Home / ಕವನ / ಕವಿತೆ / ಆತ್ಮಾನುರಾಗ

ಆತ್ಮಾನುರಾಗ

ಓ ಶಿವೆಯೇ !
ಮಲ್ಲಿಗೆ ಹೂ ಬನದ ನಿವಾಸಿಯೇ…
ಪ್ರೇಮದೆದೆಯ ನಡೆಮಡಿಯ ಹಾಸಿನ ಮೇಲೆ
ಹೂಪಾದ ಮುದ್ರೆಯನೊತ್ತುತ್ತ ಬಾರೆ.

ನಿನ್ನ ದರ್ಶಿಸುವ
ಲೆಕ್ಕವಿರದ ಮೆಚ್ಚುಗೆಯ ನಯನಗಳಲಿ
ಯುಗಾದಿ ಹಬ್ಬದ ಚಿಗುರು ಚಿಗುರು
ಮಾವು, ಬೇವು ಹೊಂಗೆ ತರುಗಳ
ಕುಂದದ ಸೊಂಪು, ತಂಪನೆರೆಯ ಬಾರೆ.

ಜಾಜಿ, ಮಲ್ಲಿಗೆ, ಸಂಪಿಗೆ, ಸೇವಂತಿಗೆ ತೋಟದಲಿ
ಮಧುವ ಹೀರುತ್ತಾ ಮೈಮರೆವ
ಬಣ್ಣ ಬಣ್ಣದ ಚಿಟ್ಟೆ, ದುಂಬಿಗಳ
ಕೇಳಿ ಕಲರವ ಗೋಷ್ಠಿಯ ರಸಾನಂದ
ವಿಹಾರಕ್ಕೆ ನೇತಾರಳಾಗಿ ಬಾರೆ.

ಸಗ್ಗದಾಘ್ರ್‍ಆಣಕ್ಕೆ ವಶವಾಗಿ
ಎಗ್ಗಿಲ್ಲದೆ ಮಾಡು, ಗೂಡುಗಳ ಮಾಡಿಕೊಂಡು
ಚಿತ್ತಾರದ ವರ್ಣಮಯ ತನುಗಳಲಿ
ರುದ್ರ ಭೀಕರ ಹೊರಳು, ಸುರುಳಿಗಳಲಿ ಮಲೆತಿರುವ
ಸನಿಹ ಸಾರೆ ಪೂತ್ಕರಿಸುವ
ಕ್ಷಣ ಮರೆಯೆ ಯಮ ಸದನಕ್ಕಟ್ಟುವ
ಸರ್ಪ ಬಗೆಗಳ ಮಣಿಸಿ
ಪ್ರೇಮ ಕೇದಿಗೆಯ ಮುಡಿಸ ಬಾರೆ.

ವಿಜ್ಞಾನ, ತಂತ್ರಜ್ಞಾನದ ನೇತ್ಯಾತ್ಮಕ ಪ್ರಭಾವದಲಿ
ಶ್ರಮದ ಸೊಲ್ಲೂ ಕೇಳ ಬಯಸದ
ಭೋಗ ಸಂಸ್ಕೃತಿಯ ಬೆನ್ನು ಬಿದ್ದಿರುವ

ಮಾರಿಗೆ ಸಂಸ್ಕೃತಿ ಅಪ್ಪಿ
ಜನ್ಮಜಾತ ಗುಣ, ನೀತಿಗೆ ತಿಲಾಂಜಲಿಯನಿತ್ತು
ಹಾಡುವುದನ್ನೇ ಮರೆತಿರುವ ಮಾನವ ಕೋಗಿಲೆಗಳ
ಜಾಗೃತಗೊಳಿಸುವ ಚಿತ್ತ ಚೇತನಿಯೆ ಬಾರೆ.

