ತೀರ್ಥಯಾತ್ರೆ

ಆ ಊರು ಈ ಊರು
ಯಾವುದ್ಯಾವುದೋ ಊರು
ದೇವರ ಊರೆಂದು ನಂಬಿ
ಬಂಧು ಮಿತ್ರ, ಕಳತ್ರರ ಕೂಡಿ
ಸಾವಿರ, ಸಾವಿರ ಖರ್ಚುಮಾಡಿ
ತೀರ್ಥಯಾತ್ರೆ ಮಾಡಿ
ಧನ್ಯತೆಯ ಭಾವವನು ತಳೆಯುವಿರಿ.

ವಿಚಾರ ಮಾಡಿ
ಅವನು ಎಲ್ಲೆಲ್ಲೂ, ಎಲ್ಲರಲ್ಲೂ, ಎಲ್ಲಾ ರೂಪ
ಆಕಾರದಲ್ಲಿರುವನು
ನಂಬಿಕೆ, ನಿಜವೋ ಸುಳ್ಳೋ ಹೇಳಿ!
ಅಲ್ಲಿರುವನು, ಅದೇ ರೂಪದವನು, ಅವನೇ ಇವನು!
ಎನ್ನುವುದು ಅಪಚಾರವಲ್ಲವೇನು?

ಕಳಚಿ! ಭ್ರಮೆ ಕಳಚಿ!
ದೈವದೂರಿನಲ್ಲೇನಾದರೂ ವಿಶೇಷ ಕಾಣುವಿರಾ?
ಅದೇ ಕಲ್ಲು ! ಅದೇ ಮಣ್ಣು !
ಅದೇ ಜನ ! ಅದೇ ಬಾಳುತಾನೆ ?

ತಮ್ಮಲ್ಲಿ, ತಾವಿರುವಲ್ಲಿ
ಕಂಡು ಆನಂದಿಸದವರ
ಎಲ್ಲಿಯೋ ಕಾಣಬಹುದೆಂಬ ಹುಂಬ ಜನರ
ಹತಾಶಾ ಪೂರ್ಣ ಖಾಲಿ ನಡೆತೆಯಲ್ಲವೇನು ?

ಇದ್ದಲ್ಲಿಯೇ ಇದ್ದು
ಏಕತಾನತೆಯಿಂದ ರೋಸಿಹೋಗಿ
ಬದಲಾವಣೆ ಬಯಸಿ
ಬಿಡುವು ಮಾಡಿಕೊಂಡು
ಒಂದೆರೆಡು ದಿನ ಹೊರಗೆ ಹೋಗಿ
ಸುತ್ತಾಡಿ

ಹೊಸ ಜನ, ಹೊಸ ಪರಿಸರ ದರ್ಶನದ
ಜೀವನೋತ್ಸಾಹ ಮರುಪೂರಣ
ಬೋಧ ಕ್ಷಣಗಳ
ಆನಂದದಾಯಕ ಪ್ರವಾಸವಲ್ಲವೇನು ?
*****

Leave a Reply

 Click this button or press Ctrl+G to toggle between Kannada and English

Your email address will not be published. Required fields are marked *

Previous post ಆಪದ್ಬಾಂಧವ ?
Next post ಗುದ್ದಲಿಗಿದೆಯೇ ಲೇಖನಿ ಶಕ್ತಿ ?

ಸಣ್ಣ ಕತೆ

  • ಎರಡು ಪರಿವಾರಗಳು

    ಇದು ಎರಡು ಪರಿವಾರದ ಕತೆ. ಒಂದು ಹಕ್ಕಿ ಪರಿವಾರ, ಇನ್ನೊಂದು ಮನುಷ್ಯ ಪರಿವಾರದ್ದು. ಒಂದು ಸುಂದರ ತೋಟ; ವಿಧವಿಧದ ಗಿಡ ಮರಗಳು; ಅವುಗಳ ಕವಲು ಬಿಟ್ಟ ರೆಂಬೆಗಳಲ್ಲಿ… Read more…

  • ಮೋಟರ ಮಹಮ್ಮದ

    ನಮ್ಮಂತಹ ಈಗಿನ ಜನಗಳಿಗೆ ಹೊಲ, ಮನೆ, ಪೂರ್ವಾರ್ಜಿತ ಆಸ್ತಿ ಪಾಸ್ತಿಗಳಲ್ಲಿ ಹೆಚ್ಚು ಆದರವಿಲ್ಲೆಂದು ನಮ್ಮ ಹಿರಿಯರು ಮೇಲಿಂದ ಮೇಲೆ ಏನನ್ನೋ ಒಟಗುಟ್ಟುತ್ತಿರುತ್ತಾರೆ. ನಾವಾದರೋ ಹಳ್ಳಿಯನ್ನು ಕಾಣದೆ ಎಷ್ಟೋ… Read more…

  • ಮೈಥಿಲೀ

    "ಹಾಗಿದ್ದರೆ, ಪಾಪವೆಂದರೇನು ಗುರುಗಳೇ?" ಕಣ್ಣು ಮುಚ್ಚಿ ಧ್ಯಾನಾಸಕ್ತರಾದ ಯೋಗೀಶ್ವರ ವಿದ್ಯಾರಣ್ಯರು ಕಣ್ತೆರೆಯಲಿಲ್ಲ. ಅಪ್ಪನ ಪ್ರಶ್ನೆಗೆ ಉತ್ತರ ಕೊಡಲಿಲ್ಲ. ತೇಜಪುಂಜವಾದ ಗಂಭೀರವಾದ ಮುಖದ ಮೇಲೊಂದು ಮುಗುಳುನಗೆ ಸುಳಿಯಿತು ಅಷ್ಟೇ!… Read more…

  • ಮಾದಿತನ

    ಮುಂಗೋಳಿ... ಕೂಗಿದ್ದೆ ತಡ, ಪೆರ್‍ಲಜ್ಜ ದಿಡಿಗ್ಗನೆದ್ದ. ರಾತ್ರಿಯೆಲ್ಲ... ವಂದೇ ಸಮ್ನೆ ಅಳುತ್ತಾ, ವುರೀಲೋ... ಬ್ಯಾಡೋ... ಯಂಬಂತೆ, ದೀಪದ ಬುಡ್ಡಿ, ನಡ್ಮುನೆ ಕಂಬ್ಕಂಟಿ, ಸಣ್ಗೆ ವುರಿತಿತ್ತು. ಯದೆವಳ್ಗೆ ಮಜ್ಗೆ… Read more…

  • ಎದಗೆ ಬಿದ್ದ ಕತೆ

    ೧೯೯೫. ನಾನಾಗ ಹುಬ್ಬಳ್ಳಿಯ ಕೇಂದ್ರೀಯ ಬಸ್ ನಿಲ್ದಾಣದಲ್ಲಿ ವಿಭಾಗೀಯ ಸಾರಿಗೆ ಅಧಿಕಾರಿಯಾಗಿ ಕರ್ತವ್ಯ ನಿರ್ವಹಿಸುತ್ತಿದ್ದೆ. ಇಲ್ಲಿ ೧೯೯೭ರ ವರೆಗೆ ನರಕ ಅನುಭವಿಸಿದೆ. ಪಾಪದ ಕೂಪವಿದು ಸ್ವರ್ಗ ನರಕ… Read more…

cheap jordans|wholesale air max|wholesale jordans|wholesale jewelry|wholesale jerseys