ತು-ಸಂಕಟ
ದಾಹ, ಹಸಿವು ಏರು ಇಳಿವು ಲೆಕ್ಕಕ್ಕಿಲ್ಲ
ಭಾವನಿಕೆಗೆ ಅರ್ಹವಾಗಲು, ಪ್ರೀತಿ ವಿಶ್ವಾಸ
ಪಡೆಯಲು
ನಾವೇನು ಮನುಷ್ಯರೇನು ?

ದುಡ್ಡಿನಾಸೆಗೋ… ಷೋಕಿಗೋ…
ಇಲ್ಲ! ನಮ್ಮ ಕ್ಷಮತೆ ಕಡ್ಡಿಯಷ್ಟು ಕಡಿಮೆಯಾದರೂ
ಸಂತೆ, ಜಾತ್ರೆಗೆ ಅಟ್ಟಿಕೊಂಡು ಹೋಗಿ
ತೋಚಿದ ಬೆಲೆಗೆ ತೂರಿ ಬಿಡುವರು.

ಯಾರು ಇಟ್ಟುಕೊಳ್ಳರು ನಮ್ಮನ್ನ ಕೊನೆತನಕ
ಉದ್ದಕ್ಕೂ ಮಾರುತ್ತಾ ನಡೆವರು
ಆಯ್ಕೆಗೆ ಎಲ್ಲಿದೆ ಸ್ವಾತಂತ್ರ್ಯ ?
ಅನುಭವಿಸುವುದನ್ನು ಬಿಟ್ಟು.

ಬರಬಾರದ್ದೇನಾದರು ಬಂದೋ…
ಬರ್ಬರ ದುಡಿಮೆಯಲಿ ಘಾತ ಸಂಭವಿಸಿಯೋ…
ವ್ಯರ್ಥ! ಹೊರೆಯೆನಿಸಿದರೆ
ತಿನ್ನುವ ಜನರಿಗೆ ಕೊಟ್ಟು ಮನೆಮಂದಿಗೆಲ್ಲಾ ಕೆರ
ಹೊಲಿಸಿಕೊಳ್ಳುವರು.

ಇವರಲ್ಲಿ ಸತ್ತರೆಂತಿಟ್ಟುಕೊಳ್ಳಿ,
ಎಲ್ಲರೂ ಸೇರುವರು, ಇನ್ನಿಲ್ಲದ ನೇಮ ನಡೆಸುವರು
ತೊಳೆದು, ಸಿಂಗರಿಸಿ ಹೂಳುವರು, ಸುಡುವರು
ಪೂಜೆ ಮಾಡುವರು ಆಗಲೂ… ಅನಂತರವು…
ಭಯದಿಂದ.

ನಾವು ಸತ್ತರೆ ಬಹಳ ಜನ
ಬಿಸಾಕಿ ಬರುವರು ಬಯಲಲ್ಲಿ
ಪ್ರಾಣಿ, ಪಕ್ಷಿಗೆ ಆಹಾರ ಮಾಡಿ
ನಾವು ಬದುಕಿನಲಿ ಸಾವಿನಲಿ ಉಪಯುಕ್ತರು
ಆದರೂ ನಮಗೀ ಗತಿ ನೋಡಿ!

ಬಯಲ ಮಹಾಮನೆ ಕಟುಕರಂಗಡಿಯಲಿ
ಕೊರಡು, ಮಚ್ಚುಗಳ ಉನ್ಮತ್ತ ನರ್ತನಕೆ
ನವರಂಗವಾಗುವೆವು ನಾವು
ತುಂಡು, ತುಂಡಾಗಿ ರವಾನೆಯಾಗುವೆವು
ಬೇಯಲಿಕೆ
ಪದಾರ್ಥವಾಗಿ.

ಕೊಡಬೇಡವೋ ಶಿವನೇ! ಕೂಸು ಮುದ್ದ
ನಮ್ಮ ಕುಲ ಹುಟ್ಟೋದು ಬೇಡ
ಈ ಸಾವು ಸಾಯೋದು ಬೇಡ
ತೀರಿ ಹೋಗಲಿ ನಮ್ಮ ತಲೆಗೆ… ಎಲ್ಲಾ!
*****

Tagged:

Leave a Reply

Your email address will not be published. Required fields are marked *

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...