ಶುದ್ಧ ಸಲಿಲದಿ ತುಂಬಿ
ಜುಳು ಜುಳು ನಾದ ಮಾಡುತ್ತಾ
ನರ್ತಕಿಯ ಲಾಸ್ಯದಲಿ ಪ್ರವಹಿಸುವ ಹಿರಿಯ ತರಂಗಿಣಿಯ
ಇಕ್ಕೆಲದಲಿ ಸೊಕ್ಕಿ ಬೆಳೆದು
ವಸಂತನಾಗಮನದಿ ನವ ಜೀವದಾಂಗುಡಿಯ
ಗುಡಿಯಂತಿರುವ
ಮಾಮರಗಳೆದೆಯಲ್ಲಡಗಿ
ಅಮೃತ ಗಾನಧಾರೆಯ ಹರಿಸುವ
ಕೋಗಿಲೆ ಸಂಕುಲದ ಮುಂದಾಳಾಗಿ ಬಾರೆ.

ಭುವನ ಭಾಗ್ಯನು ಮೂಡಿ ಬರುವ ಪ್ರಶಸ್ತ ಕಾಲದಲಿ
ಕೀಟ, ಪಕ್ಷಿ, ಪ್ರಾಣಿಗಳು
ಆನಂದದಲಿ ದನಿಗೆ ದನಿ ಬೆರೆಸಿ
ಹೊಮ್ಮಿಸುವ ದಿವ್ಯಗಾನ ಧಾರೆಯಾಸ್ವಾದನೆಯಲಿ
ಒತ್ತೊತ್ತಿ ಕುಳಿತು
ಹೃದಯದಲಿ ಹೃದಯ ಬೆಸೆಯುವ
ಜೀವ ಸೊಬಗಿನ ದರ್ಶನವ ಮಾಡಿಸುವ
ಸತ್ಯ ಪ್ರೇಮವೇ ಮೈವೆತ್ತ ಮೂರುತಿಯಾಗಿ ಬಾರೆ
ಬಾ! ಬಾರೆ ಶಿವೆ!
*****

Tagged:

Leave a Reply

Your email address will not be published. Required fields are marked *

ಅವಳು ಅಡುಗೆ ಮನೆಯ ಕಪ್ಪಾದ ಡಬ್ಬಿಗಳನ್ನು, ಉಳಿದ ಸಾಮಾನುಗಳನ್ನು ತೆಗೆದು ತೊಳೆಯಲು ಆ ಮಣ್ಣಿನ ಮಾಡು ಹಂಚಿನ ಮನೆಯ ಮುಂದಿನ ತೆಂಗಿನಕಟ್ಟೆಯಲ್ಲಿ ಹಾಕಿದ ಅಗಲ ಹಾಸುಗಲ್ಲ ಮೇಲೆ ಕೈಲಿ ಹಿಡಿದಷ್ಟು ತಂದು ತಂದು ಇಡುತ್ತಿದ್ದಳು. ಏಳರ ಬಾಲೆ ಮಗಳು ಕೂಡ ತನ್ನ ಕೈಗೆ ಎತ್ತುವಂತಹ ಡಬ್ಬಿಗಳನ್ನು...

ಆಹಾ! ಏನು ಕಡಲು! ಅ೦ತವಿಲ್ಲದ ಕಡಲು!! ಅಪಾರವಾಗಿಹ ಕಡಲು! ದಿಟ್ಟಿ ತಾಗದ ಕಡಲು!! ಆ ಕಡಲ ಒಡಲಲ್ಲಿ ಏನು ತೆರೆ! ಏನು ನೊರೆ!! ಏನು ಅಂದ! ಎನಿತು ಚಂದ! ಬಿಚ್ಚಿ ಮುಚ್ಚುವ ಅದರ ನಯವಾದ ತುಟಿಗಳು ಹೊನ್ನರವಿ ಎಸೆದಿರುವ ಚಿನ್ನದಲುಗಳೇಸು! ಬಣ್ಣ ಬಣ್ಣಗಳುಗುವ ಅಚ್ಚು ಪಡಿಯಚ್ಚುಗಳ ಹೊಳಪಿನ ಏನ...

