Home / ಕವನ / ಕವಿತೆ / ಸಿರಿಗೊಂಬೆ

ಸಿರಿಗೊಂಬೆ

ಒಳ್ಳೆ
ಉಗಾದಿ ಹೊಂಗೆ ಮರದ್ಹಂಗೆ
ತಬ್ಬೊ ಹಂಗಿದ್ದೆ…
ನೋಡಿದ ಯಾರಿಗೂ
ಇನ್ನೊಂದ್ಸಾರಿ
ನೋಡೋ ಅಂಗಿದ್ದೆ

ಹೇಳೋದೇನು
ನಿನ್ನನ್ನೋಡಿದ ಮಾನವ್ರೆಲ್ಲಾ
ಅಬ್ಬಬ್ಬಾ! ಏನು ಚೆಲುವು; ಎಂತಾ ಸಿರಿಗೊಂಬೆ
ಕೆಟ್ಟ ಕಣ್ಣಿಲಿ ನೋಡಿದ್ರೆ
ಸಿಡಿಯಂಗೈದಳನ್ತಿದ್ರು.

ಏನಿಲ್ಲ ಅಂದ್ರು
ಕೊನೆಗೆ
ನಿನ್ನ ಕಯ್ಯಾರ
ಒಂದು ಲೋಟ ನೀರನ್ನಾದ್ರು ಕುಡಿಬೇಕು
ಅನ್ಸೋ ಅಂಗಿದ್ದೆ.

ನಿನ್ನ ಗಮನ ಸೆಳ್ಯೋಕೆ
ಒಂದು ಸೊಲ್ಲು ನುಡಿಸೋಕೆ
ತಮ್ಮ ತಮ್ಮಲ್ಲೆ ಪಂದ್ಯ ಕಟ್ಕೊತಿದ್ರು
ಏನೇನೋ ಮಾಡ್ತಿದ್ರು
ನಮ್ಮ ಊರ ಹುಡುಗರು.

ನೀನು
ಸುಮ್ನೆ ಅಂಗೆ ನೋಡಿದ್ರು
ಉಪ್ಚಾರಕೆಂದೆ ಆಡಿದ್ರು
ಸ್ವರ್ಗ ಸಿಕ್ಕಂಗಾಡ್ತಿದ್ರು.

ಏನ್ ತಿಂದು ಮಾಡಿದ್ರು
ಒಂದ್ಸಾರಿನಾದ್ರು ನೀನು
ಕಣ್ಣಿಗೆ ಬೀಳದಿದ್ರೆ
ಆವೊತ್ತೆಲ್ಲಾ…
ಏನೋ ಕಳಕಂಡಂಗೆ… ಒಳಗೊಳಗೆ

ನೀನು
‘ಸ್ವಾಮಿ’ ಹುಟ್ಟಾಕಿಂತ ಮುಂಚೆ
ಮನೆ ಕೆಲ್ಸ ಎಲ್ಲಾ ಮುಗ್ಸಿ
ನಿತ್ಯದಂತೆ ಹೋಲಕೆ ಹೊರಟು ನಿಂತರೆ…

ಎದ್ದ ಕೂಡ್ಲೆ
ನಿನ್ನ ಕಂಡು
ಖುಷಿಗೊಂಡ ಹಕ್ಕಿ ಪಕ್ಷಿ
ಉದಯರಾಗ ಹಾಡ್ತಿದ್ವು.

ಆತುರ ತಡೆಯದ ಆ ‘ಸೂರ್‍ಜ’
ನಿನ್ನ ನೋಡಾಕೆ
ಮರ ಮಂಡಿ ತೆರೆ ಸರ್‍ಸಿ
ಇಣಕ್ ಹಾಕಿದ್ದ.

ನಿನ್ನ ಹುಚ್ಚು ತುಂಬಿಕೊಂಡ
ಹಾದಿಬದಿ ಗಿಡ ಮರ
ಒಮ್ಮೆಗೆ ಎಚ್ಚೆತ್ತು…
ನಿಂತಲ್ಲೆ ಮುಲು ಮುಲುಗುಟ್ತಿದ್ವು.

ನಮ್ಮನ್ನಾರು ಕೇಳ್ತಾರಕ್ಕ
ನಿನ್ನ ತಲ್ಯಾಗಾದ್ರು ಇದ್ರೆ ಒಂದು ಸಾರ್ಥಕ
ನನ್ನ ಎತ್ಗೊ ನನ್ನ ಎತ್ಗೊ
ಬಾರೆ… ನಮ್ಮಕ್ಕ ಎಂದು
ಬಾಯ್ಬಿಟ್ ಕರಿತಿದ್ವು
ಬಣ್ಣ ಬಣ್ಣದ ಬಳ್ಳಿ ಬೇಲಿ ಹೂವು.

ಒಂದೊಂದು
ಒಂದೊಂದು ರೀತಿ
ಸವಿ ಸವಿ ಗಂಧ ಸೂಸಿ
ಪೈಪೋಟಿ ನಡೆಸ್ತಿದ್ವು.

ಹೋಗ್ಗ! ಆ ಮಣ್ಣಿಗೂ ಏನು ಮೋಹ
ನಾನ್ ಬೇರೆ ಕಾಣೆ
ಇಬ್ಬನಿ ಬಿದ್ದು ತಣ್ಣಗಾಗಿದ್ರು
ನಿನ್ನ ಪಾದ ಸೋಕಿದ ಕೂಡ್ಲೆ
ಮೆತ್ಗಂಬುಡ್ತಿತ್ತು.
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...