Home / ಕವನ / ಕವಿತೆ / ಆತ್ಮಾನುರಾಗ

ಆತ್ಮಾನುರಾಗ

ಓ ಶಿವೆಯೇ !
ಮಲ್ಲಿಗೆ ಹೂ ಬನದ ನಿವಾಸಿಯೇ…
ಪ್ರೇಮದೆದೆಯ ನಡೆಮಡಿಯ ಹಾಸಿನ ಮೇಲೆ
ಹೂಪಾದ ಮುದ್ರೆಯನೊತ್ತುತ್ತ ಬಾರೆ.

ನಿನ್ನ ದರ್ಶಿಸುವ
ಲೆಕ್ಕವಿರದ ಮೆಚ್ಚುಗೆಯ ನಯನಗಳಲಿ
ಯುಗಾದಿ ಹಬ್ಬದ ಚಿಗುರು ಚಿಗುರು
ಮಾವು, ಬೇವು ಹೊಂಗೆ ತರುಗಳ
ಕುಂದದ ಸೊಂಪು, ತಂಪನೆರೆಯ ಬಾರೆ.

ಜಾಜಿ, ಮಲ್ಲಿಗೆ, ಸಂಪಿಗೆ, ಸೇವಂತಿಗೆ ತೋಟದಲಿ
ಮಧುವ ಹೀರುತ್ತಾ ಮೈಮರೆವ
ಬಣ್ಣ ಬಣ್ಣದ ಚಿಟ್ಟೆ, ದುಂಬಿಗಳ
ಕೇಳಿ ಕಲರವ ಗೋಷ್ಠಿಯ ರಸಾನಂದ
ವಿಹಾರಕ್ಕೆ ನೇತಾರಳಾಗಿ ಬಾರೆ.

ಸಗ್ಗದಾಘ್ರ್‍ಆಣಕ್ಕೆ ವಶವಾಗಿ
ಎಗ್ಗಿಲ್ಲದೆ ಮಾಡು, ಗೂಡುಗಳ ಮಾಡಿಕೊಂಡು
ಚಿತ್ತಾರದ ವರ್ಣಮಯ ತನುಗಳಲಿ
ರುದ್ರ ಭೀಕರ ಹೊರಳು, ಸುರುಳಿಗಳಲಿ ಮಲೆತಿರುವ
ಸನಿಹ ಸಾರೆ ಪೂತ್ಕರಿಸುವ
ಕ್ಷಣ ಮರೆಯೆ ಯಮ ಸದನಕ್ಕಟ್ಟುವ
ಸರ್ಪ ಬಗೆಗಳ ಮಣಿಸಿ
ಪ್ರೇಮ ಕೇದಿಗೆಯ ಮುಡಿಸ ಬಾರೆ.

ವಿಜ್ಞಾನ, ತಂತ್ರಜ್ಞಾನದ ನೇತ್ಯಾತ್ಮಕ ಪ್ರಭಾವದಲಿ
ಶ್ರಮದ ಸೊಲ್ಲೂ ಕೇಳ ಬಯಸದ
ಭೋಗ ಸಂಸ್ಕೃತಿಯ ಬೆನ್ನು ಬಿದ್ದಿರುವ

ಮಾರಿಗೆ ಸಂಸ್ಕೃತಿ ಅಪ್ಪಿ
ಜನ್ಮಜಾತ ಗುಣ, ನೀತಿಗೆ ತಿಲಾಂಜಲಿಯನಿತ್ತು
ಹಾಡುವುದನ್ನೇ ಮರೆತಿರುವ ಮಾನವ ಕೋಗಿಲೆಗಳ
ಜಾಗೃತಗೊಳಿಸುವ ಚಿತ್ತ ಚೇತನಿಯೆ ಬಾರೆ.

ಶುದ್ಧ ಸಲಿಲದಿ ತುಂಬಿ
ಜುಳು ಜುಳು ನಾದ ಮಾಡುತ್ತಾ
ನರ್ತಕಿಯ ಲಾಸ್ಯದಲಿ ಪ್ರವಹಿಸುವ ಹಿರಿಯ ತರಂಗಿಣಿಯ
ಇಕ್ಕೆಲದಲಿ ಸೊಕ್ಕಿ ಬೆಳೆದು
ವಸಂತನಾಗಮನದಿ ನವ ಜೀವದಾಂಗುಡಿಯ
ಗುಡಿಯಂತಿರುವ
ಮಾಮರಗಳೆದೆಯಲ್ಲಡಗಿ
ಅಮೃತ ಗಾನಧಾರೆಯ ಹರಿಸುವ
ಕೋಗಿಲೆ ಸಂಕುಲದ ಮುಂದಾಳಾಗಿ ಬಾರೆ.