ಸರ್, ಗುಡ್ ಮಾರ್ನಿಂಗ್, ಮೇ ಐ ಕಮೀನ್ ಸರ್ – ನಿತ್ಯ ಆಫೀಸಿನ ಅವಧಿ ಪ್ರಾರಂಭವಾಗುತ್ತಲೇ ಹಿಂದಿನ ದಿನ ರೆಡಿ ಮಾಡಿದ ಹತ್ತಾರು ಕಾಗದ ಪತ್ರಗಳಿಗೆ ಸಹಿ ಪಡೆಯಲು, ಇಲ್ಲವೇ ಹಿಂದಿನ ದಿನದ ಎಲ್ಲ ಫೈಲುಗಳ ಚೆಕ್ ಮಾಡಿಸಲು, ಕೈಯಲ್ಲಿ ಫೈಲುಗಳ ಕಟ್ಟು ಹಿಡಿದು ಬಾಗಿಲ ಮರೆಯಲ್ಲಿ ನಿಂತು ...

ಕೋತಿಯಿಂದ ನಿಮಗಿನ್ನೆಂಥಾ ಭಾಗ್ಯ! ನೀವು ಹೇಳುವ ಮಾತು ಸರಿ! ಬಿಡಿ! ತುಂಗಮ್ಮನವರೆ. ಇದೇನೆಂತ ಹೇಳುವಿರಿ! ಯಾರಾದರೂ ನಂಬುವ ಮಾತೇನರೀ! ಕೊತೀಂತೀರಿ. ಬಹುಲಕ್ಷಣವಾಗಿತ್ತಿರಿ ಎಂತೀರಿ? ಅದು ಹೇಗೋ ಎನೋ, ನಾನಂತೂ ನಂಬಲಾರನರೀ!” “ಹೀಗೆಂತ ನೆರ ಮನೆ ಪುಟ್ಟಮ್ಮನವರು ಹೇಳಿದರು....

ಹೊರ ಕೋಣೆಯಲ್ಲಿ ಕಾಲೂರಿ ಕೂತು ಬೀಡಿ ಕಟ್ಟುತ್ತಿದ್ದ ಸುಮಯ್ಯಾಗೆ ಕಣ್ಣು ಮತ್ತು ಕಿವಿಯ ಸುತ್ತಲೇ ಆಗಾಗ ಗುಂಯ್.. ಎನ್ನುತ್ತಾ ನೊಣವೊಂದು ಸರಿಸುಮಾರು ಹದಿನೈದು ನಿಮಿಷಗಳಿಂದ ಹಾರಾಡುತ್ತಾ ಕಿರಿಕಿರಿ ಮಾಡುತ್ತಿತ್ತು. ಹಿಡಿದು ಹೊಸಕಿ ಹಾಕಬೇಕೆಂದರೆ ಕೈಗೆ ಸಿಗದೆ ಮೈ ಪರಚಿಕೊಳ್ಳಬೇಕೆನ್ನ...

ಮೂಲ: ಗಾಯ್ ಡಿ ಮೊಪಾಸಾ ಗಗನಚುಂಬಿತವಾದ ಬೀಚ್‌ ವೃಕ್ಷಗಳೊಳಗಿಂದ ತಪ್ಪಿಸಿಕೊಂಡು ಸೂರ್ಯ ಕಿರಣಗಳು ಹೊಲಗಳ ಮೇಲೆ ಬೆಳಕನ್ನು ಕೆಡುವುವುದು ಬಲು ಅಪರೂಪ. ಬೆಳೆದ ಹುಲ್ಲನ್ನು ಕೊಯ್ದುದರಿಂದಲೂ, ದನಗಳೂ ಕಚ್ಚಿ ಕಚ್ಚಿ ತಿಂದುದರಿಂದಲೂ ನೆಲವು ಅಲ್ಲಲ್ಲಿ ತಗ್ಗು ದಿನ್ನೆಯಾಗಿ ಒಡೆದು ಕಾಣುತ್ತಿ...