Home / ಕವನ / ಕವಿತೆ / ಆತ್ಮಾನುರಾಗ

ಆತ್ಮಾನುರಾಗ

ಓ ಶಿವೆಯೇ !
ಮಲ್ಲಿಗೆ ಹೂ ಬನದ ನಿವಾಸಿಯೇ…
ಪ್ರೇಮದೆದೆಯ ನಡೆಮಡಿಯ ಹಾಸಿನ ಮೇಲೆ
ಹೂಪಾದ ಮುದ್ರೆಯನೊತ್ತುತ್ತ ಬಾರೆ.

ನಿನ್ನ ದರ್ಶಿಸುವ
ಲೆಕ್ಕವಿರದ ಮೆಚ್ಚುಗೆಯ ನಯನಗಳಲಿ
ಯುಗಾದಿ ಹಬ್ಬದ ಚಿಗುರು ಚಿಗುರು
ಮಾವು, ಬೇವು ಹೊಂಗೆ ತರುಗಳ
ಕುಂದದ ಸೊಂಪು, ತಂಪನೆರೆಯ ಬಾರೆ.

ಜಾಜಿ, ಮಲ್ಲಿಗೆ, ಸಂಪಿಗೆ, ಸೇವಂತಿಗೆ ತೋಟದಲಿ
ಮಧುವ ಹೀರುತ್ತಾ ಮೈಮರೆವ
ಬಣ್ಣ ಬಣ್ಣದ ಚಿಟ್ಟೆ, ದುಂಬಿಗಳ
ಕೇಳಿ ಕಲರವ ಗೋಷ್ಠಿಯ ರಸಾನಂದ
ವಿಹಾರಕ್ಕೆ ನೇತಾರಳಾಗಿ ಬಾರೆ.

ಸಗ್ಗದಾಘ್ರ್‍ಆಣಕ್ಕೆ ವಶವಾಗಿ
ಎಗ್ಗಿಲ್ಲದೆ ಮಾಡು, ಗೂಡುಗಳ ಮಾಡಿಕೊಂಡು
ಚಿತ್ತಾರದ ವರ್ಣಮಯ ತನುಗಳಲಿ
ರುದ್ರ ಭೀಕರ ಹೊರಳು, ಸುರುಳಿಗಳಲಿ ಮಲೆತಿರುವ
ಸನಿಹ ಸಾರೆ ಪೂತ್ಕರಿಸುವ
ಕ್ಷಣ ಮರೆಯೆ ಯಮ ಸದನಕ್ಕಟ್ಟುವ
ಸರ್ಪ ಬಗೆಗಳ ಮಣಿಸಿ
ಪ್ರೇಮ ಕೇದಿಗೆಯ ಮುಡಿಸ ಬಾರೆ.

ವಿಜ್ಞಾನ, ತಂತ್ರಜ್ಞಾನದ ನೇತ್ಯಾತ್ಮಕ ಪ್ರಭಾವದಲಿ
ಶ್ರಮದ ಸೊಲ್ಲೂ ಕೇಳ ಬಯಸದ
ಭೋಗ ಸಂಸ್ಕೃತಿಯ ಬೆನ್ನು ಬಿದ್ದಿರುವ

ಮಾರಿಗೆ ಸಂಸ್ಕೃತಿ ಅಪ್ಪಿ
ಜನ್ಮಜಾತ ಗುಣ, ನೀತಿಗೆ ತಿಲಾಂಜಲಿಯನಿತ್ತು
ಹಾಡುವುದನ್ನೇ ಮರೆತಿರುವ ಮಾನವ ಕೋಗಿಲೆಗಳ
ಜಾಗೃತಗೊಳಿಸುವ ಚಿತ್ತ ಚೇತನಿಯೆ ಬಾರೆ.