ಭುವನ ಭಾಗ್ಯನು ಮೂಡಿ ಬರುವ ಪ್ರಶಸ್ತ ಕಾಲದಲಿ
ಕೀಟ, ಪಕ್ಷಿ, ಪ್ರಾಣಿಗಳು
ಆನಂದದಲಿ ದನಿಗೆ ದನಿ ಬೆರೆಸಿ
ಹೊಮ್ಮಿಸುವ ದಿವ್ಯಗಾನ ಧಾರೆಯಾಸ್ವಾದನೆಯಲಿ
ಒತ್ತೊತ್ತಿ ಕುಳಿತು
ಹೃದಯದಲಿ ಹೃದಯ ಬೆಸೆಯುವ
ಜೀವ ಸೊಬಗಿನ ದರ್ಶನವ ಮಾಡಿಸುವ
ಸತ್ಯ ಪ್ರೇಮವೇ ಮೈವೆತ್ತ ಮೂರುತಿಯಾಗಿ ಬಾರೆ
ಬಾ! ಬಾರೆ ಶಿವೆ!
*****

Tagged:

Leave a Reply

Your email address will not be published. Required fields are marked *

ಹೆರಿಗೆ ನೋವಿನಿಂದ ಸಂಕಟಪಡುತ್ತಿದ್ದ ಹೆಂಡತಿ ಗಂಗಾಳನ್ನು ಆಸ್ಪತ್ರೆಗೆ ಚಿಕ್ಕಣ್ಣ ಕರೆದುಕೊಂಡು ಬಂದಾಗ ಔಟ್ ಪೇಶಂಟ್ ವಿಭಾಗ ಗಿಜಿಗುಟ್ಟುತ್ತಿತ್ತು. ಗುಂಪುಕಟ್ಟಿ ನಿಂತಿದ್ದ ಮಹಿಳೆಯರ ಸಾಲನ್ನು ಛೇಧಿಸಿಕೊಂಡು ವೈದ್ಯರ ಮೇಜಿನ ಬಳಿ ಬಂದು ನಿಂತ ಅವನ ತೋಳುಗಳಲ್ಲಿ ಎರಡೂವರೆ ವರ್ಷದ ಮಗುವ...

ನಾಡಿಗೆ ಸ್ವಾತಂತ್ರ ಬಂದಿದೆ. ಎಲ್ಲೆಲ್ಲೂ ಸ್ವೈರಾಚಾರ ಹೆಚ್ಚಿದೆ. ಸ್ವಾತಂತ್ರವೆಂದರೆ ಸ್ವೇಚ್ಛಾಚಾರ ಎನ್ನುವಂತೆ ನಾಡಿನ ಜನ ವರ್ತಿಸುತ್ತಿದೆ; ಬಹುದಿನದ ಸಾಧನೆಯಿಂದ ಪಡೆದ ಸಿದ್ದಿಯನ್ನು ಮಣ್ಣುಗೂಡಿಸುತ್ತಲಿದೆ. ಇದನ್ನು ತಡೆಯಲಿಕ್ಕೆ ಭಾರತದ “ಹಳ್ಳಿ-ಹಳ್ಳಿಗಳಲ್ಲಿಯೂ ಗ್ರಾಮ ಸುರಕ್ಷಕ...

“ವತ್ಸಲಾ……..!” ನಿಟ್ಟುಸುರಿನೊಂದಿಗೆ ಕುಮಾರನು ಆರಾಮ ಕುರ್‍ಚಿಯ ಮೇಲೆ ದೊಪ್ಪನೆ ಬಿದ್ದು ಕೊಂಡನು. ಚಿಕ್ಕಬಾಲಕನೊಬ್ಬನು ಕಿಡಿಕಿಯಲ್ಲಿ ಹಣಿಕಿ ಹಾಕಿ “ಕುಮಾರಣ್ಣ” ಎಂದು ಕೂಗಿದಂತಾಯಿತು. ಎದ್ದು ನೋಡುತ್ತಾನೆ; ಕೆಂಪು ಮಸಿಯಿಂದ ವಿಳಾಸ ಬರೆದ...

“ಭೀಮಾ ಮಾಸ್ತರರನ್ನು ಇಷ್ಟ ಮೋಟರ ಸ್ಟಾಂಡಿನ ತನಕ ಕಳಿಸಿ ಬಾರಪ್ಪಾ.” ಬಾಯಕ್ಕ ನೆರೆಮನೆಯವರ ಆಳಿಗೆ ವಿನಯದಿಂದ ಹೇಳಿ ನನ್ನ ಕಡೆಗೆ ಹೊರಳಿ ಅಂದಳು: “ಬಿಡಿರಿ, ನಿಮ್ಮ ಬ್ಯಾಗ ತಗೊಂಡ ಬರತಾನ ಭೀಮಾ” “ಯಾತಕ್ಕ? ನಾ ಕೈಯೊಳಗ ಸಹಜ ಒಯ್ಯತೇನೆ” ನಾನು ಹೀಗೆ ಹೇಳಿದೆನಾದರೂ ಭೀಮಪ್...

ಸಿಗರೆಟ್‌ನ್ನು ಕೊನೆಯ ಸಲ ಎಳೆದು ಬದಿಗಿದ್ದ ಅಶ್‌ಟ್ರೆಯಲ್ಲಿ ಹಾಕಿದ. ಮೂರು ದಿನಗಳಿಂದ ಹೇಳಲಾಗದಂತಹ ಯಾತನೆ ಅವನನ್ನು ಹಿಂತಿಸುತ್ತಿದೆ. ಇದ್ದಿದ್ದು ಮಿತ್ರನ ಮಾತುಗಳು ಬಂದು ಕಿವಿಗೆ ಅಪ್ಪಳಿಸಿ ಎತ್ತ ನೋಡಿದರೂ ಅವನದೆ ಮುಖ ಕಾಣುತ್ತಿದೆ. “ನಾ ಹೇಳುವದನ್ನು ಅರ್‍ಥಮಾಡಿ ಕೊಳ್ಳು...