ಎಲೈ ಓದುಗರೇ! ಕಣ್ಣುಗಳನ್ನು ಅಗಲಿಸಿ ಏಕಚಿತ್ತದಿಂದ ಓದಿ! ನಾನೊಂದು ಕಥೆ ಹೇಳಲಿದ್ದೇನೆ. ರೋಮಾಂಚಕಾರಿ, ಮೈನಡುಗಿಸುವಂತಹ ಕಥೆ! ಒಬ್ಬ ಸಾಹಿತಿಯ ಕಥೆ! ಸಾಹಿತಿ ಆಗೇ ತೀರಬೇಕೆಂದು ಹಂಬಲಿಸುವವನ ಕಥೆ! ಸಾಹಿತ್ಯದಲ್ಲಿ ಎಲ್ಲ ಬಿರುದು ಬಹುಮಾನಗಳನ್ನು, ಪ್ರಶಸ್ತಿ ಪ್ರಶಂಸೆಗಳನ್ನು ಹೇಗೆ ಪಡೆ...

“ಎಷ್ಟು ದಿನ ಹೀಗೇ ತೊಂದರೆ ಪಟ್ಟುಕೊಳ್ಳುತ್ತಿರುವದು ಕೃಷ್ಣ ಮೂರ್ತಿ? ಮಕ್ಕಳನ್ನು ಆರಯ್ಯುವದು, ಅಡಿಗೆ ಮಾಡುವದು- ಇವುಗಳಿಗೆಲ್ಲ ಆಳು ಇಟ್ಟು ಪೂರೈಸೀತೇ? ಸುಮ್ಮನೆ ಇನ್ನೊಂದು ಮದುವೆಯಾಗಿ ಬಿಡಬಾರದೇ?” “ಪ್ರೀತಿ ಇಷ್ಟು ಅಗ್ಗ ಅಲ್ಲ ನೋಡು” “ಪ್ರೀತಿಯ ವಿಷಯವೇನೇ ...

ಕಾಲೇಜಿನ ಲೈಬ್ರೆರಿಯಿಂದ ಹೊರಬಂದ ಅವಳು ಒಮ್ಮೆ ಆಟದ ಮೈದಾನವನ್ನು ದಿಟ್ಟಿಸಿ ನೋಡಿದಳು. ಮೈದಾನ ಖಾಲಿ ಇರುವುದನ್ನು ಖಚಿತ ಮಾಡಿಕೊಂಡ ಅವಳು ವೇಗವಾಗಿ ನಡೆಯುತ್ತಾ ರಾಜ ರಸ್ತೆಗೆ ಬಂದಳು. ಅಲ್ಲಿಂದ ತನ್ನ ಮನೆಯ ವಿರುದ್ಧ ದಿಕ್ಕಿಗೆ ಹೆಜ್ಜೆ ಹಾಕ ತೊಡಗಿದಳು. ತನ್ನ ಶಕ್ತಿಯನ್ನೆಲ್ಲಾ ಪ್ರಯ...

ಅಡಿಕೆ ಭತ್ತಗಳ ವ್ಯಾಪಾರದಿಂದ ಅಶ್ವತ್ಥ ಹೆಬ್ಬಾರರು ನೂರಾರು ಸಾವಿರ ರೂಪಾಯಿ ಗಳಿಸಿದರೆಂದು ದಟ್ಟವಾಗಿ ಸುದ್ದಿ ಹಬ್ಬಿತು. ಇದಕ್ಕೆ ಸಾಕ್ಷಿ ಕೊಡುವಂತೆ ಹೆಬ್ಬಾರರು ಗ್ರಾಮದೇವಸ್ಥಾನದಲ್ಲಿ ಒಂದು ಯಜ್ಞವನ್ನು ಮಾಡಿಸುವೆನೆಂದು ಸಾರಿ, ತಯಾರಿ ಮಾಡಹತ್ತಿದರು. ತಟ್ಟೆಯ ಬಿಡಾರದಲ್ಲಿ ಸಾಲೆ ನ...

ಬ್ಯಾಂಕಿನ ಅರೆತೆರೆದ ಬಾಗಿಲನ್ನು ದೂಡಿ ಒಳಬಂದ ಪ್ರಹ್ಲಾದ, ಕೆಲಸದಲ್ಲಿ ಮಗ್ನಳಾಗಿದ್ದ ಸುಮಾಳ ಬಳಿಗೋಡಿ ಅವಳ ಪರ್‍ಸನ್ನು ತಡಕಾಡಿ ಹಣತೆಗೆದುಕೊಂಡು ಬಂದಷ್ಟೇ ವೇಗದಿಂದ ಹೊರಗೋಡಿದ್ದ. “ಏನು ಮಗರಾಯನ ಗಲಾಟೆ” ಹತ್ತಿರದಲ್ಲಿದ್ದ ದಿನಕರನ ಪ್ರಶ್ನೆಗೆ “ಅವನದ್ದು ಯಾವಾ...