ಶುದ್ಧ ಸಲಿಲದಿ ತುಂಬಿ
ಜುಳು ಜುಳು ನಾದ ಮಾಡುತ್ತಾ
ನರ್ತಕಿಯ ಲಾಸ್ಯದಲಿ ಪ್ರವಹಿಸುವ ಹಿರಿಯ ತರಂಗಿಣಿಯ
ಇಕ್ಕೆಲದಲಿ ಸೊಕ್ಕಿ ಬೆಳೆದು
ವಸಂತನಾಗಮನದಿ ನವ ಜೀವದಾಂಗುಡಿಯ
ಗುಡಿಯಂತಿರುವ
ಮಾಮರಗಳೆದೆಯಲ್ಲಡಗಿ
ಅಮೃತ ಗಾನಧಾರೆಯ ಹರಿಸುವ
ಕೋಗಿಲೆ ಸಂಕುಲದ ಮುಂದಾಳಾಗಿ ಬಾರೆ.

ಭುವನ ಭಾಗ್ಯನು ಮೂಡಿ ಬರುವ ಪ್ರಶಸ್ತ ಕಾಲದಲಿ
ಕೀಟ, ಪಕ್ಷಿ, ಪ್ರಾಣಿಗಳು
ಆನಂದದಲಿ ದನಿಗೆ ದನಿ ಬೆರೆಸಿ
ಹೊಮ್ಮಿಸುವ ದಿವ್ಯಗಾನ ಧಾರೆಯಾಸ್ವಾದನೆಯಲಿ
ಒತ್ತೊತ್ತಿ ಕುಳಿತು
ಹೃದಯದಲಿ ಹೃದಯ ಬೆಸೆಯುವ
ಜೀವ ಸೊಬಗಿನ ದರ್ಶನವ ಮಾಡಿಸುವ
ಸತ್ಯ ಪ್ರೇಮವೇ ಮೈವೆತ್ತ ಮೂರುತಿಯಾಗಿ ಬಾರೆ
ಬಾ! ಬಾರೆ ಶಿವೆ!
*****

Tagged:

Leave a Reply

Your email address will not be published. Required fields are marked *

ಬೆಳಗಿನ ಜಾವ ಆಗಲೇ ಐದು ಬಡಿದಿತ್ತು. ಎಲ್ಲೋ ಮಾಮರದಲ್ಲಿ ಕೋಗಿಲೆಯೂ ಕುಹೂ ಕುಹೂ ಎಂದು ಹಾಡುತಿತ್ತು. ಅಲ್ಲಲ್ಲಿ ಗಿಡಮರಗಳಲ್ಲಿ ಹಕ್ಕಿಗಳ ಚಿಲಿಚಿಲಿ ಕಲರವದೊಂದಿಗೆ ಸುಪ್ರಭಾತ ಹಾಡುತ್ತಿದ್ದವು. ಪ್ರಶಾಂತವಾದ ವಾತಾವರಣದಲ್ಲಿ ಸ್ವಾಮೀಜಿ, ಬೆಳಗಿನ ಪೂಜೆ ಮುಗಿಸಿ, ನಿತ್ಯದಂತೆ ಮಠದ ಪಾಕಶಾ...

“ಇನ್ನು ಗೇಣಿ ಕೊಡಬೇಕಾಗಿಲ್ಲವಂತೆ. ಒಕ್ಕಲಿಗೇ ಭೂಮಿಯಂತೆ.” ಊರಲ್ಲಿ ದಟ್ಟವಾಗಿ ಹಬ್ಬಿದ್ದ ಆ ವಾರ್‍ತೆ ಕುಂಞಂಬುನಲ್ಲಿ ಅಸಾಧ್ಯ ಕುತೂಹಲ ಕೆರಳಿಸಿತ್ತು. ಗೇಣಿ ಕೊಡದಿದ್ದರೆ ಧನಿಗಳು ಬಿಟ್ಟಾರೆಯೆ? ಗೇಣಿ ಕೊಡದೆ ಬೇರೆಯವರ ಭೂಮಿಯನ್ನು ಇಟ್ಟುಕೊಳ್ಳುವುದು ತಪ್ಪಲ್ಲವೆ? ಕು...

“ಮಮ್ಮಿ ! ಮಮ್ಮಿ ! ಬೇಗ ಬಾ” “ಅಡಿಗೆ ಮಾಡುತ್ತಾ ಇದ್ದೇನೆ, ಯಾಕೆ ಕಿರಿಚಿಕೊಳ್ಳುತ್ತಾ ಇದ್ದಿಯಾ ರೋಜಿ? ಬರುತ್ತೀನಿ ತಾಳು” ಎಂದಳು ಕೆಲಸದಲ್ಲಿ ನಿರತ ತಾಯಿ. “ಮಮ್ಮಿ! ಒಂದು ನಿಮಿಷ ಬಂದು ನೋಡು, ಕಾಗೆ ಪುಟ್ಟ ಅಳಿಲನ್ನು ಕುಕ್ಕಿ ನೋವು ಮಾಡುತ್ತಾ ...

ಈ ದಿನ ಹಿತ್ತಲ ತುಂಬ ಪಾರಿಜಾತ ಹೂವು ಸುರಿದಿದೆ. ಮತ್ತೆ ಸಂಪಿಗೆ ಮರದಿಂದ ಹೂವರಳಿ ಘಮ್ಮೆಂದು ವಾಸನೆ ಹರಿದಿದೆ. ಎರಡು ಪರಿಮಳ ಸೇರಿ ಎದೆಯಾಳಕೆ ಇಳಿದು ಒಳಗೊಳಗೆ ಒಂಥರಾ ಭಾವ ವಿಸ್ಮಯ ಅರಳಿದೆ. ಅಮ್ಮ ಒಲೆಯ ಮೇಲೆ ಕಡುಬು ಬೇಯಿಸುತ್ತಿದ್ದಾಳೆ. ಕೊಟ್ಟೆ ಕಡುಬಿನ ವಾಸನೆ ಇಡೀ ಮನೆಯನ್ನು ಪಸ...

ಆ ದಿನ, ಡಾಕ್ಟರ್ ಪಾರ್ವತಿಯವರಿಗೆ ಆತಂಕದ ದಿನ! ಒಂದು ವಿಧದ ಚಂಡಮಾರುತವನ್ನೆಬ್ಬಿಸಿದಂತಹ ಘಟನೆಯಿಂದ ನಗರದ ಅನೇಕರೂ, ಗಣ್ಯರೂ ಸೇರಿದಂತೆ, ಆ ಕೋರ್‍ಟಿನಲ್ಲಿ ಜನಸಂದಣಿ ಕಿಕ್ಕಿರಿದಿತ್ತು. ಆ ನಗರದ ಪ್ರಖ್ಯಾತ ವೈದ್ಯ ಡಾಕ್ಟರ್ ಪಾರ್ವತಿದೇವಿಯವರು ಸಾಕ್ಷಿ ನೀಡಬೇಕಾಗಿದ್ದರಿಂದ ಕೋರ್ಟಿನ ...

“ಭಟ್ಟರೇ, ನಿಮಗೆ ಹೇಳಲೊ? ಇಘ್ನೇಶ್ವರರಾಯರು ಅಂದರೆ ನಮ್ಮ ಜಾತಿಗೇ ಭೂಷಣ. ಅವರು ವಕೀಲಿ ಮಾಡಲು ಸುರು ಮಾಡಿದಂದಿನಿಂದ ಬೇರೆ ಜಾತಿಯವರ ಸೊಕ್ಕು ಮುರಿದಿದೆ. ಈಗ ಶೆಟ್ಟಿ ಶಾನಬೋಗರೆಲ್ಲ ಅವರಿಗೆ ರಾಯರೇ ಎಂದು ಸಲಾಮು ಮಾಡುವವರೇ! ನಿಮಗೆ ಹೇಳಲೊ? ಅದು ಒಬ್ಬೊಬ್ಬರ ಜನ್ಮಕುಂಡಲಿ ಇದ್ದ...